
CHITRADURGA NEWS | 01 SEPTEMBER 2026
ಚಿತ್ರದುರ್ಗ: ವಚನ ಪರಂಪರೆಯ ಶರಣರು ಸಾಹಿತ್ಯ ಹಾಗೂ ಸಮಾಜಕ್ಕೆ ಗೌರವ ತಂದುಕೊಟ್ಟಿದ್ದಾರೆ. ವಚನಗಳು ಕೇವಲ ಭೂತಕಾಲದ ಉಪಮೆ ಮತ್ತು ನೆನಪುಗಳಲ್ಲ. ಅವು ವರ್ತಮಾನದ ಅಗತ್ಯಗಳನ್ನು ಮೈಗೂಡಿಸಿಕೊಂಡ ಜೀವಪರ ಸಾಹಿತ್ಯವಾಗಿದ್ದು, ಬಡತನಮುಕ್ತ ಸಮಾಜ ನಿರ್ಮಾಣಕ್ಕೆ ದಾರಿದೀಪವಾಗಬೇಕು ಎಂದು ಭೋವಿ ಗುರುಪೀಠ ಸಿದ್ಧರಾಮೇಶ್ವರ ಸಂಸ್ಥಾನದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಕರೆ ನೀಡಿದರು.
ಇದನ್ನೂ ಓದಿ: ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್ | ಹಾಲಿ ಡಿಸಿ ಟಿ.ವೆಂಕಟೇಶ್ ವರ್ಗಾವಣೆ
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಬೆಂಗಳೂರು ಹಾಗೂ ಶಸಾಪ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಇಂದಿನ ಯುವಕರು ವಿಜ್ಞಾನದ ಹೆಸರಿನಲ್ಲಿ ಪ್ರಶ್ನೆಗಳನ್ನು ಕೇಳುತ್ತಾರೆ. ಆದ್ದರಿಂದ ಧರ್ಮದ ವಿಚಾರಗಳನ್ನು ಯುವಕರು ಒಪ್ಪಿಕೊಳ್ಳುವಂತಾಗಲು ಧರ್ಮದಲ್ಲಿ ವೈಜ್ಞಾನಿಕತೆ ಇರಬೇಕು. ವೈಜ್ಞಾನಿಕತೆಯನ್ನು ಒಳಗೊಂಡಿರುವ ಧರ್ಮ ಮಾತ್ರ ಭವಿಷ್ಯದಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯ ಎಂದು ಹೇಳಿದರು.
ದತ್ತಿ ಪ್ರಶಸ್ತಿಗಳಲ್ಲಿ ಶರಣತತ್ವದ ವ್ಯಕ್ತಿತ್ವ ಹಾಗೂ ಘನತೆ ಅಡಕವಾಗಿರುತ್ತದೆ. ಅಂತಹ ಮಹನೀಯರ ಹೆಸರಿನಲ್ಲಿ ನೀಡುವ ಪ್ರಶಸ್ತಿಗಳಿಗೆ ಸದಾ ಮೌಲ್ಯಯುತ ಗೌರವ ದೊರೆಯುತ್ತದೆ ಎಂದರು.
ಇದನ್ನೂ ಓದಿ: ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
ದತ್ತಿ ದಾಸೋಹಿ ನಾಡೋಜ ಶ್ರೀ ಗೊ.ರು. ಚನ್ನಬಸಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರೂ ಬಡತನ, ಹಸಿವು ಹಾಗೂ ಅಪಮಾನಗಳನ್ನು ಸಹಿಸಿಕೊಂಡು ಸುಂದರ ಬದುಕನ್ನು ಕಟ್ಟಿಕೊಳ್ಳಬೇಕು. ದೊರೆತ ಅವಕಾಶಗಳನ್ನು ಸಮಾಜಮುಖಿ ಚಿಂತನೆಗೆ ಬಳಸಿಕೊಂಡು ಸಾಂಸ್ಕೃತಿಕ ಶ್ರೀಮಂತಿಕೆಗೆ ಕಾರಣರಾಗಬೇಕು ಎಂದರು.
ಮುರುಘಾಮಠದ ಆಡಳಿತ ಮಂಡಳಿ ಸದಸ್ಯ ಡಾ. ಬಸವಕುಮಾರ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿದ್ದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಅಧ್ಯಕ್ಷತೆ ವಹಿಸಿ ಶರಣ ಸಾಹಿತ್ಯದ ಶ್ರೀಮಂತ ಪರಂಪರೆಯನ್ನು ಸ್ಮರಿಸಿದರು. ಸಾಹಿತಿ ಹಾಗೂ ಶಿಕ್ಷಣತಜ್ಞ ಪ್ರೊ. ಕೆ.ಇ. ರಾಧಾಕೃಷ್ಣ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಲೇಖಕಿ ಹಾಗೂ ಕವಯತ್ರಿ ಡಾ. ಜಯಾ ರಾಜಶೇಖರ್ ಅವರಿಗೆ ಗೊರುಚ ಶರಣ ದತ್ತಿ ಪ್ರಶಸ್ತಿ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಪ್ರಥಮ ಕುಲಪತಿ ಹಾಗೂ ಮೈಸೂರು ವಿಶ್ವವಿದ್ಯಾಲಯದ ಜಾನಪದ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಡಾ. ಅಂಬಳಕಿ ಹಿರಿಯಣ್ಣ ಅವರಿಗೆ ಗೊರುಚ ಜಾನಪದ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇದನ್ನೂ ಓದಿ: ಶೀಘ್ರದಲ್ಲೇ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಬರಪೀಡಿತ ಪಟ್ಟಿಗೆ | ಸಚಿವ ರಘುಮೂರ್ತಿ
ರಂಗಭೂಮಿ ನಟ, ನಿರ್ದೇಶಕ, ಧಾರಾವಾಹಿ ಕಲಾವಿದ ಹಾಗೂ ಕೆಎಎಸ್ ಅಧಿಕಾರಿ ಡಾ. ಸಂಗಮೇಶ್ ಉಪಾಸೆ ಅವರ ನೀರಕಂಡಲ್ಲಿ ಮುಳುಗುವರಯ್ಯ ಕೃತಿಗೆ ಗೊರುಚ ಶರಣ ಸಾಹಿತ್ಯ ಗ್ರಂಥ ಪ್ರಶಸ್ತಿ, ಗಾಯಕಿ ಹಾಗೂ ಲೇಖಕಿ ಡಾ. ಎಂ. ಕೆಂಪಮ್ಮ ಕಾರ್ಕಹಳ್ಳಿ ಅವರ ಮಂಡ್ಯ ಜಿಲ್ಲೆಯ ಆಚರಣಾತ್ಮಕ ಜಾನಪದ ಕೃತಿಗೆ ಗೊರುಚ ಜನಪದ ಸಾಹಿತ್ಯ ಗ್ರಂಥ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ, ದಾವಣಗೆರೆ ಕಸಾಪ ಜಿಲ್ಲಾಧ್ಯಕ್ಷ ವಾಮದೇವಪ್ಪ, ದಾವಣಗೆರೆ ಶಸಾಪ ಜಿಲ್ಲಾಧ್ಯಕ್ಷ ಎಚ್.ಕೆ. ಲಿಂಗರಾಜು, ಡಾ. ಪಾಲಾಕ್ಷಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ: ಯುವ ಹವಾಮಾನ ಕಾರ್ಯ ನಿಧಿಗೆ ಅರ್ಜಿ ಆಹ್ವಾನ
ಉಮೇಶ್ ಪತ್ತಾರ ವಚನ ಪ್ರಾರ್ಥನೆ ನೆರವೇರಿಸಿದರು. ಶಸಾಪ ರಾಜ್ಯ ಉಪಾಧ್ಯಕ್ಷ ಕೆ.ಎಂ. ವೀರೇಶ್ ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಹುರಳಿ ಎಂ. ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು. ಕೆ.ಪಿ.ಎಂ. ಗಣೇಶಯ್ಯ ವಂದಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

