By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕೈ ಚೀಲದಲ್ಲಿ ₹ 3.55 ಕೋಟಿ ಮೌಲ್ಯದ ಚಿನ್ನ ಪತ್ತೆ | ಹೇಳಿದ್ರು ಶೇಂಗಾ ಕಥೆ…
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕೈ ಚೀಲದಲ್ಲಿ ₹ 3.55 ಕೋಟಿ ಮೌಲ್ಯದ ಚಿನ್ನ ಪತ್ತೆ | ಹೇಳಿದ್ರು ಶೇಂಗಾ ಕಥೆ…

ಮುಖ್ಯ ಸುದ್ದಿ

ಕೈ ಚೀಲದಲ್ಲಿ ₹ 3.55 ಕೋಟಿ ಮೌಲ್ಯದ ಚಿನ್ನ ಪತ್ತೆ | ಹೇಳಿದ್ರು ಶೇಂಗಾ ಕಥೆ…

News Desk Chitradurga News
Last updated: 28 March 2024 08:38
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

‌CHITRADURGA NEWS | 28 MARCH 2024
ಚಿತ್ರದುರ್ಗ: ಸಾಮಾನ್ಯವಾಗಿ ಕೈ ಚೀಲದಲ್ಲಿ ತರಕಾರಿ,ಹಾಲು, ಹೂವು ತೆಗೆದುಕೊಂಡು ಹೋಗುವುದನ್ನು ನೋಡಿದ್ದೇವೆ. ಆದರೆ ಕೋಟ್ಯಾಂತರ ಮೌಲ್ಯದ ಚಿನ್ನಾಭರಣವನ್ನು ತೆಗದುಕೊಂಡು ಹೋಗುವುದನ್ನು ಎಲ್ಲಿಯಾದರೂ ಕೇಳಿದ್ದೀರಾ ?..ಇಂತಹ ಒಂದು ಘಟನೆಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಾಕ್ಷಿಯಾಗಿದೆ.

ಚಿಕ್ಕ ಚಿಕ್ಕ ಪ್ಲಾಸ್ಸಿಕ್‌ ಕವರ್‌, ಮನೆಯ ಅಡುಗೆ ಮನೆಯಲ್ಲಿ ಉಪ್ಪು, ಸಂಬಾರ್‌ ಪುಡಿ ಹಾಕುವಂತಾ ಡಬ್ಬಿಗಳಲ್ಲಿ ಚಿನ್ನದ ಸರ, ಕಿವಿಯೋಲೆ ಹೀಗೆ ಬಂಗಾರದ ಆಭರಣಗಳನ್ನು ಹಾಕಿಕೊಂಡು ಚಿಕ್ಕ ಸುಳಿವು ಸಿಗದಂತೆ ಹಿರಿಯೂರು ನಗರದಲ್ಲಿ ಓಡಾಡುತ್ತಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಅನುಮಾನಸ್ಪದವಾಗಿ ಚೀಲವಿಡಿದು ಓಡಾಡುತ್ತಿದ್ದವರನ್ನು ವಿಚಾರಿಸಿ ಬ್ಯಾಗ್ ಅನ್ನು ಪರಿಶೀಲಿಸಿದ ಪೊಲೀಸರು ಬ್ಯಾಗ್‌ನಲ್ಲಿ ಚಿನ್ನ ನೋಡಿ ಬೆಚ್ಚಿದ್ದಾರೆ.

ಕ್ಲಿಕ್ ಮಾಡಿ ಓದಿ: ಎರಡು ದಿನ ನಿದ್ರಿಸದ ನಾಯಕನಹಟ್ಟಿ | ತಿಪ್ಪೇರುದ್ರಸ್ವಾಮಿ ಮಡಿಲಲ್ಲಿ ಭಜನೆ ವೈಭವ | ಬೆಳದಿಂಗಳ ಹುಣ್ಣಿಮೆ ಸಾಥ್‌

ಬಳಿಕ ವಿಚಾರಿಸಿದಾಗ ಸೂಕ್ತ ದಾಖಲೆಗಳು ಇಲ್ಲದಿರುವುದು ಖಚಿತವಾಗಿದೆ. ಕೂಡಲೇ ಬ್ಯಾಗ್‌ನಲ್ಲಿದ್ದ 5ಕೆಜಿ, 250ಗ್ರಾಂ,18 ಕ್ಯಾರೆಟ್ ಚಿನ್ನವನ್ನು ಪೊಲೀಸ್‌ ಮತ್ತು ಎಫ್‌ಎಸ್ಟಿ ತಂಡದ ಅಧಿಕಾರಿಗಳು ಬುಧವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. 3.55 ಕೋಟಿಗೂ ಹೆಚ್ಚಿನ ಮೌಲ್ಯ ಎಂದು ಅಂದಾಜಿಸಲಾಗಿದೆ.

ದಾವಣಗೆರೆಯಿಂದ ವರ್ಧಮಾನ ಜೂವೆಲ್ಲರಿಯಿಂದ ಹಿರಿಯೂರಿನ ರಂಗನಾಥ ಜೂಯೆಲರ್ಸ್ ಅಂಗಡಿಗೆ ಕೊಡಲು ತಂದಿದ್ದರು ಎನ್ನಲಾಗಿದೆ. ಆದರೆ ಸೂಕ್ತ ಅಧಿಕೃತ ದಾಖಲೆಗಳಿಲ್ಲ. ಆದ್ದರಿಂದ ಒಡವೆಗಳನ್ನು ಪೊಲೀಸರು ವಶಪಡಿಸಿಕೊಂಡು ತಾಲೂಕು‌ ಖಜಾನೆಗೆ ಒಪ್ಪಿಸಿದ್ದಾರೆ.

ಶೇಂಗಾ ಕಥೆ: ತಾಲ್ಲೂಕಿನ ಮಸ್ಕಲ್ ಬಳಿ ಎಫ್‌ಎಸ್ಟಿ ತಂಡದ ಅಧಿಕಾರಿಗಳು ಇಚರ್ ವಾಹನ ತಡೆದು ಪರಿಶೀಲಿಸಿದಾಗ ಅದರಲ್ಲಿ ₹ 6.80 ಸಾವಿರ ನಗದು ಸಿಕ್ಕಿದೆ.

ಆಂಧ್ರ ಪ್ರದೇಶದ ನಂದ್ಯಾಲದಿಂದ ಶೇಂಗಾ ಮಾರಾಟ ಮಾಡಲು ಬಬ್ಬೂರಿಗೆ ಬಂದಿದ್ದು, ಶೇಂಗಾ ಮಾರಾಟ ಮಾಡಿದಾಗ ಬಂದಿರುವ ಹಣ ಎಂದು‌ ಹೇಳಲಾಗುತ್ತಿದೆ. ಆದರೆ ಇದಕ್ಕೂ ಅಧಿಕೃತ ದಾಖಲೆ ಇಲ್ಲವಾಗಿದೆ. ಪೊಲೀಸರು ₹ 6.80 ಲಕ್ಷ ನಗದನ್ನು ವಶಪಡಿಸಿಕೊಂಡು ಹಿರಿಯೂರಿನ ಖಜಾನೆಗೆ ಒಪ್ಪಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: ಕುಡಿಯುವ ನೀರು ಪ್ರಕರಣ| ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಮಾನತು

ಎರಡು ಪ್ರಕರಣದ ವರದಿಯನ್ನು ಜಿಲ್ಲಾ ಪಂಚಾಯಿತಿ ಸಿಇಓ ಅವರಿಗೆ ನೀಡಿದ್ದಾರೆ. ಚಿನ್ನದ ಒಡವೆಗಳ ಬಗ್ಗೆ ಪರಿಶೀಲನೆ ನಡೆಸಿದ್ದು, ಐಟಿ‌ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ಎರಡು ಪ್ರಕರಣಗಳು ಹಿರಿಯೂರು ನಗರ ಠಾಣೆಯಲ್ಲಿ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Gold discoveryIT officerPoliceReportUnauthorizedಅನಧಿಕೃತಐಟಿ‌ ಅಧಿಕಾರಿಚಿನ್ನ ಪತ್ತೆಪೊಲೀಸ್ವರದಿ
Share This Article
Facebook Email Print
Previous Article ಏಪ್ರಿಲ್ 01 ರಿಂದ 30 ರವರೆಗೆ ಕಾಲು ಬಾಯಿ ಲಸಿಕಾ ಅಭಿಯಾನ ದನ, ಎಮ್ಮೆಗಳಿಗೆ ಉಚಿತ ಲಸಿಕೆ
Next Article ಕೈ ತಪ್ಪಿದ ಬಿಜೆಪಿ ಟಿಕೆಟ್ | ಪ್ರಬಲ ಆಕಾಂಕ್ಷಿ ರಘುಚಂದನ್‌ ಅಸಮಾಧಾನ | ನಾಳೆ ಬೆಂಬಲಿಗರ ಸಭೆ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up