Connect with us

ಫಾರ್ಮಸಿ ಕಲಿತವರಿಗೆ ಸುವರ್ಣಾವಕಾಶ | ಕೂಡಲೇ ಅರ್ಜಿ ಸಲ್ಲಿಸಿ

ಮುಖ್ಯ ಸುದ್ದಿ

ಫಾರ್ಮಸಿ ಕಲಿತವರಿಗೆ ಸುವರ್ಣಾವಕಾಶ | ಕೂಡಲೇ ಅರ್ಜಿ ಸಲ್ಲಿಸಿ

CHITRADURGA NEWS | 03 FEBRUARY 2024
ಚಿತ್ರದುರ್ಗ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಜನೌಷಧಿ ಕೇಂದ್ರ ತೆರೆಯಲು ತೀರ್ಮಾನಿಸಲಾಗಿದ್ದು,
ಜನೌಷಧಿ ಕೇಂದ್ರ ನಡೆಸಲು “ಡಿ”ಫಾರ್ಮ್, “ಬಿ”ಫಾರ್ಮ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ ಮತ್ತು ಹೋಬಳಿ ಕೇಂದ್ರಗಳಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಪ್ರಧಾನ ಮಂತ್ರಿ ಜನೌಷಧ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಕೇಂದ್ರಗಳನ್ನು ನಡೆಸಲು ‘ಡಿ’ ಫಾರ್ಮ್, ‘ಬಿ’ ಫಾರ್ಮ್‌ ಪದವೀಧರರು ಬೇಕಾಗಿದ್ದಾರೆ. ನಂತರದ 15 ದಿನಗಳೊಳಗೆ ಅರ್ಜಿ ಸಲ್ಲಿಸಬೇಕು. ಪ್ರತಿ ತಿಂಗಳಿಗೆ ಸಂಭಾವನೆ 10,000-15,000 ರೂ.ನೀಡಲಾಗುತ್ತದೆ.

ಇದನ್ನೂ ಓದಿ: ಮುಂದೆಂದೂ ಬಾಗೂರಿನ ಚೆನ್ನಕೇಶವ ಸ್ವಾಮಿ ದೇವಾಲಯಕ್ಕೆ ಹೋಗಲ್ಲ | ಹೊಸದುರ್ಗ ಕನಕಧಾಮದ ಈಶ್ವರಾನಂದಪುರಿ ಸ್ವಾಮೀಜಿ

ಮುಖ್ಯಕಾರ್ಯನಿರ್ವಾಹಕರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಹೊಸದುರ್ಗ ರೋಡ್ , ಹೊಸದುರ್ಗ ತಾ|| ಮೊ. 9483653725, ಆದಿವಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಹಿರಿಯೂರು ಮೊ.9242475799, ಆರನಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಹಿರಿಯೂರು ಮೊ.9901762378, ರಾಂಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ,ಮೊಳಕಾಲ್ಮೂರುಮೊ. 7829417346, ತಳಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಚಳ್ಳಕೆರೆ, ಮೊ. 9945669740, ಚಿಕ್ಕಜಾಜೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ನಿ, ಹೊಳಲ್ಕೆರೆ, ಮೊ. 9036204976 ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಛೇರಿ, ಚಿತ್ರದುರ್ಗ ಉಪವಿಭಾಗ, ಚಿತ್ರದುರ್ಗ ದೂರವಾಣಿ ಸಂಖ್ಯೆ 9945979177, 7829603638 ಗೆ ಸಂಪರ್ಕಿಸಬಹುದು ಎಂದು ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version