By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಖಾಸಗಿ ಸಾರಿಗೆ ಸಿಬ್ಬಂದಿಗೆ ಗುಡ್‍ನ್ಯೂಸ್ | ಡ್ರೈವರ್, ಕ್ಲೀನರ್, ಕಂಡಕ್ಟರುಗಳಿಗೆ ವಿಮೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಖಾಸಗಿ ಸಾರಿಗೆ ಸಿಬ್ಬಂದಿಗೆ ಗುಡ್‍ನ್ಯೂಸ್ | ಡ್ರೈವರ್, ಕ್ಲೀನರ್, ಕಂಡಕ್ಟರುಗಳಿಗೆ ವಿಮೆ

ಮುಖ್ಯ ಸುದ್ದಿ

ಖಾಸಗಿ ಸಾರಿಗೆ ಸಿಬ್ಬಂದಿಗೆ ಗುಡ್‍ನ್ಯೂಸ್ | ಡ್ರೈವರ್, ಕ್ಲೀನರ್, ಕಂಡಕ್ಟರುಗಳಿಗೆ ವಿಮೆ

chitradurganews.com
Last updated: 21 October 2023 20:56
chitradurganews.com
2 years ago
Share
ಖಾಸಗಿ ಸಾರಿಗೆ
ಖಾಸಗಿ ಸಾರಿಗೆ
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಕರ್ನಾಟಕ ರಾಜ್ಯ ಖಾಸಗೀ ವಾಣಿಜ್ಯ ಸಾರಿಗೆ ವಾಹನ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ಜಾರಿಯಾಗಿದ್ದು, ಖಾಸಗಿ ಬಸ್ಸುಗಳ ಚಾಲಕರು, ಕ್ಲೀನರ್‍ಗಳು ಹಾಗೂ ನಿರ್ವಾಹಕರು ನೊಂದಾಯಿಸಿಕೊಳ್ಳಲು ಕಾರ್ಮಿಕ ಇಲಾಖೆ ತಿಳಿಸಿದೆ.

ಈ ಯೋಜನೆಯಡಿ ನೋಂದಾಯಿಸಿಕೊಳ್ಳಲು ಸಾರಿಗೆ ಇಲಾಖೆಯಿಂದ ಊರ್ಜಿತ ಚಾಲನಾ ಪರವಾನಗಿ ಪಡೆದಿರಬೇಕು.

ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್‍ಗಳು ಅಪಘಾತಗಳಿಗೆ ತುತ್ತಾಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಾಗಿರುವುದು, ಅಪಘಾತಕ್ಕೀಡಾದಾಗ ಮರಣಕ್ಕೆ ತುತ್ತಾಗುವ, ಶಾಶ್ವತ ದುರ್ಬಲತೆ ಅಥವಾ ತಾತ್ಕಾಲಿಕ ದುರ್ಬಲತೆ ಹೊಂದಿದ ಸಂದರ್ಭದಲ್ಲಿ ಅವರ ದುಡಿಮೆಯನ್ನೇ ಅವಲಂಭಿಸಿರುವ ಕುಟುಂಬವು ಆರ್ಥಿಕ ಹಾಗೂ ಸಾಮಾಜಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತದೆ.

ಇಂತಹ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಅಪಘಾತ ಪರಿಹಾರ ಸೌಲಭ್ಯ ಒದಗಿಸುವ ಮೂಲಕ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸುವ ಸದುದ್ದೇಶದಿಂದ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್‍ಗಳು ಚಿತ್ರದುರ್ಗದ ಕಾರ್ಮಿಕ ಅಧಿಕಾರಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಮುರುಘಾ ಮಠದ ಪ್ರಕರಣ | ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ ಎಚ್.ಏಕಾಂತಯ್ಯ

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 08194-231394 ಗೆ ಸಂಪರ್ಕಿಸಬಹುದಾಗಿದೆ ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

ನೊಂದಾಯಿಸಲು ಕೆಲ ಷರತ್ತುಗಳಿವೆ:

  • ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ.
  • ಯೋಜನೆಯ ಖಾಸಗೀ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು ನಿರ್ವಾಹಕರು ಹಾಗೂ ಕ್ಲೀನರ್‍ಗಳಿಗೆ ಅನ್ವಯಿಸುತ್ತದೆ.
  • ವಯೋಮಿತಿ 20 ರಿಂದ 70 ವರ್ಷಗಳು.
  • ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲು ಸಹ ಲಭ್ಯವಾಗುತ್ತದೆ.
  • ಚಾಲಕರು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಿಂದ ವಾಣಿಜ್ಯ ವಾಹನ ಚಾಲಾಯಿಸಲು ಊರ್ಜಿತ ಚಾಲನಾ ಪರವಾನಿಗೆ ಹೊಂದಿರುವುದು ಕಡ್ಡಾಯ.
  • ಚಾಲಕರು ಮಂಡಳಿಯಲ್ಲಿ ಯೋಜನೆಯಡಿ ಪ್ರತ್ಯೇಕವಾಗಿ ನೋಂದಣಿ ಮಾಡಿಸುವ ಅವಶ್ಯಕತೆ ಇರುವುದಿಲ್ಲ.
  • ನಿರ್ವಾಹಕರು ಹಾಗೂ ಕ್ಲೀನರ್‍ಗಳು ಮಂಡಳಿಯ ನಿಯಮಾನುಸಾರ ಕಾರ್ಮಿಕ ಇಲಾಖೆಯಲ್ಲಿ ಯೋಜನೆಯಡಿ ಫಲಾನುಭವಿಯಾಗಿ ನೋಂದಣಿ ಮಾಡಿಸಿಕೊಳ್ಳಬೇಕು.

ನೊಂದಣಿಯಿಂದ ಸಿಗುವ ಸೌಲಭ್ಯಗಳೇನು:

  • ಅಪಘಾತದಿಂದ ಚಾಲಕರು ನಿರ್ವಾಹಕರು ಮತ್ತು ಕ್ಲೀನರ್ (ಅoಟಿಜuಛಿಣoಡಿ & ಅಟeಚಿಟಿeಡಿ) ಗಳು ಮರಣ ಹೊಂದಿದ್ದಲ್ಲಿ ಅವರ ನಾಮನಿರ್ದೇಶಿತರಿಗೆ 5 ಲಕ್ಷ ರೂ. ಪರಿಹಾರ ದೊರೆಯುತ್ತದೆ.
  • ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ ಗರಿಷ್ಠ 2 ಲಕ್ಷದವರೆಗೆ ಪರಿಹಾರ.
  • ಅಪಘಾತದಿಂದ ತಾತ್ಕಾಲಿಕ ದುರ್ಬಲತೆ ಹೊಂದಿದಾಗ ಅಪಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ ಗರಿಷ್ಠ 50 ಸಾವಿರದವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನ ಪಾವತಿಸಲಾಗುವುದು.
  • 15 ದಿನಗಳಿಗಿಂತ ಹೆಚ್ಚು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದಲ್ಲಿ ಗರಿಷ್ಠ 1 ಲಕ್ಷದವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನು ಪಾವತಿಸಲಾಗುವುದು.

ಕ್ಲೈಮ್ ಅರ್ಜಿ ಸಲ್ಲಿಸುವ ವಿಧಾನ:
ಪರಿಹಾರ ಮೊತ್ತವನ್ನು ಪಡೆಯಲು ಅಪಘಾತ ಸಂಭವಿಸಿದ ಒಂದು ವರ್ಷದೊಳಗೆ ಮಂಡಳಿಗೆ ಫಲಾನುಭವಿ/ನಾಮ ನಿರ್ದೇಶಿತರು ಅರ್ಜಿಯನ್ನು ಸಲ್ಲಿಸಬೇಕು.

ಸ್ವೀಕರಿಸಿದ ಕ್ಲೈಮ್ ಅರ್ಜಿಯ ದಾಖಲೆಗಳನ್ನು ಪರಿಶೀಲಿಸಿ ಅರ್ಹರಿದ್ದಲ್ಲಿ ಪರಿಹಾರದ ಮೊತ್ತವನ್ನು ಅರ್ಜಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು. ನಿರ್ವಾಹಕರು ಮತ್ತು ಕ್ಲೀನರ್ (ಅoಟಿಜuಛಿಣoಡಿ & ಅಟeಚಿಟಿeಡಿ) ಗಳು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡು ಅಪಘಾತ ಪರಿಹಾರ ಪಡೆದುಕೊಳ್ಳಬಹುದಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:accidentChitradurgaChitradurga UpdatesCleanerCompensation InsuranceConductorDriverGood NewsKannada Latest NewsKarnataka NewsPrivate BusTransportಅಪಘಾತಕಂಡಕ್ಟರ್ಕನ್ನಡ ಲೇಟೆಸ್ಟ್ ನ್ಯೂಸ್ಕರ್ನಾಟಕ ನ್ಯೂಸ್ಕ್ಲೀನರ್ಖಾಸಗಿ ಬಸ್ಗುಡ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಡ್ರೈವರ್ಪರಿಹಾರ ವಿಮೆಸಾರಿಗೆ
Share This Article
Facebook Email Print
Previous Article ಪೊಲೀಸ್ ಹುತಾತ್ಮರ ದಿನಾಚರಣೆ ಪೊಲೀಸ್ ಹುತಾತ್ಮರ ದಿನಾಚರಣೆ | ಪೊಲೀಸ್ ಕರ್ತವ್ಯ ನಿಷ್ಠೆಯಿಂದ ನೆಮ್ಮದಿಯ ಜೀವನ | ಜಿಲ್ಲಾ ನ್ಯಾಯಾಧೀಶೆ ಬಿ.ಎಸ್.ರೇಖಾ
Next Article ಡಾ.ಸೈಯದ್ ನಾಸೀರ್ ಹುಸೇನ್ ಡಾ.ಸೈಯದ್ ನಾಸೀರ್ ಹುಸೇನ್ ವ್ಯಕ್ತಿಚಿತ್ರ | ಇಂದು ಚಿತ್ರದುರ್ಗದಲ್ಲಿ ಸನ್ಮಾನ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up