By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Government employees: ಸರ್ಕಾರಿ ನೌಕರರಿಂದ ಮುಖ್ಯಮಂತ್ರಿಗೆ ಸನ್ಮಾನ | ದಿನಾಂಕ ಘೋಷಿಸಿದ ಸಿ.ಎಸ್‌.ಷಡಾಕ್ಷರಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Government employees: ಸರ್ಕಾರಿ ನೌಕರರಿಂದ ಮುಖ್ಯಮಂತ್ರಿಗೆ ಸನ್ಮಾನ | ದಿನಾಂಕ ಘೋಷಿಸಿದ ಸಿ.ಎಸ್‌.ಷಡಾಕ್ಷರಿ

ಮುಖ್ಯ ಸುದ್ದಿ

Government employees: ಸರ್ಕಾರಿ ನೌಕರರಿಂದ ಮುಖ್ಯಮಂತ್ರಿಗೆ ಸನ್ಮಾನ | ದಿನಾಂಕ ಘೋಷಿಸಿದ ಸಿ.ಎಸ್‌.ಷಡಾಕ್ಷರಿ

News Desk Chitradurga News
Last updated: 12 August 2024 19:47
News Desk Chitradurga News
11 months ago
Share
GOVT EMPLYESS
ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸರ್ವ ಸದಸ್ಯರ ಸಭೆ, ನೌಕರರಿಗೆ ನಾಯಕತ್ವ ಗುಣಗಳು ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಗಾರ, ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಉದ್ಘಾಟಿಸಿದರು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 12 AUGUST 2024
ಚಿತ್ರದುರ್ಗ: ರಾಜ್ಯದಲ್ಲಿ ನೌಕರರು (Government employees) ಅತ್ಯಂತ ಸಂತೋಷ, ನೆಮ್ಮದಿಯಿಂದ ಜೀವನ ಸಾಗಿಸುವಂತಹ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಕಾರಣವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗಸ್ಟ್‌17ರಂದು ಸಂಘದ ವತಿಯಿಂದ ಸನ್ಮಾನಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ತಿಳಿಸಿದರು.

ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸರ್ವ ಸದಸ್ಯರ ಸಭೆ, ನೌಕರರಿಗೆ ನಾಯಕತ್ವ ಗುಣಗಳು ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಗಾರ, ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಘಟನೆಯ ಮೂಲಕ ನೌಕರರ ಸಮಸ್ಯೆಗಳನ್ನು ಸಂಪೂರ್ಣವಾಗಿ ಬಗೆಹರಿಸಲು ಸಾಧ್ಯವಿಲ್ಲವಾದರೂ, ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ಅದರಂತೆಯೇ ಸಂಘದ ಮೂಲಕ ಸರ್ಕಾರಕ್ಕೆ ಶಿಫಾರಸ್ಸು ಮಾಡಿ, ಏಳನೇ ವೇತನ ಆಯೋಗ ಜಾರಿಗೆ ತರುವುದರ ಜೊತೆಗೆ ಈವರೆಗೆ ಒಟ್ಟು 25 ಸರ್ಕಾರಿ ಆದೇಶಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘಟನೆಗೆ 104 ವರ್ಷಗಳ ಇತಿಹಾಸವಿದೆ. ನಮ್ಮಂತೆಯೇ ನಮ್ಮ ಸುತ್ತಲಿನ ವ್ಯವಸ್ಥೆಯೂ ಕೂಡ ಸುಂದರವಾಗಿ ಕಾಣಬೇಕಾದರೆ, ವ್ಯವಸ್ಥೆಯಲ್ಲಿ ಅಚ್ಚುಕಟ್ಟಾಗಿ ಕೆಲಸ ಮಾಡಬೇಕು. ಒಂದು ಸರ್ಕಾರಿ ಕಚೇರಿಗಿಂತ ವಿಭಿನ್ನವಾಗಿ, ವಿಶೇಷವಾಗಿರುವಂತಹ ಸಮೃದ್ಧಿಯಾದ ಸಂಘ ದೇಶದಲ್ಲಿ ಇದೆ ಎಂದರೆ ಅದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ. ರಾಜ್ಯದ ಸಂಘಟನೆಗಳ ಪೈಕಿ ಹೆಚ್ಚು ಪರಿಣಾಮಕಾರಿಯಾದ ಸಂಘಟನೆಯಾಗಿದೆ. ಇದು ಯಾವುದೇ ಪಕ್ಷಕ್ಕೆ, ಧರ್ಮಕ್ಕೆ, ಜಾತಿಗೆ ಅಂಟಿಕೊಳ್ಳದೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಶಾಲೆಗಳಲ್ಲಿ ಎನ್‌ಪಿಇಪಿ ಸಹಪಠ್ಯ ಸ್ಪರ್ಧೆ | ಪೋಸ್ಟರ್‌ ಅನಾವರಣ

ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಸಂಘದಿಂದ ಗುರುತಿಸಿ, ಗೌರವಿಸುವಂತಹ ಕಾರ್ಯವನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಮಾಡುತ್ತಿದ್ದು, ನೌಕರರ ಮಕ್ಕಳು ಕೂಡ ಅವಕಾಶಗಳನ್ನು ಬಳಸಿಕೊಂಡು ಸತ್ಪ್ರಜೆಗಳಾಗಿ ನಾಡಿಗೆ ಕೀರ್ತಿ ತರಬೇಕು. ಸಂಘದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸುವ ಕಾರ್ಯ ಮಾಡಲಾಗುತ್ತಿದ ಎಂದರು.

ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭೆಯ ಹಿಂದಿರುವಂತಹ ಪೋಷಕರು, ತಮ್ಮ ಜೀವನದ ತೊಡಕುಗಳನ್ನು ನಿಭಾಯಿಸಿಕೊಂಡು ಉತ್ತಮವಾದ ಜೀವನ ಕಟ್ಟಿಕೊಟ್ಟಿದ್ದಾರೆ. ಅವರನ್ನು ಯಾವುದೋ ವೃದ್ದಾಶ್ರಮಕ್ಕೆ ದೂಡದೆ, ಉತ್ತಮ ಸಂಸ್ಕಾರವಂತರಾಗಿ, ತಂದೆ-ತಾಯಿಯನ್ನು, ಗುರು-ಹಿರಿಯರನ್ನು ಗೌರವದಿಂದ ಕಾಣಬೇಕು. ಮುಂದಿನ ದಿನಗಳಲ್ಲಿ ಯಾರ ಮೇಲೆಯೂ ಅವಲಬಿತರಾಗದೆ, ಸ್ವಾಭಿಮಾನದಿಂದ ಜೀವನ ರೂಪಿಸಿಕೊಂಡು, ಪೋಷಕರಿಗೆ, ಜಿಲ್ಲೆಗೆ, ತಾಲ್ಲೂಕಿಗೆ ಗೌರವ ತರುವಂತಹ ಕಾರ್ಯ ಮಾಡಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ವ್ಯಕ್ತಿತ್ವ ಎಂಬುದು ತುಂಬಾ ಮುಖ್ಯ, ಆದರೆ ನಾವು ವಿಕಸನದ ಕಡೆಗೆ ಅಷ್ಟೇ ಯೋಚನೆ ಮಾಡುತ್ತಿದ್ದೇವೆ. ಸರ್ಕಾರಿ ನೌಕರರು ಮತ್ತೊಬ್ಬರಿಗೆ ಮಾದರಿಯಾಗಿರಬೇಕು. ನಮ್ಮ ನಡೆ, ನುಡಿಗಳಿಂದ ನಮ್ಮ ವ್ಯಕ್ತಿತ್ವ ಇಮ್ಮಡಿಗೊಳ್ಳಲು ಸಾಧ್ಯ. ನಮ್ಮ ಸಮಾಜ ಮತ್ತು ಮಕ್ಕಳು ನಮ್ಮನ್ನು ಗಮನಿಸುತ್ತಿದ್ದಾರೆ ಎಂಬ ಅರಿವನ್ನು ನಾವು ಹೊಂದಿರಬೇಕು ಎಂದರು.

ಕ್ಲಿಕ್ ಮಾಡಿ ಓದಿ: ಸ್ವಾತಂತ್ರ್ಯೊತ್ಸವ | ಹರ್ ಘರ್ ತಿರಂಗಾ ಅಭಿಯಾನ

ಒಬ್ಬ ಸರ್ಕಾರಿ ನೌಕರನು ನಡೆ ನುಡಿಗಳಲ್ಲಿ ಮಾದರಿಯಾಗುವಂತಿರಬೇಕು. ಏಕೆಂದರೆ ಮಕ್ಕಳು ನಮ್ಮ ನಡೆ, ನುಡಿ, ಸಂಸ್ಕಾರವನ್ನು ನೋಡಿ ಹೆಚ್ಚು ಕಲಿಯುತ್ತಾರೆ. ಹಿಂದೆ ನಮಗೆ ಪಾಠ ಹೇಳಿಕೊಟ್ಟಂತಹ ಪ್ರಾಥಮಿಕ ಶಾಲೆಯ ಶಿಕ್ಷಕರು, ಅಂಗನವಾಡಿಯಲ್ಲಿ ಬೆರಳು ಹಿಡಿದು ತಿದ್ದಿದಂತಹವರು ಇಂದಿಗೂ ನೆನಪಿನಲ್ಲಿದ್ದಾರೆ. ಅಂತೆಯೇ ನಾವು ಸಮಾಜಕ್ಕೆ ಎಷ್ಟು ಒಳ್ಳೆಯ ಕೆಲಸಗಳನ್ನು ಮಾಡಿ, ಎಷ್ಟು ಜನರ ಮನಸ್ಸಿನಲ್ಲಿ ನಾವಿದ್ದೇವೆ ಎಂಬುದನ್ನು ತಿಳಿಯಬೇಕಿದೆ ಎಂದು ತಿಳಿಸಿದರು.

ಈ ಹಿಂದೆ ಎಸ್‌ಎಸ್‌ಎಲ್‌ಸಿ, ಪಿಯುಸಿ, ಟಿಸಿಹೆಚ್‌ ಮುಗಿಸಿದವರು ಸರ್ಕಾರಿ ಕೆಲಸಕ್ಕೆ ಸೇರುತ್ತಿದ್ದರು. ಆದರೆ ಇಂದು ಪದವಿ ಪಡೆದವರೂ ಕೂಡ ಸರ್ಕಾರಿ ನೌಕರಿಗಾಗಿ ಹೆಚ್ಚು ಕಷ್ಟ ಪಡುವ ಸ್ಥಿತಿ ಇದೆ. ಹಿಂದೆ ಯಾವುದಾದರು ವಿಚಾರಗಳನ್ನು ತಿಳಿಯಬೇಕಾದರೆ ಪತ್ರಿಕೆಗಳಿಗೆ ಕಾಯಬೇಕಿತ್ತು, ಆದರೆ ಪ್ರಸ್ತುತ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಪಂಚದ ಯಾವುದೇ ಮೂಲೆಯ ವಿಚಾರಗಳು ಕೆಲವೇ ನಿಮಿಷಗಳಲ್ಲಿ ತಿಳಿಯಬಹುದಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ಅತ್ಯಂತ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವ ಜೊತೆಗೆ, ಉತ್ತಮ ಸಂಸ್ಕಾರ, ಸನ್ನಡತೆಯನ್ನು ರೂಡಿಸಿಕೊಂಡು ಸಂಸ್ಕಾರವಂತರಾಗಿ ಬಾಳಬೇಕು ಎಂದರು.

ಕುಟುಂಬದಲ್ಲಿ ಹಾಗೂ ವೃತ್ತಿಯಲ್ಲಿ ಹೀಗೆ ಎರಡೂ ಕಡೆಗಳಿಂದ ಒತ್ತಡವನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಿದಾಗ ಮಾತ್ರ ಜೀವನದ ಯಶಸ್ಸಿನ ಬಂಡಿಯನ್ನು ಸಾಗಿಸಲು ಸಾಧ್ಯ. ನಮ್ಮ ಕೌಟುಂಬಿಕ ಕಾರ್ಯ ಯೋಜನೆಗಳು ಇತಿಮಿತಿಯಲ್ಲಿರಬೇಕು. ಮತ್ತೊಬ್ಬರನ್ನು ನೋಡಿ ಅನುಕರಿಸಿ ಅನಪೇಕ್ಷಿತ ಆಸೆಗಳಿಗೆ ಬಲಿಯಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಬಾರದು ಎಂದು ತಿಳಿಸಿದರು.

ಒಬ್ಬ ಜವಾಬ್ದಾರಿಯುತ ನೌಕರನಾಗಿ ಸರಿಯಾದ ಚೌಕಟ್ಟನ್ನು ಹಾಕಿಕೊಂಡು ಕಾರ್ಯನಿರ್ವಹಿಸಬೇಕಾಗಿದೆ. ಒತ್ತಡದ ಮುಕ್ತ ಜೀವನದಿಂದ ಹೊರಬಂದು, ಪ್ರಾಮಾಣಿಕವಾಗಿ, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರ ಮೆಚ್ಚುಗೆಗೆ ನಾವೆಲ್ಲ ನೌಕರ ವರ್ಗದವರು ಪಾತ್ರರಾಗೋಣ. ನಾವು ಆರೋಗ್ಯವಾಗಿದ್ದರೆ ನಮ್ಮ ಕುಟುಂಬ ಆರೋಗ್ಯವಾಗಿರುತ್ತದೆ. ನಮ್ಮ ಕುಟುಂಬ ಆರೋಗ್ಯವಾಗಿದ್ದರೆ ಸಮಾಜ ಆರೋಗ್ಯವಾಗಿರುತ್ತದೆ ಎಂದರು.

ವ್ಯಕ್ತಿತ್ವ ವಿಕಸನ ತರಬೇತುದಾರ ಹೊಸದುರ್ಗದ ಹೆಚ್‌.ಎಸ್‌.ನವೀನ್ ಕುಮಾರ್ ಕಾರ್ಯಾಗಾರ ನಡೆಸಿಕೊಟ್ಟರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಮ್ಮಾರೆಡ್ಡಿ, ಜಿಲ್ಲಾ ಖಜಾಂಚಿ ವೀರೇಶ್, ರಾಜ್ಯ ಖಜಾಂಚಿ ಸಿದ್ದರಾಮಣ್ಣ, ಹಿರಿಯ ಉಪಾಧ್ಯಕ್ಷ ಎಸ್‌.ಬಸವರಾಜ್, ಕಾರ್ಯದರ್ಶಿ ನೆಲ್ಕುದ್ರಿ ಸದಾನಂದ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್‌.ಮಂಜುನಾಥ್‌, ಕ್ಷೇತ್ರ ಸಮನ್ವಯಾಧಿಕಾರಿ ಈ.ಸಂಪತ್‌ ಕುಮಾರ್‌, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಅಭಿನವ್‌ ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:announcementC.S. ShadakshariChief MinisterDateEmployeesGovernmentHonourಘೋಷಣೆದಿನಾಂಕನೌಕರರುಮುಖ್ಯಮಂತ್ರಿಸನ್ಮಾನಸರ್ಕಾರಿಸಿ.ಎಸ್‌.ಷಡಾಕ್ಷರಿ
Share This Article
Facebook Email Print
Previous Article Independence Day; ಸ್ವಾತಂತ್ರ್ಯೊತ್ಸವ | ಹರ್ ಘರ್ ತಿರಂಗಾ ಅಭಿಯಾನ 
Next Article Bangladesh; ಬಾಂಗ್ಲಾ ದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್‌ನಿಂದ ಪ್ರತಿಭಟನೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up