By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: YOUTUBE, WEBSITE DIGITAL MEDIA ಸ್ಥಾಪನೆಗೆ‌ ಸರ್ಕಾರದ ಸಹಾಯಧನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » YOUTUBE, WEBSITE DIGITAL MEDIA ಸ್ಥಾಪನೆಗೆ‌ ಸರ್ಕಾರದ ಸಹಾಯಧನ

ಮುಖ್ಯ ಸುದ್ದಿ

YOUTUBE, WEBSITE DIGITAL MEDIA ಸ್ಥಾಪನೆಗೆ‌ ಸರ್ಕಾರದ ಸಹಾಯಧನ

chitradurganews.com
Last updated: 22 November 2023 21:00
chitradurganews.com
2 years ago
Share
Social Media
Social Media
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್. ಕಾಂ: 2023-24ನೇ ಸಾಲಿಗೆ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದು ನಿರುದ್ಯೋಗಿಗಳಾಗಿರುವ ಪರಿಶಿಷ್ಟ ಪಂಗಡದ ಯುವಕ ಯುವತಿಯರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮ ಉದ್ದಿಮೆ ಸ್ಥಾಪಿಸಲು ಗರಿಷ್ಠ 5 ಲಕ್ಷ ಸಹಾಯಧನ ಪಡೆಯಲು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೂಟ್ಯೂಬ್ ಚಾನೆಲ್, ಸೋಶಿಯಲ್ ಮೀಡಿಯಾ ನ್ಯೂಸ್ ಪೇಜಸ್, ನ್ಯೂಸ್ ಆನ್ ಲೈನ್ ಬ್ಲಾಗ್, ನ್ಯೂಸ್ ಕಂಟೆಂಟ್ ಕ್ರಿಯೇಷನ್, ವೆಬ್ ಪೇಜಸ್, ಆನ್ ಲೈನ್ ಜರ್ನಲಿಸಂ, ಮೀಡಿಯಾ ರಿಲೇಟೆಡ್ ಟ್ರೈನಿಂಗ್ ಸಂಸ್ಥೆಗಳನ್ನು ಸಹಾಯಧನ ಪಡೆದು ಸ್ಥಾಪಿಸಬಹುದಾಗಿದೆ.

ಘಟಕ ವೆಚ್ಚದ ಶೇಕಡ 70 ರಷ್ಟು ಅಥವಾ ಗರಿಷ್ಠ 5 ಲಕ್ಷ ಸಹಾಯಧನವನ್ನು ನಿಗಮದಿಂದ ನೀಡಲಾಗುವುದು.

15 ವರ್ಷಗಳಿಂದ ಕರ್ನಾಟಕದಲ್ಲಿ ನೆಲಸಿರುವ, ಕುಟುಂಬದ ವಾರ್ಷಿಕ ಆದಾಯ ರೂ.1.50 ಲಕ್ಷ ಹೊಂದಿರುವ ಗ್ರಾಮೀಣ ಪ್ರದೇಶ ಹಾಗೂ ರೂ.2 ಲಕ್ಷ ಹೊಂದಿರುವ ನಗರ ಪ್ರದೇಶದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು.

ವಯೋಮಿತಿ 21 ರಿಂದ 50 ವರ್ಷಗಳ ಒಳಗಿರಬೇಕು. ಅರ್ಜಿದಾರರ ಕುಟುಂಬದ ಸದಸ್ಯರು ಸರ್ಕಾರಿ ಅಥವಾ ಅರೆ ಸರ್ಕಾರಿ ನೌಕರರಾಗಿರಬಾರದು. ಸಫಾಯಿ ಕರ್ಮಚಾರಿ, ಅಲೆಮಾರಿ, ಅರೆ-ಅಲೆಮಾರಿ ಜನಾಂಗದವರ ಮಕ್ಕಳಿಗೆ ಆದ್ಯತೆ ನೀಡಲಾಗುವುದು.

ಅರ್ಜಿದಾರರು ಹಾಗೂ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಆರ್ಥಿಕ ಸೌಲಭ್ಯ ಪಡೆದಿರಬಾರದು. ಅಭ್ಯರ್ಥಿ ಕಡ್ಡಾಯವಾಗಿ UAM(ಉದ್ಯೋಗ ಆಧಾರ್ ಮೆಮೊರಂಡಮ್) ನಲ್ಲಿ ನೊಂದಾಯಿತವಾಗಿರಬೇಕು.

ಇದನ್ನೂ ಓದಿ: ಹಾಡಹಗಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪತಿರಾಯ ಅರೆಸ್ಟ್

ಆಸಕ್ತರು ಯೋಜನಾ ವರದಿಯೊಂದಿಗೆ ಬ್ಯಾಂಕ್ ಮೂಲಕ ನಿಗಮಕ್ಕೆ ಅರ್ಜಿಸಲ್ಲಿಸಬೇಕು. ಬ್ಯಾಂಕ್‌ನಿಂದ ಘಟಕ ಸ್ಥಾಪನೆ ಹಣ ಸಹಾಯ ನೀಡಿ, ಸಹಾಯಧನ ಒದಗಿಸಲು ಬೇಡಿಕೆ ಬಂದ ಕೂಡಲೇ ಸಹಾಯಧನ ಮಂಜೂರು ಮಾಡಲಾಗುವುದು. ಗರಿಷ್ಠಕ್ಕಿಂತ ಹೆಚ್ಚಿನ ಮೊತ್ತವು ಬ್ಯಾಂಕ್‌ನಲ್ಲಿ ಸಾಲವಾಗಿರುತ್ತದೆ.

ಪಲಾಪೇಕ್ಷಿಯು ನಿಗಮದ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಲ್ಲಿ ನಿಯಮಾನುಸಾರ ಆಯ್ಕೆಯಾಗಿ ಸಾಲ ಪಡೆಯಲು ಅರ್ಹರಾಗಿರಬೇಕು. ಸಹಾಯಧನ ಪಡೆದವರು ಕಡ್ಡಾಯವಾಗಿ ತಮ್ಮ ಮಾಧ್ಯಮ ಸಂಸ್ಥೆಯಲ್ಲಿ ಒಬ್ಬ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವಕರಿಗೆ ಉದ್ಯೋಗ ನೀಡತಕ್ಕದ್ದು.

ಮಾಧ್ಯಮ ಘಟಕ ಸ್ಥಾಪಿಸಿದ ಕುರಿತು ಸ್ಥಳ ಪರಿಶೀಲನೆ ಮಾಡಿ ಜಿಪಿಎಸ್ ಫೋಟೋದೊಂದಿಗೆ ವರದಿಯನ್ನು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸಲ್ಲಿಸಲಾಗುವುದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurganewsGovernmentSocial MediaSubsidyWebsiteYouTubeಚಿತ್ರದುರ್ಗನ್ಯೂಸ್‌ಯೂಟ್ಯೂಬ್ವೆಬ್‍ಸೈಟ್ಸರ್ಕಾರಸಹಾಯಧನಸೋಷಿಯಲ್ ಮೀಡಿಯಾ
Share This Article
Facebook Email Print
Previous Article ಕಾರಿನಲ್ಲಿದ್ದ ಹತ್ತು ಲಕ್ಷ ಕಳ್ಳತನ ಕಾರಿನಲ್ಲಿದ್ದ ಹತ್ತು ಲಕ್ಷ ಕಳ್ಳತನ | ಕಾರಿನಿಂದ ಹಣ ಕದ್ದು ಬೈಕಿನಲ್ಲಿ ಪರಾರಿ | ಸಿ.ಸಿ. ಕ್ಯಾಮರಾದಲ್ಲಿ ದೃಶ್ಯ ಸೆರೆ
Next Article ಡಿಸಿ ಕಚೇರಿ ಮುಂದೆ ಕುಳಿತ ಅತಿಥಿ ಉಪನ್ಯಾಸಕರು ಡಿಸಿ ಕಚೇರಿ ಮುಂದೆ ಕುಳಿತ ಅತಿಥಿ ಉಪನ್ಯಾಸಕರು | ಸೇವೆ ಖಾಯಂ ಮಾಡಲು ಅನಿರ್ಧಿಷ್ಟಾವಧಿ ಧರಣಿ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up