
CHITRADURGA NEWS | 05 MARCH 2024
ಚಿತ್ರದುರ್ಗ: ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಬೆಳ್ಳಂ ಬೆಳಗ್ಗೆ ಬೀದಿಗಿಳಿದ್ದರು.
ಶುಕ್ರವಾರ ಬೆಳಗ್ಗೆ 7 ಗಂಟೆಗೆ ನಗರದ ಒನಕೆ ಓಬವ್ವ ಸ್ಟೇಡಿಯಂಗೆ ಆಗಮಿಸಿದ ಕಾರಜೋಳ, ಇಲ್ಲಿ ವಾಯು ವಿಹಾರಿಗಳನ್ನು ಮಾತನಾಡಿಸಿ ಕಷ್ಟ ಸುಖ ಆಲಿಸಿ, ಮತಯಾಚನೆ ಮಾಡಿದರು.
ಆನಂತರ ಸ್ಟೇಡಿಯಂ ಎದುರು ತರಕಾರಿ, ಹೂವು ಮಾರುತ್ತಿದ್ದವರನ್ನು ಮಾತನಾಡಿಸಿದರು.
ಇದನ್ನೂ ಓದಿ: ಮುಖ್ಯಮಂತ್ರಿಗೆ ಶ್ರೀಗಳಿಂದ ಆಶೀರ್ವಾದ | ಭೋವಿ ಗುರುಪೀಠಕ್ಕೆ ಭೇಟಿ
ಈ ವೇಳೆ ತರಕಾರಿ ವ್ಯಾಪಾರಿ ಬಳಿ ಟಮೋಟಾ, ಹಸಿ ಮೆಣಸಿನ ಕಾಯಿ, ಜವಳಿ ಕಾಯಿ, ಅವರೇಕಾಯಿ, ಸೇರಿದಂತೆ ವಿವಿಧ ಬಗೆಯ ತರಕಾರಿಗಳನ್ನು ಚೌಕಾಸಿ ಮಾಡದೆ ಖರೀಧಿಸಿದರು.

ತರಕಾರಿ ಖರೀಧಿಸಿದ ನಂತರ ಗೋವಿಂದ ಕಾರಜೋಳ ತಮ್ಮ ಮೊಬೈಲ್ನಿಂದ 150 ರೂ.ಗಳನ್ನು ಪೋನ್ ಪೇ ಮೂಲಕ ಹಣ ಹಾಕಿದ್ದು ವಿಶೇಷವಾಗಿತ್ತು.
ಇದನ್ನೂ ಓದಿ: ಸಿದ್ದರಾಮಯ್ಯ, ವಿಜಯೇಂದ್ರ ಆಗಮಿಸಿದ ಹೆಲಿಕಾಪ್ಟರ್ ತಪಾಸಣೆ
ಇಲ್ಲಿಂದ ನೇರವಾಗಿ ಜೋಗಿಮಟ್ಟಿ ಮಾರ್ಗದ ಡಬಲ್ ರೋಡ್ನಲ್ಲಿರುವ ಕೆಎ 16 ಕೆಫೆಗೆ ಭೇಟಿ ನೀಡಿ ಚಹಾ ಕುಡಿದು ಕೆಲಹೊತ್ತು ಹರಟೆ ಹೊಡೆದು ಅಲ್ಲಿಂದ ತೆರಳಿದರು.
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಲೋಕಸಭಾ ಕ್ಷೇತ್ರದ ಸಹಪ್ರಭಾರಿ ಎಸ್.ಲಿಂಗಮೂರ್ತಿ, ಗೋವಿಂದ ಕಾರಜೋಳ ಪುತ್ರ ಉಮೇಶ್ ಕಾರಜೋಳ, ನಾಗರಾಜ್ ಬೇದ್ರೆ, ವೆಂಕಟೇಶ್ ಯಾದವ್, ವಿ.ಎಲ್,ಪ್ರಶಾಂತ್ ಮತ್ತಿತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
