CHITRADURGA NEWS | 25 APRIL 2024
ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಚಿತ್ರದುರ್ಗ ಅಭಿವೃದ್ಧಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಇಟ್ಟುಕೊಂಡು ಬಿಜೆಪಿ ಟೀಕಿಸಿದ್ದರು.
ಇದನ್ನೂ ಓದಿ: ವೋಟರ್ ಕಾರ್ಡ್ ಇಲ್ಲ ಅಂದ್ರು ವೋಟ್ ಮಾಡಿ | ಈ ದಾಖಲೆ ಇರಲಿ

ಬುಧವಾರ ಸಂಜೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಗೆ ಕೌಂಟರ್ ಮಾಡಿದ್ದಾರೆ. ಅಂಕಿ ಅಂಶಗಳನ್ನು ನೀಡಿ, ಶ್ವೇತಪತ್ರ ಹೊರಡಿಸಲು ಸವಾಲು ಹಾಕಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಅಜ್ಜಿ ಇಂದಿರಾ ನೆನೆದ ಪ್ರಿಯಾಂಕಾ ಗಾಂಧಿ
ಚಿತ್ರದುರ್ಗ ಜಿಲ್ಲೆಯ ಅತೀ ಮುಖ್ಯವಾದ ಯೋಜನೆ ಭದ್ರಾ ಮೇಲ್ದಂಡೆ ಕುರಿತಂತೆ ಕಾಂಗ್ರಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಸರಿಯಾದ ಮಾಹಿತಿಯಲೇ ಇಲ್ಲ. ಯಾರೋ ಬರೆದುಕೊಟ್ಟಿದ್ದನ್ನು ಹೇಳಿದರೆ ಜನ ನಂಬುವುದಿಲ್ಲ. ಆಡಳಿತ ವ್ಯವಸ್ಥೆ ಹೇಗೆ ನಡೆಯುತ್ತದೆ ಎನ್ನುವುದೇ ಅವರಿಗೆ ತಿಳಿದಂತಿಲ್ಲ ಎಂದು ಕಾರಜೋಳ ಹೇಳಿದರು.
ಇದನ್ನೂ ಓದಿ: ಕ್ಯೂಆರ್ ಕೋಡ್ ವೋಟರ್ ಸ್ಲಿಪ್ | ತೆಂಗಿನ ಗರಿಯ ಚಪ್ಪರ
ಭದ್ರಾ ಮೇಲ್ದಂಡೆ ಕಾಮಗಾರಿಗೆ ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗಲೇ ಅತೀ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿದೆ. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಒಮ್ಮೆ 2198 ಕೋಟಿ, ಮತ್ತೊಮ್ಮೆ 2731 ಕೋಟಿ ರೂ. ಅನುದಾನ ನೀಡಿದ್ದೇನೆ. ಆದರೆ, 2013 ರಿಂದ 18ರವರೆಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಐದು ವರ್ಷದಲ್ಲಿ ಪ್ರತಿ ವರ್ಷ ಸರಾಸರಿ 200 ಕೋಟಿ ರೂ. ಕೊಟ್ಟಿದ್ದಾರೆ. ಇದಕ್ಕೆ ದಾಖಲೆಗಳಿವೆ ಎಂದು ಹೇಳಿದರು.
ಇದನ್ನೂ ಓದಿ: ಏಪ್ರಿಲ್ 23ರ ಅಡಿಕೆ ಧಾರಣೆ | ಭೀಮಸಮುದ್ರದಲ್ಲಿ ರಾಶಿ ಅಡಿಕೆ ಬೆಲೆ 1500 ಜಿಗಿತ
ಭದ್ರಾ ಮೇಲ್ದಂಡೆ ಯೋಜನೆಗೆ ಈಗಲೂ ಸರಿಯಾಗಿ ಹಣ ಬಿಡುಗಡೆ ಮಾಡದೆ ಕೆಲಸ ನಿಂತು, ನಿಂತು ಸಾಗುತ್ತಿದೆ. ಅನೇಕ ಗುತ್ತಿಗೆದಾರರು ಬಿಲ್ ಆಗದೆ ಅರ್ಧಕ್ಕೆ ಬಿಟ್ಟು ಹೋಗಿದ್ದಾರೆ. ಈವರೆಗೆ ಯೋಜನೆಗಾಗಿ 12 ಸಾವಿರ ಕೋಟಿ ರೂ. ಕೊಟ್ಟಿರುವುದಾಗಿ ಸಿದ್ದರಾಮಯ್ಯ ಸಮಾವೇಶದಲ್ಲಿ ಹೇಳಿದ್ದಾರೆ. ಆದರೆ, ಯೋಜನೆಗೆ ವೆಚ್ಚ ಆಗಿರುವುದೇ 9 ಸಾವಿರ ಕೋಟಿ. ಮೋಸದಾಟ ಗ್ಯಾರೆಂಟಿ ಯೋಜನೆಗಳಲ್ಲಿ ಮಾತ್ರ ಅಂದುಕೊಂಡಿದ್ದೆವು. ರೈತರಿಗೆ ಕೊಡುವ ನೀರಾವರಿ ಯೋಜನೆಗಳಲ್ಲೂ ಮೋಸ ಇದೆ ಎಂದು ಕಾರಜೋಳ ವಾಗ್ದಾಳಿ ಮಾಡಿದರು.
ಇದನ್ನೂ ಓದಿ: ದೊಡ್ಡಹೊಟ್ಟೆ ರಂಗನಾಥ ಸ್ವಾಮಿಯ ರಥೋತ್ಸವ ವೈಭವ | ರಂಗಪ್ಪನಿಗೆ ಪೂಜೆ
ಕೇಂದ್ರದ ಬಜೆಟ್ನಲ್ಲಿ 5300 ಕೋಟಿ ರೂ. ಅನುದಾನ ಮಂಜೂರಾಗಿದೆ. ಇದಕ್ಕಿಂತ ದಾಖಲೆ ಬೇಕಾಗಿಲ್ಲ. ಈ ಹಣ ಬಿಡುಗಡೆಗೆ ಅಗತ್ಯವಿರುವ ದಾಖಲೆಗಳನ್ನು ಒದಗಿಸಿ, ಕೇಂದ್ರ ಹೇಳುವ ಉದ್ದೇಶಕ್ಕಷ್ಟೇ ಈ ಅನುದಾನ ಬಳಸಿಕೊಳ್ಳುತ್ತೇವೆ. ಅನ್ಯ ಉದ್ದೇಶಕ್ಕೆ ಬಳಸುವುದಿಲ್ಲ. ಇದು ನಮ್ಮ ಬದ್ಧತೆ ಎಂದರು.
ಇದನ್ನೂ ಓದಿ: ಅಡಿಕೆ ಧಾರಣೆ | ಏಪ್ರಿಲ್ 24 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿದೆ
ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 2014 ರಿಂದ 2019ರವರೆಗೆ ಸಂಸದರಾಗಿದ್ದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಮಾಡಲು ಲೋಕಸಭೆಯಲ್ಲಿ ಒಂದೇ ಒಂದು ಪ್ರಶ್ನೆ ಕೇಳದೆ ಈಗ ಮಾತನಾಡುತ್ತಿದ್ದಾರೆ ಎಂದು ದೂರಿದರು.
ಇದನ್ನೂ ಓದಿ: ಮುರುಘಾ ಶರಣರಿಗೆ ಮತ್ತೆ ಸಂಕಷ್ಟ | ಶ್ರೀಗಳ ಜಾಮೀನಿಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಎಂ.ಚಂದ್ರಪ್ಪ, ಕೆ.ಎಸ್.ನವೀನ್, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ, ಎಸ್ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹಣಮಂತು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
