By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಗೋವಿಂದ ಕಾರಜೋಳ ಚಿತ್ರದುರ್ಗ ಅಭ್ಯರ್ಥಿ | ಅಧಿಕೃತ ಘೋಷಣೆ ಮಾಡಿದ ಬಿಜೆಪಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಗೋವಿಂದ ಕಾರಜೋಳ ಚಿತ್ರದುರ್ಗ ಅಭ್ಯರ್ಥಿ | ಅಧಿಕೃತ ಘೋಷಣೆ ಮಾಡಿದ ಬಿಜೆಪಿ

ಲೋಕಸಮರ 2024

ಗೋವಿಂದ ಕಾರಜೋಳ ಚಿತ್ರದುರ್ಗ ಅಭ್ಯರ್ಥಿ | ಅಧಿಕೃತ ಘೋಷಣೆ ಮಾಡಿದ ಬಿಜೆಪಿ

chitradurganews.com
Last updated: 27 March 2024 19:15
chitradurganews.com
1 year ago
Share
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 27 MARCH 2024

ಚಿತ್ರದುರ್ಗ: ಚಿತ್ರದುರ್ಗ ಲೋಕಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಎಂ.ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಿದ್ದು, ಕೇಂದ್ರ ಚುನಾವಣಾ ಸಮಿತಿ ಅಧಿಕೃತವಾಗಿ ಪಟ್ಟಿ ಬಿಡುಗಡೆ ಮಾಡಿದೆ.

ಕಳೆದೊಂದು ವಾರದಿಂದ ಗೋವಿಂದ ಕಾರಜೋಳ ಚಿತ್ರದುರ್ಗ ಅಭ್ಯರ್ಥಿ ಆಗಲಿದ್ದಾರೆ ಎನ್ನುವ ಅಂತೆಕಂತೆಗಳು ಹರಿದಾಡುತ್ತಿದ್ದವು. ಆದರೆ, ಇಂದು ಅಧಿಕೃತ ಘೋಷಣೆ ಆಗಿದೆ.

ಇದನ್ನೂ ಓದಿ: ನಾಯಕನಹಟ್ಟಿ ರಥಕ್ಕೆ ₹ 2.5 ಕೋಟಿ ವಿಮೆ | ವಿಮಾ ಪಾಲಿಸಿ ಹಸ್ತಾಂತರ

ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಗೋವಿಂದ ಕಾರಜೋಳ ಉಪಮುಖ್ಯಮಂತ್ರಿ ಆಗಿದ್ದರು. ಆನಂತರ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿಯೂ ಕೆಲಸ ಮಾಡಿದ್ದರು.

ಈಗ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ಉತ್ತರ ಕರ್ನಾಟಕದಿಂದ ಮಧ್ಯ ಕರ್ನಾಟಕಕ್ಕೆ ಆಗಮಿಸಿ ಹೊಸ ರಾಜಕೀಯ ಹೆಜ್ಜೆ ಇಡಲು ಅಣಿಯಾಗಿದ್ದಾರೆ.

ಇದನ್ನೂ ಓದಿ: ರೈತರ ಗಮನಕ್ಕೆ…ಬೋರ್‌ವೆಲ್‌ ಪ್ರತಿ ಅಡಿಗೆ ರೂ.105 ಫಿಕ್ಸ್‌ | ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ.ಮಂಜುನಾಥ್

ಹಾಲಿ ಬಿಜೆಪಿ ಹಿಡಿತದಲ್ಲಿರುವ ಚಿತ್ರದುರ್ಗ ಕ್ಷೇತ್ರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ವರಿಷ್ಠರು ಅಳೆದು ತೂಗಿ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಿದ್ದಾರೆ.

ಹಾಲಿ ಸಂಸದ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಭ್ರಷ್ಟ ರಾಜಕಾರಣದಲ್ಲಿ ಮುಂದುವರೆಯುವ ಆಸಕ್ತಿ ಇಲ್ಲ ಎಂದು ಹೇಳಿಕೆ ನೀಡಿದ ನಂತರ ಬಿಜೆಪಿ ಟಿಕೇಟ್‍ಗೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿತ್ತು.

ಇದನ್ನೂ ಓದಿ: ಚಳ್ಳಕೆರೆ ATR ನಲ್ಲಿ ಇಸ್ರೋ ಮಹತ್ವದ ಸಾಧನೆ | ಮರುಬಳಕೆಯ ರಾಕೇಟ್ ಪುಷ್ಪಕ್ ಯಶಸ್ವಿ ಲ್ಯಾಂಡಿಂಗ್

ಪ್ರಮುಖವಾಗಿ ಮಾಜಿ ಸಂಸದ ಜನಾರ್ಧನಸ್ವಾಮಿ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಅವರ ಪುತ್ರ ಎಂ.ಸಿ.ರಘುಚಂದನ್ ಪ್ರಬಲ ಪೈಪೋಟಿ ನಡೆಸಿದ್ದರು. ರಘು ಚಂದನ್ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದು ಸುತ್ತಿನ ಪ್ರವಾಸ ಮಾಡಿದ್ದರು.

ಇದರೊಟ್ಟಿಗೆ ನಿವೃತ್ತ ಐಎಎಸ್ ಅಧಿಕಾರಿಗಳಾದ ಲಕ್ಷ್ಮೀನಾರಾಯಣ, ಎಂ.ಕೆ.ಶ್ರೀರಂಗಯ್ಯ, ಸೂರನಹಳ್ಳಿ ವಿಜಯಣ್ಣ, ಭಾರ್ಗವಿ ದ್ರಾವಿಡ್, ಡಾ.ರಮೇಶ್ ಸೇರಿದಂತೆ ಹಲವು ಆಕಾಂಕ್ಷಿಗಳಿದ್ದರು. ಆದರೆ, ಎಲ್ಲ ಲೆಕ್ಕಾಚಾರಗಳು ತಲೆಕೆಳಗಾಗಿದ್ದು, ಬಿಜೆಪಿ ವರಿಷ್ಠರು ಗೋವಿಂದ ಕಾರಜೋಳ ಅವರಿಗೆ ಟಿಕೇಟ್ ನೀಡಿದ್ದಾರೆ.

ಇದನ್ನೂ ಓದಿ: ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕಾಂಗ್ರೆಸ್ ಅಭ್ಯರ್ಥಿ | ಅಧಿಕೃತ ಘೋಷಣೆ ಮಾಡಿದ ಎಐಸಿಸಿ

ಜನತಾ ದಳದ ಮೂಲಕ ರಾಜಕಾರಣ ಆರಂಭಿಸಿದ ಗೋವಿಂದ ಕಾರಜೋಳ, ಕಳೆದ ನಾಲ್ಕು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿ ಸಕ್ರೀಯವಾಗಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಪದಾರ್ಪಣೆ ಮಾಡಲು ಅಣಿಯಾಗಿರುವುದು ವಿಶೇಷವಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPChitradurgaGovinda KarjolaLok Sabha ElectionsMP Ticketಎಂಪಿ ಟಿಕೇಟ್ಗೋವಿಂದ ಕಾರಜೋಳಚಿತ್ರದುರ್ಗಬಿಜೆಪಿಲೋಕಸಭಾ ಚುನಾವಣೆ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | 27 ಮಾರ್ಚ್ | ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್
Next Article ನೀತಿ ಸಂಹಿತೆ ಉಲ್ಲಂಘನೆ | 181 ಪ್ರಕರಣ | ರೂ.1.12 ಕೋಟಿ ಮೌಲ್ಯದ ಮದ್ಯ ಜಪ್ತಿ
Leave a Comment

Leave a Reply Cancel reply

Your email address will not be published. Required fields are marked *

ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up