By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: GPS ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ | ಟ್ಯಾಕ್ಸಿ, ಆಟೋ ಮಾಲೀಕರ ಖಂಡನೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » GPS ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ | ಟ್ಯಾಕ್ಸಿ, ಆಟೋ ಮಾಲೀಕರ ಖಂಡನೆ 

ಮುಖ್ಯ ಸುದ್ದಿ

GPS ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ | ಟ್ಯಾಕ್ಸಿ, ಆಟೋ ಮಾಲೀಕರ ಖಂಡನೆ 

News Desk Chitradurga News
Last updated: 23 July 2024 17:58
News Desk Chitradurga News
11 months ago
Share
ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಿದರು
ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಿದರು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 JULY 2024

ಚಿತ್ರದುರ್ಗ: ಕೇಂದ್ರ ಸಾರಿಗೆ ಇಲಾಖೆಯ ಆದೇಶದಂತೆ ರಾಜ್ಯ ಸಾರಿಗೆ ಇಲಾಖೆಯು ಪ್ರವಾಸಿ ವಾಹನಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಅಳವಡಿಸಲು ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ವಿವಿಧ ವಾಹನ ಮಾಲೀಕರು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: Medical college; ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ನೋಟೀಸ್ | MLC ಕೆ.ಎಸ್.ನವೀನ್ ಆಕ್ರೋಶ

ಜಿಲ್ಲೆಯ ಖಾಸಗಿ ಬಸ್, ಲೈಸ್ ಸರ್ವಿಸ್ ಬಸ್ ಮಾಲೀಕರ ಸಂಘ, ಮಿನಿ ಲಾರಿ ಸಂಘ ಹಾಗೂ ಅಪ್ಪು ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘ, ಲಘು ವಾಹನ ಮಾಲೀಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಿದರು.

ಅವೈಜ್ಞಾನಿಕವಾದ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಅಳವಡಿಕೆಯಿಂದ ರಾಜ್ಯದ ಎಲ್ಲಾ ಸಾರಿಗೆ ಕಚೇರಿಗಳಲ್ಲಿ 13 ಸಾವಿರದಿಂದ 15 ಸಾವಿರ ರೂ.ಗಳವರೆಗೆ ವಸೂಲಿ ಮಾಡುತ್ತಿದ್ದು, ಪ್ರವಾಸಿ ವಾಹನಗಳ ಚಾಲಕರು ಮತ್ತು ಮಾಲೀಕರುಗಳಿಗೆ ಹೊರೆಯಾಗಿದೆ.

2024 ಸೆಪ್ಟೆಂಬರ್ ಗೆ ಯಾವುದೇ ವಾಹನಗಳಿಗೆ ಜಿಪಿಎಸ್. ಮತ್ತು ಪ್ಯಾನಿಕ್ ಬಟನ್‍ಗಳನ್ನು ಅಳವಡಿಸದೆ ವಾಹನಗಳಿಗೆ ಎಫ್.ಸಿ. ನೀಡಬಹುದೆಂದು ರಾಜ್ಯ ಸಾರಿಗೆ ಸಚಿವರು ಆದೇಶ ಹೊರಡಿಸಿದ್ದರೂ ಸಾರಿಗೆ

ಅಧಿಕಾರಿಗಳು ಸುಲಿಗೆ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: Lok Sabha: ಲೋಕಸಭೆ ಅಧಿವೇಶನದಲ್ಲಿ ಕೇಂದ್ರೀಯ ವಿದ್ಯಾಲಯ ಸದ್ದು | ಮೊದಲ ದಿನ ಮೊದಲ ಪ್ರಶ್ನೆ ಕೇಳಿದ ಸಂಸದ ಗೋವಿಂದ ಎಂ.ಕಾರಜೋಳ

ರಾಜ್ಯದ ಎಲ್ಲಾ ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಚಾಲಕರು ಮತ್ತು ಮಾಲೀಕರುಗಳು ಹೈರಾಣಾಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೆ ಈ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಪ್ರತಿಭಟನೆಯಲ್ಲಿ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಗೌರವಾಧ್ಯಕ್ಷ ಇಕ್ಬಾಲ್ ಬಿ.ಸಿ.ರೋಡ್, ಪ್ರಧಾನ ಕಾರ್ಯದರ್ಶಿ ಆರೀಫ್ ಉಜಿರೆ, ಶರತ್‍ಕುಮಾರ್, ದಿನೇಶ್, ನರಹರಿ, ಮಧು ಸೇರಿದಂತೆ ಚಾಲಕರು ಮತ್ತು ಮಾಲೀಕರುಗಳು ಪಾಲ್ಗೊಂಡಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AdaptationAutoChitradurga newsCompulsorycondemnationgpsKannada Latest NewsOwnerPanicTaxiಅಳವಡಿಕೆಆಟೋಕಡ್ಡಾಯಕನ್ನಡ ಲೇಟೆಸ್ಟ್ ನ್ಯೂಸ್ಖಂಡನೆಚಿತ್ರದುರ್ಗ ನ್ಯೂಸ್ಟ್ಯಾಕ್ಸಿಪ್ಯಾನಿಕ್ಮಾಲೀಕರ
Share This Article
Facebook Email Print
Previous Article ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ LAW ವಿದ್ಯಾರ್ಥಿಗಳಿಂದ ಪ್ರತಿಭಟನೆ  EXAM FEES; ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ LAW ವಿದ್ಯಾರ್ಥಿಗಳಿಂದ ಪ್ರತಿಭಟನೆ 
Next Article ಭಜನಾ ಗಾಯಕಿ ಅಂಬುಜಾಕ್ಷಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ AMBUJAKSHI YOGA AWARD; ಭಜನಾ ಗಾಯಕಿ ಅಂಬುಜಾಕ್ಷಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ 
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up