CHITRADURGA NEWS | 24 JUNE 2025
ಹೊಳಲ್ಕೆರೆ: ಭರಮಸಾಗರದಲ್ಲಿ 2 ಕೋಟಿ ರೂ.ವೆಚ್ಚದಲ್ಲಿ ನೂತನ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಮಂಗಳವಾರ ಭೂಮಿ ಪೂಜೆ ಸಲ್ಲಿಸಿದರು.
Also Read: ಜಿಲ್ಲೆಯಲ್ಲಿ ಖಾಲಿ ಇರುವ ಪಶು ವೈದ್ಯರ ನೇಮಕಕ್ಕೆ ಕ್ರಮ ವಹಿಸಿ | ಮಹೇಶ್ವರಪ್ಪ
ನಂತರ ಮಾತನಾಡಿದ ಶಾಸಕರು, ಕ್ಷುಲ್ಲಕ ಕಾರಣಕ್ಕಾಗಿ ಜಾತಿ ನಿಂದನೆ ಕೇಸು ಹಾಕಿ ಬೇರೆಯವರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಸಣ್ಣ ವಿಚಾರಗಳಿಗೆ ಗಲಾಟೆ ಮಾಡಿಕೊಂಡು ಅಟ್ರಾಸಿಟಿ ದೂರು ನೀಡುವುದು ಸಹಜವಾಗಿದೆ. ಇದರಿಂದ ಕೆಲವೊಮ್ಮೆ ಅಮಾಯಕರು ತೊಂದರೆ ಅನುಭವಿಸಬೇಕಾಗುತ್ತದೆ. ಅದಕ್ಕಾಗಿ ದೂರು ನೀಡಿದಾಕ್ಷಣ ಎಫ್.ಐ.ಆರ್.ದಾಖಲಿಸಿ ನ್ಯಾಯಾಲಯಕ್ಕೆ ಸಲ್ಲಿಸುವ ಬದಲು ಎರಡು ಕಡೆಯವರನ್ನು ಕರೆಸಿ ಬುದ್ದಿಮಾತು ಹೇಳಿ ರಾಜಿ ಮಾಡುವ ಮೂಲಕ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಜವಾಬ್ದಾರಿ ಪೊಲೀಸ್ ಅಧಿಕಾರಿಗಳ ಮೇಲಿದೆ ಎಂದು ಹೇಳಿದರು.
ಒಂದು ವರ್ಷದೊಳಗೆ ಕಟ್ಟಡವನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದ ಶಾಸಕ ಡಾ.ಎಂ.ಚಂದ್ರಪ್ಪ ಉದ್ಘಾಟನೆಗೆ ಮುಖ್ಯಮಂತ್ರಿ, ಗೃಹ ಸಚಿವರು ಹಾಗು ಜಿಲ್ಲಾ ಉಸ್ತುವಾರಿ ಮಂತ್ರಿಯನ್ನು ಕರೆಸುತ್ತೇನೆ ಎಂದರು.
Also Read: ಹೊಸದುರ್ಗ ತಾಲೂಕಿನಲ್ಲಿ ಭೀಕರ ಕೊಲೆ | ಹಾಡಹಗಲೆ ಮನೆಗೆ ನುಗ್ಗಿ ಹತ್ಯೆ
ನಾನು ಶಾಸಕನಾದಾಗಿನಿಂದಲೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ಅಟ್ರಾಸಿಟಿ ದೂರು ದಾಖಲಿಸಲು ಅವಕಾಶ ಕೊಟ್ಟಿಲ್ಲ. ಎಲ್ಲಾ ಜಾತಿ ಧರ್ಮದವರು ಅನ್ಯೋನ್ಯತೆಯಿಂದ ಇರುವಂತ ವಾತಾವರಣ ನಿರ್ಮಿಸಿದ್ದೇನೆ. ಜಾತಿ ನಿಂದನೆ ದೂರು ಕೊಟ್ಟ ಕೂಡಲೆ ಕೇಸು ದಾಖಲಿಸುವ ಬದಲು ದೂರಿನ ಹಿಂದಿರುವ ಉದ್ದೇಶವನ್ನು ಅರ್ಥಮಾಡಿಕೊಂಡು ಪರಸ್ಪರರು ಸಹಭಾಳ್ವೆಯಿಂದ ಬದುಕುವಂತ ಪರಿಸ್ಥಿತಿ ನಿರ್ಮಾಣ ಮಾಡುವುದು ಪೊಲೀಸರ ಜವಾಬ್ದಾರಿ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಂಜಿತ್ಕುಮಾರ್ ಭಂಡಾರು, ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಶೈಲೇಶ್, ಡಿ.ಎಸ್.ಪ್ರವೀಣ್ಕುಮಾರ್, ಮಂಜುನಾಥ್, ಕಲ್ಲೇಶ್, ರಾಜಣ್ಣ, ಮೋಹನ್, ಮಲ್ಲಣ್ಣ, ಚಂದ್ರಶೇಖರ್, ತಿಪ್ಪೇಶ್, ಅಂಜಿ, ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number