
CHITRADURGA NEWS | 25 JUNE 2024
ಚಿತ್ರದುರ್ಗ: ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಜಿಟಿಟಿಸಿ ಅಡಿಪಾಯ ನೀಡುತ್ತದೆ ಎಂದು ಜಿಲ್ಲಾ ಕೆಡಿಪಿ ಸದಸ್ಯ ಕೆ.ಸಿ.ನಾಗರಾಜು ಹೇಳಿದರು.
ಇದನ್ನೂ ಓದಿ: ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ | ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ
ನಗರದ ಕುಂಚಿಗನಾಳ್ ಕಣಿವೆ ಮಾರಮ್ಮ ದೇವಸ್ಥಾನದ ಸಮೀಪದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ಮೊದಲನೇ ಸೆಮಿಸ್ಟರ್ಗೆ ಪ್ರವೇಶಾತಿ ಪಡೆದಂತಹ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ತರಗತಿಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಟಿಟಿಸಿ ಸಂಸ್ಥೆಯನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ಎಲ್ಲಾ ವಿದ್ಯಾರ್ಥಿಗಳು ಪರಿಪೂರ್ಣ ರೂಪದಲ್ಲಿ ಉಪಯೋಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇದನ್ನೂ ಓದಿ: ಅಂಬೇಡ್ಕರ್ ವೃತ್ತದಲ್ಲಿ ಗಾಳಿಗೆ ಬಿದ್ದ ಮರ | ಪಲ್ಸರ್ ಬೈಕ್ ಟ್ಯಾಂಕ್ ಜಖಂ
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರ ಪ್ರಮುಖ ಪಾತ್ರ ಹೊಂದಿರುತ್ತದೆ. ವಿದ್ಯಾರ್ಥಿಗಳು ಅವರ ಜವಾಬ್ದಾರಿಯನ್ನು ಅರ್ಥೈಸಿಕೊಂಡು ಉತ್ತಮ ಪ್ರಜೆಯಾಗಿ ಹೊರಹೊಮ್ಮಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಾಂಶುಪಾಲರಾದ ಬಿ.ಎಸ್.ಸುಹಾಸ್ ಮಾತನಾಡಿ, ಜಿಟಿಟಿಸಿಯಲ್ಲಿ ನಡೆಸುತ್ತಿರುವ ಮೂರು ಡಿಪ್ಲೋಮಾ ಕೋರ್ಸ್ಗಳಾದಂತಹ ಟೂಲ್ ಅಂಡ್ ಡೈ ಮೇಕಿಂಗ್, ಮೆಕಟ್ರಾನಿಕ್ಸ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ಗಳಲ್ಲಿ ಉಳಿಕೆಯಾದಂತಹ ಸೀಟುಗಳ ಪ್ರವೇಶಾತಿಗೆ ಮೊದಲ ಬಂದವರಿಗೆ ಮೊದಲ ಆದ್ಯತೆ ನೀಡಿ ಪ್ರವೇಶಾತಿಯನ್ನು ಪೂರ್ಣಗೊಳಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯರಾದ ಕೆ.ಸಿ.ನಾಗರಾಜ್ ಅವರಿಗೆ ಸನ್ಮಾನಿಸಲಾಯಿತು.
ಇದನ್ನೂ ಓದಿ: ನಕ್ಷತ್ರ ಆಮೆ ಕಳ್ಳತನ ಮಾಡುತ್ತಿದ್ದ ನಾಲ್ಕು ಜನರ ಬಂಧನ | 32 ನಕ್ಷತ್ರ ಆಮೆಗಳು ವಶಕ್ಕೆ
ಕಾರ್ಯಕ್ರಮದಲ್ಲಿ ಗುತ್ತಿಗೆದಾರ ದೇವರಾಜ್, ಜಿಟಿಟಿಸಿ ಕಾಲೇಜು ಆಡಳಿತ ವಿಭಾಗದ ಮುಖ್ಯಸ್ಥ ಕೆ.ಪಿ.ಕಾಟೇಗೌಡ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
