By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ದುರ್ಗದ ಎಂಪಿ ಟಿಕೇಟ್ ಯಾರಿಗೆ | ಕುತೂಹಲ ಹೆಚ್ಚಿಸಿದ ಬಿಜೆಪಿ-ಕಾಂಗ್ರೆಸ್ ವರಿಷ್ಠರ ನಡೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ದುರ್ಗದ ಎಂಪಿ ಟಿಕೇಟ್ ಯಾರಿಗೆ | ಕುತೂಹಲ ಹೆಚ್ಚಿಸಿದ ಬಿಜೆಪಿ-ಕಾಂಗ್ರೆಸ್ ವರಿಷ್ಠರ ನಡೆ

ಲೋಕಸಮರ 2024

ದುರ್ಗದ ಎಂಪಿ ಟಿಕೇಟ್ ಯಾರಿಗೆ | ಕುತೂಹಲ ಹೆಚ್ಚಿಸಿದ ಬಿಜೆಪಿ-ಕಾಂಗ್ರೆಸ್ ವರಿಷ್ಠರ ನಡೆ

chitradurganews.com
Last updated: 18 March 2024 08:57
chitradurganews.com
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 18 MARCH 2024

ಚಿತ್ರದುರ್ಗ: ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಎರಡು ಹಂತದಲ್ಲಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಕೂಡಾ ಈಗಾಗಲೇ ಮೂರು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಆದರೆ, ಎರಡೂ ಪಕ್ಷಗಳು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಚಿತ್ರದುರ್ಗದ ಅಭ್ಯರ್ಥಿಗಳ ಹೆಸರಿರಲಿಲ್ಲ. ಇದು ತೀವ್ರ ಕುತೂಹಲಕ್ಕೆ ಎಡೆ ಮಾಡಿದೆ.

ಇದನ್ನೂ ಓದಿ: ಗಡಿಯಲ್ಲಿ ಪೊಲೀಸ್ ಸರ್ಪಗಾವಲು | 47 ಚೆಕ್ ಪೋಸ್ಟ್‍ಗಳಲ್ಲಿ ಹೈ ಅಲರ್ಟ್

ಪ್ರಮುಖ ಎದುರಾಳಿಗಳಾಗಲಿರುವ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳು ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಮಾಡಲು ಭಾರೀ ತಲೆಕೆಡಿಸಿಕೊಂಡಂತೆ ಕಾಣುತ್ತಿದೆ ಎಂದು ಜಿಲ್ಲೆಯ ಜನ ಮಾತನಾಡುತ್ತಿದ್ದಾರೆ.

ಕಳೆದ ಮೂರು ದಿನಗಳಿಂದ ಯಾವುದೇ ಕ್ಷಣದಲ್ಲಿ ಎರಡೂ ಪಕ್ಷಗಳು ಲಿಸ್ಟ್ ಬಿಡುಗಡೆ ಮಾಡಬಹುದು ಎನ್ನುವ ಲೆಕ್ಕಾಚಾರಗಳು ನಡೆಯುತ್ತಿವೆ.

ಇದನ್ನೂ ಓದಿ: ಗಾಂಧಿ ಜಯಂತಿಗೆ ಹೊಳಲ್ಕೆರೆ ತಾಲೂಕಿನ ಕೆರೆಗಳಿಗೆ ನೀರು

ಇದಕ್ಕೆ ಪೂರಕವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿಗಳು, ಬೆಂಬಲಿಗರು, ಮುಖಂಡರು ದೆಹಲಿ, ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ.

ಜಿಲ್ಲೆಯಲ್ಲಿ ದಿನವೂ ಒಂದೊಂದು ಹೆಸರು ಓಡಾಡುತ್ತಿದೆ. ಅವರಿಗೆ ಫೈನಲ್ ಆಗಿದೆಯಂತೆ, ಇವರದ್ದು ಘೋಷಣೆ ಮಾತ್ರ ಬಾಕಿ ಇದೆಯಂತೆ ಎಂದು ಎರಡೂ ಪಕ್ಷಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಮಾತುಕತೆಗಳು ಜೋರಾಗುತ್ತಿವೆ.

ಬಿಜೆಪಿಯಲ್ಲಿ ಏನೆಲ್ಲಾ ಬೆಳವಣಿಗೆ ಆಗಿದೆ:

ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ನಿಲುವು ಮುಖ್ಯವಾಗಿದೆ. ಸಮೀಕ್ಷೆ, ಸ್ಥಳೀಯರ ಅಭಿಪ್ರಾಯ ಆಧರಿಸಿ ಸಾಮಾಜಿಕ ನ್ಯಾಯ ಇತ್ಯಾದಿ ಅಂಶಗಳನ್ನು ಪರಿಗಣಿಸಿ ಟಿಕೇಟ್ ಅಂತಿಮಗೊಳಿಸಲಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗದ ಮತದಾರರೆ ಇಲ್ಲಿದೆ ನೋಡಿ ನಿಮ್ಮ ಮತದಾನದ ದಿನ

ಮಾಧ್ಯಮಗಳಲ್ಲಿ ಮಾಜಿ ಸಂಸದ ಜನಾರ್ಧನಸ್ವಾಮಿ ಹೆಸರು ಅಂತಿಮವಾಗಿದೆ ಎಂಬ ಸುದ್ದಿ ಓಡಡುತ್ತಿದೆ.
ಮತ್ತೊಂದೆಡೆ ಹಾಲಿ ಸಂಸದ ಎ.ನಾರಾಯಣಸ್ವಾಮಿ ಟಿಕೇಟ್ ನಿರಾಕರಣೆ ಮಾಡುತ್ತಿದ್ದಾರೆ. ಆದರೆ, ದಲಿತ ಎಡಗೈ ಸಮುದಾಯಕ್ಕೆ ಸಿಗಬೇಕು ಎನ್ನುವ ಕಾರಣಕ್ಕೆ ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಗೆ ಕೊಡಿಸಲು ಒತ್ತಡ ಹಾಕುತ್ತಿದ್ದಾರೆ ಎನ್ನುವ ಊಹಾಪೋಹಗಳು ಹರಿದಾಡಿವೆ.

ಅನೇಕರು, ನಾರಾಯಣಸ್ವಾಮಿ ಅವರಿಗೆ ಟಿಕೇಟ್ ಫೈನಲ್ ಆಗಿದೆ. ಒಂದು ವೇಳೆ ಅವರಿಗೆ ಸಿಗದಿದ್ದರೆ ಎಂ.ಸಿ.ರಘುಚಂದನ್ ಅವರನ್ನು ಹೈಕಮಾಂಡ್ ಯುವ ಕೋಟಾದಲ್ಲಿ ಆಯ್ಕೆ ಮಾಡಬಹುದು ಎನ್ನುವ ಸುದ್ದಿಗಳಿವೆ.

ಇದನ್ನೂ ಓದಿ: ದುರ್ಗದ ಸೊಸೆ ದಾವಣಗೆರೆ ಬಿಜೆಪಿ ಅಭ್ಯರ್ಥಿ

ಇದೆಲ್ಲದರ ಜೊತೆಗೆ ದೆಹಲಿ ಮಟ್ಟದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀನಾರಾಯಣ ಅವರ ಹೆಸರು ಚಾಲ್ತಿಯಲ್ಲಿದೆ. ನಿವೃತ್ತ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಕೂಡಾ ಪೈಪೋಟಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದ ಬೆಳವಣಿಗೆಗಳೇನು:

ಇನ್ನೂ ಕಾಂಗ್ರೆಸ್ ಪಕ್ಷದಲ್ಲಿ ಬಹುತೇಕ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಅವರಿಗೆ ಟಿಕೇಟ್ ಅಂತಿಮ ಎನ್ನಲಾಗುತ್ತಿತ್ತು. ಆದರೆ, ಪ್ರಭಾವಿ ಸಚಿವರು ಅದನ್ನು ತಡೆಹಿಡಿದಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದವು.
ಸ್ವತಃ ಬಿ.ಎನ್.ಚಂದ್ರಪ್ಪ ಅವರೇ ಮಾಧ್ಯಮಗಳ ಬಳಿ ತಮ್ಮ ಬೇಸರ ಹೊರ ಹಾಕಿ ಫೇಕ್ ಗಿರಾಕಿಗಳಿಗೆ ದೇವರು ಒಳ್ಳೆಯದು ಮಾಡಲಿ ಎಂದಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಸೇರ್ತಿರಾ ಅಂದಾಕ್ಷಣ ಕೆಂಡಾಮಂಡಲರಾದ ಎ.ನಾರಾಯಣಸ್ವಾಮಿ

ಇದಾದ ಎರಡು ದಿನಗಳ ನಂತರವೂ ಪತ್ರಿಕೆಗಳು ಪ್ರಕಟಿಸಿದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಬಿ.ಎನ್.ಚಂದ್ರಪ್ಪ ಹೆಸರಿತ್ತು.

ಆದರೆ, ಭೋವಿ ಕೋಟಾದಲ್ಲಿ ರಾಮಪ್ಪ ಅವರಿಗೆ ಟಿಕೇಟ್ ಕೊಡಿಸಲು ಸಮುದಾಯದ ಸಚಿವರು, ಮುಖಂಡರು ಪಕ್ಷದ ವರಿಷ್ಟರ ಮೇಲೆ ಒತ್ತಡ ಹಾಕಿದ್ದಾರೆ ಎನ್ನುವ ಮಾಹಿತಿ ಹರಿದಾಡಿತ್ತು.

ಇದನ್ನೂ ಓದಿ: ಚಿತ್ರದುರ್ಗ ಎಂಪಿ ಟಿಕೇಟ್ ಸಸ್ಪೆನ್ಸ್

ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಮ್ಮ ಪುತ್ರ ವಿನಯ್ ತಿಮ್ಮಾಪುರ ಅವರಿಗೆ ಟಿಕೇಟ್ ಕೊಡಿಸುವಲ್ಲಿ ಪ್ರಯತ್ನ ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ಭಾನುವಾರ 2009ರ ಲೋಕಸಭೆ ಚುನಾವಣೆ ಪರಾಜಿತ ಅಭ್ಯರ್ಥಿ, ಸ್ಥಳೀಯ ಅಭ್ಯರ್ಥಿ ಚರ್ಚೆ ಮುನ್ನೆಲೆಗೆ ತಂದಿದ್ದ ಜೆ.ಜೆ.ಹಟ್ಟಿ. ಡಾ.ಬಿ.ತಿಪ್ಪೇಸ್ವಾಮಿ ಅವರ ಹೆಸರು ಅಂತಿಮ ಎನ್ನುವ ಸುದ್ದಿ ಹರಿದಾಡಿದೆ. ಜಿಲ್ಲೆಯ ಮುಖಂಡರು ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ಅವರಿಗೆ ಟಿಕೇಟ್ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಅವರಿಗೆ ಫೈನಲ್ ಆಗಲಿದೆ ಎನ್ನುವ ಸುದ್ದಿಯಿದೆ.

ಇದನ್ನೂ ಓದಿ: 49 ಸಾವಿರದ ಗಡಿ ತಲುಪಿದ ಅಡಿಕೆ ಧಾರಣೆ

ಕಾರ್ಮಿಕ ಕಲ್ಯಾಣ ಮಂಡಳಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಯುವ ಮುಖಂಡ ಪಿ.ರಘು ಸೇರಿದಂತೆ ಹಲವು ಆಕಾಂಕ್ಷಿಗಳು ಬೆಂಗಳೂರು, ದೆಹಲಿಯಲ್ಲಿದ್ದಾರೆ.

ಒಟ್ಟಾರೆ ಯಾರಿಗೆ ಟಿಕೇಟ್ ಅಂತಿಮವಾಗಲಿದೆ ಎನ್ನುವುದು ಭಾರೀ ಕೌತುಕದ ವಿಚಾರವಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPBN ChandrappaChitradurgacongressGovinda KarajolaJanardhanaswamyJJ Hatti ThippeswamyLok SabhaMP TicketNarayanaswamyಎಂಪಿ ಟಿಕೇಟ್ಕಾಂಗ್ರೆಸ್ಗೋವಿಂದ ಕಾರಜೋಳಚಿತ್ರದುರ್ಗಜನಾರ್ಧನಸ್ವಾಮಿಜೆ.ಜೆ.ಹಟ್ಟಿ ತಿಪ್ಪೇಸ್ವಾಮಿನಾರಾಯಣಸ್ವಾಮಿಬಿ.ಎನ್.ಚಂದ್ರಪ್ಪಬಿಜೆಪಿಲೋಕಸಭೆ
Share This Article
Facebook Email Print
Previous Article ಚಿತ್ರದುರ್ಗದ ಮಹಡಿ ಶಿವಮೂರ್ತಿ ಮನೆಯಲ್ಲಿ ಸಭೆ ಹನುಮಲಿ ಷಣ್ಮುಖಪ್ಪ ಅವರಿಗೆ ಎಂಎಲ್ಸಿ ಸ್ಥಾನ ಕೊಡಿ | ಸಭೆ ನಡೆಸಿ ವರಿಷ್ಟರ ಬಳಿ ತೆರಳಲು ಸಿದ್ಧರಾದ ಅಭಿಮಾನಿಗಳು
Next Article ಮಹಿಳಾ ದಿನಾಚರಣೆ, ತಿಂಗಳ ವಿಶೇಷ ವ್ಯಕ್ತಿ ಪರಿಚಯ, ಗೀತ ಗಾಯನ ಮತ್ತು ಕವಿಗೋಷ್ಠಿ ಕಾರ್ಯಕ್ರಮ ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆಯಿಂದ ಮಹಿಳಾ ದಿನಾಚರಣೆ | ತಿಂಗಳ ವಿಶೇಷ ವ್ಯಕ್ತಿ ಪರಿಚಯ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up