ಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಸುರಕ್ಷಾ ಲಸಿಕಾ ಕಾರ್ಡ್ ವಿತರಣೆ

ಹಜ್ ಯಾತ್ರಾರ್ಥಿಗಳಿಗೆ ಸುರಕ್ಷಾ ಲಸಿಕಾ ಕಾರ್ಡ್ ವಿತರಣೆ

CHITRADURGA NEWS | 30 APRIL 2024

ಚಿತ್ರದುರ್ಗ: ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿರ್ದೇಶನದಂತೆ ಜಿಲ್ಲೆಯ ಒಟ್ಟು 142 ಹಜ್ ಯಾತ್ರಾರ್ಥಿಗಳಿಗೆ ಸುರಕ್ಷಾ ಲಸಿಕಾ ಅಭಿಯಾನ ನಡೆಸಲಾಯಿತು.

ಇದನ್ನೂ ಓದಿ: ಫಸಲ್ ಭೀಮಾ ಯೋಜನೆ | ಅಧಿಕಾರಿಗಳ ಯಡವಟ್ಟು, ರೊಚ್ಚಿಗೆದ್ದ ರೈತರು

ಈ ವೇಳೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯ ಒಟ್ಟು 142 ಯಾತ್ರಾರ್ಥಿಗಳಿಗೆ ಸುರಕ್ಷಾ ಲಸಿಕೆ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ಮಾಡಲಾಗುತ್ತಿದ್ದು, ಇದರ ಉಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.

ಜಾಗತಿಕ ತಾಪಮಾನ ಹೆಚ್ಚಾಗಿರುವುದರಿಂದ ಬಿಸಿಲಾಘಾತ ಘಟನೆಗಳು ಸಂಭವಿಸದಂತೆ ದೇಹವನ್ನು ನಿರ್ಜಲೀಕರಣವಾಗದಂತೆ, ಪದೇ ಪದೇ ನೀರು ಕುಡಿಯುವುದು, ನೆರಳಿನ ವಾತಾವರಣದಲ್ಲಿ ಇರುವುದು, ದ್ರವರೂಪ ಆಹಾರ ಸೇವನೆ ಮಾಡುವುದು, ಮಜ್ಜಿಗೆ, ಎಳನೀರು, ನಿಂಬೆ ಹಣ್ಣಿನ ಪಾನಕ ಸೇವಿಸುವುದು ಒಳ್ಳೆಯದು ಎಂದರು.

ಇದನ್ನೂ ಓದಿ: ಮೇ.27 ರವರೆಗೆ ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನಕ್ಕೆ | ಮತ್ತೆ ಚಿತ್ರದುರ್ಗ ಕಾರಾಗೃಹ ಸೇರಿದ ಮುರುಘಾಶ್ರೀ

ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅಭಿನವ್ ಮಾತನಾಡಿ, ಮೆನಂಜೋ ಕಾಕಲ್ ಮೆನಂಜೈಟೀಸ್ ರೋಗದ ವಿರುದ್ಧ, ಇನ್ಫ್ಲೂಯಂಜಾ ಮತ್ತು ಓರಲ್ ಪೆÇೀಲಿಯೊ ಲಸಿಕೆ ಈ ದಿನ ಎಲ್ಲಾ ಯಾತ್ರಾರ್ಥಿಗಳಿಗೆ ನೀಡಲಾಗುತ್ತಿದೆ. ಇದರ ಜೊತೆ ಲಸಿಕಾ ದೃಢೀಕರಣ ಪತ್ರ ಎಲ್ಲರಿಗೂ ನೀಡಲಾಗುತ್ತಿದೆ. ನಿಮ್ಮ ಯಾತ್ರೆ ಪ್ರಯಾಣ ಸುಖಕರವಾಗಿರಲಿ. ಲಸಿಕಾ ದೃಢೀಕರಣ ಸುರಕ್ಷಿತವಾಗಿ ಇಟ್ಟುಕೊಳ್ಳಿ ಎಂದರು.

ಇದನ್ನೂ ಓದಿ: ಮೇ.1 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯ

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಜಾನಕಿ, ಆರೋಗ್ಯ ನಿರೀಕ್ಷಣಾಧಿಕಾರಿ ಗಂಗಾಧರ್, ಗೋಪಾಲಕೃಷ್ಣ, ಡಾ.ರಾಹುಲ್, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಅರುಂಧತಿ, ಆಶಾ ಕಾರ್ಯಕರ್ತೆಯರು. ಕರ್ನಾಟಕ ರಾಜ್ಯ ಹಜ್ ಸಮಿತಿ ಸಿಬ್ಬಂದಿ ಜಿ.ಕರೀಮುಲ್ಲಾ, ಜಿಲ್ಲಾ ಲಸಿಕಾ ವ್ಯವಸ್ಥಾಪಕ ವಿರೇಶ್ ಸೇರಿದಂತೆ ಜಿಲ್ಲೆಯ ವಿವಿಧ ಮಸೀದಿಗಳ ಮುಖ್ಯಸ್ಥರು ಭಾಗವಹಿಸಿದ್ದರು.

 

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version