CHITRADURGA NEWS | 14 AUGSUST 2024
ಚಿತ್ರದುರ್ಗ: ಜಿಲ್ಲೆಯಾದ್ಯಂತ ಬಹುತೇಕ ಕಡೆಗಳಲ್ಲಿ ತಡರಾತ್ರಿ ಭರ್ಜರಿ ಮಳೆ (Heavy Rain)ಸುರಿದಿದೆ. ಕೆಲವೆಡೆ ವಿಪರೀತ ಗಾಳಿಯೊಂದಿಗೆ ಮಳೆಯಾದರೆ, ಇನ್ನೂ ಕೆಲವೆಡೆ ಧಾರಾಕಾರವಾಗಿ ಮಳೆಯಾಗಿದೆ.
ಮಳೆಯ ಸದ್ದಿಗೆ ರಾತ್ರಿ 2 ಗಂಟೆಗೆ ಎಚ್ಚೆತ್ತ ಜನ ಆತಂಕಗೊಂಡಿದ್ದರು. ಅನೇಕ ಕಡೆಗಳಲ್ಲಿ ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ. ಅಂಡರ್ಪಾಸ್ಗಳು ಜಲಾವೃತಗೊಂಡಿವೆ.
ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಂಸದ ಗೋವಿಂದ ಕಾರಜೋಳ ಚಾಲನೆ
ರಾತ್ರಿ ಸುರಿದ ಮಳೆಗೆ ಬಹುತೇಕ ಕೆರೆ, ಕಟ್ಟೆಗಳಿಗೆ ಸಾಕಷ್ಟು ನೀರು ಹರಿದು ಬಂದಿದೆ. ಹಳ್ಳ ಕೊಳ್ಳಗಳಲ್ಲಿ ನೀರು ಹರಿಯುತ್ತಿದೆ.
ಹೊರಕೆರೆದೇವರಪುರ, ಉಪ್ಪರಿಗೇನಹಳ್ಳಿ, ಮಾಡದಕೆರೆ ಮಾರ್ಗವಾಗಿ ವಿವಿ ಸಾಗರಕ್ಕೆ ಹರಿಯುವ ಗುಂಡಿಹಳ್ಳದಲ್ಲಿ ಈ ವರ್ಷ ಇದೇ ಮೊದಲ ಬಾರಿಗೆ ನೀರು ಹರಿಯುತ್ತಿದೆ.
ಇದನ್ನೂ ಓದಿ: ಸರ್ಕಾರಿ ನೌಕರರಿಂದ ಮುಖ್ಯಮಂತ್ರಿಗೆ ಸನ್ಮಾನ | ದಿನಾಂಕ ಘೋಷಿಸಿದ ಸಿ.ಎಸ್.ಷಡಾಕ್ಷರಿ
ಉಪ್ಪರಿಗೇನಹಳ್ಳಿ ಬಳಿ ಹಳ್ಳ ಹರಿಯುತ್ತಿರುವುದನ್ನು ನೋಡಲು ಜನ ಬಂದು ಹೋಗುತ್ತಿದ್ದಾರೆ. ಬಹಳ ದಿನಗಳ ನಂತರ ಹಳ್ಳದಲ್ಲಿ ಈ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಎಲ್ಲವೂ ವಾಣಿವಿಲಾಸ ಸಾಗರಕ್ಕೆ ಸೇರಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number