ಈ ಸರ್ಕಾರದಲ್ಲೇ ಜಾಸ್ತಿ ಪರ್ಸೆಂಟೇಜ್‌ | ಇಲಾಖೆಗಳಲ್ಲಿ ಸಚಿವರ ಸಂಬಂಧಿಗಳ ಹಸ್ತಕ್ಷೇಪ | ಗುತ್ತಿಗೆದಾರರ ಸಂಘದಿಂದ ಗಂಭೀರ ಆರೋಪ

ಆರ್‌.ಮಂಜುನಾಥ್‌

CHITRADURGA NEWS | 10 APRIL 2025

ಚಿತ್ರದುರ್ಗ: ಈ ಹಿಂದೆ ಅಧಿಕಾರದಲ್ಲಿದ್ದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇರುಸುಮುರುಸು ಸೃಷ್ಟಿಸಿದ್ದ ರಾಜ್ಯ ಗುತ್ತಿಗೆದಾರರ ಸಂಘ, ಈಗ ಕಾಂಗ್ರೆಸ್‌ ಸರ್ಕಾರದ ಮೇಲೆ ಆರೋಪಗಳ ಸುರಿಮಳೆ ಸುರಿಸಿದೆ.

ಕಾಂಗ್ರೆಸ್‌ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದು, ರಾಜ್ಯದಲ್ಲಿ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಬಿಜೆಪಿಗೆ ಅಸ್ತ್ರ ಕೊಟ್ಟಂತಾಗಿದೆ.

ಇದನ್ನೂ ಓದಿ: ಏ.15 ಮತ್ತು 16 ರಂದು ಜಿಲ್ಲೆಯ ಸರ್ಕಾರಿ ನೌಕರರಿಗೆ ಎರಡು ದಿನ ಸಾಂದರ್ಭಿಕ ರಜೆ

ಗುತ್ತಿಗೆದಾರರ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಚಿತ್ರದುರ್ಗ ಮೂಲದ ಆರ್‌.ಮಂಜುನಾಥ್‌, ರಾಜ್ಯ ಸರ್ಕಾರದ ಸಚಿವರ ಮೇಲೆ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದು, ಸಣ್ಣ ಗುತ್ತಿಗೆದಾರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ, ೫ ರಿಂದ ೫೦ ಲಕ್ಷ ರೂ. ಕಾಮಗಾರಿ ನಡೆಸಿರುವ ಗುತ್ತಿಗೆದಾರರ ಪೇಮೆಂಟ್‌ ಮಾಡಿ ಎಂದು ಒತ್ತಾಯಿಸಿದ್ದಾರೆ.

ಸರ್ಕಾರಿ ಇಲಾಖೆಗಳಲ್ಲಿ ಮೂರನೇಯವರ ಹಸ್ತಕ್ಷೇಪ:

ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಸಚಿವರ ಸಂಬಂಧಿಗಳು, ಬಂಧುಗಳು ಇಲಾಖೆಗಳನ್ನು ನಿಯಂತ್ರಣ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ರಿಸಲ್ಟ್‌ | ಇವರೇ ನೋಡಿ ಜಿಲ್ಲೆಯ ಟಾಪರ್ಸ್‌ | ಜಿಲ್ಲೆಗೆ ಶೇ.59.87 ಫಲಿತಾಂಶ

ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್‌ ಜಾರಕಿಹೊಳಿ ಅವರು ಬಹಳ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಅವರ ಬಗ್ಗೆ ಬಹಳ ಗೌರವ ಇತ್ತು. ಆದರೆ, ಮೂರ್ನಾಲ್ಕು ತಿಂಗಳಿಂದ ಅವರ ಸಂಬಂಧಿಯೊಬ್ಬರು ಇಲಾಖೆ ನಿಯಂತ್ರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಣ್ಣ ನೀರಾವರಿ ಇಲಾಖೆಯಲ್ಲಿ ಸಚಿವರಾದ ಎನ್‌.ಎಸ್‌.ಭೋಸರಾಜು ಅವರ ಮಗನೇ ನೇರವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ, ಇದನ್ನು ಗುತ್ತಿಗೆದಾರರ ಸಂಘ ಖಂಡಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಅಡಿಕೆ ಧಾರಣೆ | ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಗೆ ಎಷ್ಟು ರೇಟ್‌

ಸಚಿವರು ಇಲಾಖೆಗಳಲ್ಲಿ ಉತ್ತಮ ನಿರ್ಧಾರ ಮಾಡಿದರೂ, ಕಾಣದ ಕೈಗಳು ಅದನ್ನು ಅನುಷ್ಠಾನ ಮಾಡಲು ಬಿಡುತ್ತಿಲ್ಲ. ಅಧಿಕಾರಿಗಳನ್ನು ಕೇಳಿದರೆ ನಮಗೆ ಗೊತ್ತಿಲ್ಲ ಎನ್ನುತ್ತಾರೆ.

ಹಾಗಾದ್ರೆ ಗುತ್ತಿಗೆದಾರರ ಬೇಡಿಕೆಗಳೇನು ?

  • 5 ರಿಂದ 50 ಲಕ್ಷ ರೂ. ಇರುವ ಗುತ್ತಿಗೆದಾರರಿಗೆ ಮೊದಲು ಪೇಮೆಂಟ್‌ ಆಗಬೇಕು. ಜ್ಯೇಷ್ಠತೆ ಕಾಪಾಡಬೇಕು.
    ಮೂರನೇ ವ್ಯಕ್ತಿಗಳು ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡಬಾರದು.
  • ಹಿಂದಿನ ಸರ್ಕಾರದಲ್ಲಿ ವಿಶೇಷ ಎಲ್‌ಓಸಿ ಇರಲಿಲ್ಲ. ಈಗಿನ ಸರ್ಕಾರದಲ್ಲಿ ಆ ಪಿಡಗು ಹುಟ್ಟಿಕೊಂಡಿದೆ.
  • ಮೊದಲು ಕಾಮಗಾರಿ ಮಾಡಿದವರಿಗೆ ಮೊದಲು ಪೇಮೆಂಟ್‌ ಮಾಡಲಿ.
  • ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರಿಗೆ ಜ್ಯೇಷ್ಠತೆ ಆಧಾರದಲ್ಲಿ ಪೇಮೆಂಟ್‌ ಮಾಡಬೇಕು.
  • ಪಾರದಶರ್ಕತೆ ಕಾಯ್ದೆ ಅನ್ವಯ ಜ್ಯೇಷ್ಠತೆ ಪಾಲಿಸಬೇಕು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version