
CHITRADURGA NEWS | 13 SEPTEMBER 2025
ಚಿತ್ರದುರ್ಗ: ಹಿಂದೂ ಮಹಾಗಣಪತಿ ಉತ್ಸವದ ಶೋಭಾಯಾತ್ರೆಗೂ ಮೊದಲು ಭಗವಾಧ್ವಜ, ಹೂವಿನ ಹಾರ ಹಾಗೂ ತಿರುಪತಿ ದೇವಸ್ಥಾನದ ಮಾದರಿ ಪ್ರತಿಕೃತಿ ಹರಾಜು ಮಾಡಲಾಯಿತು.
ಇದನ್ನೂ ಓದಿ: ಚಿತ್ರದುರ್ಗ ಹಿಂದೂ ಮಹಾಗಣಪತಿ ಶೋಭಯಾತ್ರೆ ನಾಳೆ | ಸಂಸದ ಯದುವೀರ್ ಉದ್ಘಾಟನೆ
ಭಗವಾ ಧ್ವಜವನ್ನು ಬಿಜೆಪಿ ಮುಖಂಡ ಹನುಮಂತೇಗೌಡ 6 ಲಕ್ಷ ರೂ.ಗಳಿಗೆ ಹರಾಜಿನಲ್ಲಿ ಪಡೆದುಕೊಂಡರು.ತಿರುಪತಿ ತಿಮ್ಮಪ್ಪ ದೇವಸ್ಥಾನದ ಮಾದರಿಯನ್ನು ವಜ್ರ ಮಹೇಶ್ 5.25 ಲಕ್ಷ ರೂ.ಗಳಿಗೆ ಹರಾಜಿನಲ್ಲಿ ಪಡೆದುಕೊಂಡರು.
ಗಣಪತಿಯ ಫಲಾಹಾರವನ್ನು ಐಶ್ವರ್ಯಾ ಗ್ರೂಪ್ ಕಿರಣ್ ಕುಮಾರ್ 1.25 ಲಕ್ಷ ರೂ.ಗಳಿಗೆ ಪಡೆದುಕೊಂಡರು.ಕೈಯಲ್ಲಿ ರಚಿಸಿರುವ ಗಣಪತಿ ಕಲಾಕೃತಿಯನ್ನು ಮಂಜುನಾಥ್ ಎಂಬುವವರು 1.05 ಲಕ್ಷ ರೂ.ಗಳಿಗೆ ಪಡೆದುಕೊಂಡರು.
ಇದನ್ನೂ ಓದಿ: ಶೋಭಾಯಾತ್ರೆಗೆ ಭರದ ಸಿದ್ಧತೆ | ಝಗಮಗಿಸುತ್ತಿದೆ ಕೋಟೆನಾಡು ಚಿತ್ರದುರ್ಗ
ಗಣಪತಿಯ ಹೂವಿನ ಹಾರವನ್ನು ಚಿತ್ರಹಳ್ಳಿ ಲವಕುಮಾರ್ 1 ಲಕ್ಷ ರೂ.ಗಳಿಗೆ ಹರಾಜಿನಲ್ಲಿ ಪಡೆದುಕೊಂಡರು.
ವೇದಿಕೆಯಲ್ಲಿ ಶಿವಲಿಂಗಾನಂದ ಶ್ರೀ, ಶಾಂತವೀರ ಶ್ರೀ, ಮಾದಾರ ಚನ್ನಯ್ಯ, ಭಗೀರಥ ಶ್ರೀ, ಇಮ್ಮಡಿ ಸಿದ್ದರಾಮೇಶ್ವರ ಶ್ರೀ, ಸರ್ದಾರ್ ಸೇವಾಲಾಲ್ ಶ್ರೀ, ಬಸವ ಮಾಚಿದೇವ ಶ್ರೀ, ವಿಎಚ್ಪಿ ಮುಖಂಡರಾದ ಷಡಾಕ್ಷರಪ್ಪ, ಕೂಡಾ ಮಾಜಿ ಅಧ್ಯಕ್ಷ ಟಿ.ಬದರೀನಾಥ್, ಡಾ.ಮಂಜುನಾಥ್, ಸಂಸದ ಗೋವಿಂದ ಕಾರಜೋಳ, ಎಂಎಲ್ಸಿ ಕೆ.ಎಸ್.ನವೀನ್, ಡಾ.ಸಿದ್ದಾರ್ಥ್, ಚಂದ್ರಶೇಖರ್ ಇತರರಿದ್ದರು.
ಗಣಪತಿ ಶೋಭಾಯಾತ್ರೆ ಮಧ್ಯಾಹ್ನ 2.30ಕ್ಕೆಚಾಲನೆ ಪಡೆದುಕೊಂಡಿತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
