By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Hindu Mahaganapati: ಗರುಡ ವಾಹನದಲ್ಲಿ ಕೋಟೆನಾಡು ಪ್ರವೇಶಿಸಲಿದೆ ಹಿಂದೂ ಮಹಾಗಣಪತಿ | ಆಕರ್ಷಿಸುತ್ತಿದೆ ರಾಜವೀರ ಮದಕರಿ ನಾಯಕ ಮಹಾದ್ವಾರ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Hindu Mahaganapati: ಗರುಡ ವಾಹನದಲ್ಲಿ ಕೋಟೆನಾಡು ಪ್ರವೇಶಿಸಲಿದೆ ಹಿಂದೂ ಮಹಾಗಣಪತಿ | ಆಕರ್ಷಿಸುತ್ತಿದೆ ರಾಜವೀರ ಮದಕರಿ ನಾಯಕ ಮಹಾದ್ವಾರ

ಮುಖ್ಯ ಸುದ್ದಿ

Hindu Mahaganapati: ಗರುಡ ವಾಹನದಲ್ಲಿ ಕೋಟೆನಾಡು ಪ್ರವೇಶಿಸಲಿದೆ ಹಿಂದೂ ಮಹಾಗಣಪತಿ | ಆಕರ್ಷಿಸುತ್ತಿದೆ ರಾಜವೀರ ಮದಕರಿ ನಾಯಕ ಮಹಾದ್ವಾರ

News Desk Chitradurga News
Last updated: 3 September 2024 13:08
News Desk Chitradurga News
10 months ago
Share
HNIDU GANAPATHI
ಹಿಂದೂ ಮಹಾಗಣಪತಿ ಮಹಾದ್ವಾರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS |03 SEPTEMBER 2024
ಚಿತ್ರದುರ್ಗ: ಲಕ್ಷಾಂತರ ಭಕ್ತರ ಸಂಭ್ರಮ ಇಮ್ಮಡಿಗೊಳಿಸುವ ಹಿಂದೂ ಮಹಾಗಣಪತಿ ಆಗಮನಕ್ಕೆ ಸ್ವಾಗತಕ್ಕೆ ಸಿದ್ಧತೆ ಪೂರ್ಣಗೊಂಡಿದ್ದು, ಬುಧವಾರದಿಂದಲೇ ಕೋಟೆನಾಡಿನಲ್ಲಿ ಗೌರಿಪುತ್ರನ ದರ್ಬಾರ್‌ ಶುರುವಾಗಲಿದೆ.

ವಿಶ್ವ ಹಿಂದೂ ಪರಿಷತ್‌, ಬಜರಂಗದಳದಿಂದ ನಗರದ ಜೈನಧಾಮದಲ್ಲಿ ಶನಿವಾರ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಯಾಗಲಿದೆ. ಈ ಕುರಿತು ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ನಯನ್‌ ಮಂಗಳವಾರ ಸುದ್ದಿಗೋಷ್ಠಿ ನಡೆಸಿದರು.

‘ದೊಡ್ಡಬಳ್ಳಾಪುರದಲ್ಲಿ ಸಿದ್ಧವಾಗಿರುವ 14 ಅಡಿ ಎತ್ತರದ ಗರುಡ ವಾಹನದಲ್ಲಿ ಅಲಂಕೃತವಾಗಿರುವ ಗಣಪತಿ ಬುಧವಾರ ವಿದ್ಯುಕ್ತವಾಗಿ ಪುರ ಪ‍್ರವೇಶಿಸಲಿದೆ. ಮಧ್ಯಾಹ್ನ ಮೂರು ಗಂಟೆಗೆ ಕಲಾತಂಡಗಳೊಂದಿಗೆ ಗಣಪತಿ ಆಗಮನವಾಗಲಿದೆ’ ಎಂದರು.

GANAPATHI
ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಸುದ್ದಿಗೋಷ್ಠಿ

‘ಸಭಾಂಗಣ ಮತ್ತು ಹೊರಗೆ 5 ಎಲ್‌ಇಡಿ ಅಳವಡಿಸಲಾಗುತ್ತದೆ. ಹೊರಗೆ ಇರುವ ಎಲ್ಇಡಿ ನಲ್ಲಿ ಪೂಜಾ ಕಾರ್ಯಕ್ರಮಗಳು ನೇರ ಪ್ರಸಾರ ಇರುತ್ತವೆ. ಭಕ್ತರಿಗೆ ಅನುಕೂಲವಾಗುವಂತೆ ಸಕಲ ವ್ಯವಸ್ಥೆ ಕಲ್ಪಿಸಲಾಗುತ್ತಿದೆ’ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಅಕ್ಕ ಸಮ್ಮೇಳನದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ | ಮಾತುಕತೆ

ಬಜರಂಗದಳ ಪ್ರಾಂತ ಸಂಯೋಜಕ ಪ್ರಭಂಜನ್ ಮಾತನಾಡಿ, ‘ಈ ವರ್ಷ ಗಣಪತಿ ಪೆಂಡಾಲ್‌ ಬಹು ಬೇಗ ಸಿದ್ಧವಾಗಿದೆ. ದಶಾವತಾರ ಬಿಂಬಿಸುವ ಮಾದರಿಯ ಪೆಂಡಾಲ್‌ ಹಾಕಲಾಗಿದೆ. ಭಕ್ತರ ಸಂಖ್ಯೆ ಹೆಚ್ಚಾಗುವುದು, ಮಳೆ ಕಾರಣಕ್ಕೆ ಪೆಂಡಾಲ್ ವಿನ್ಯಾಸ ಬದಲಾಯಿಸಲಾಗಿದೆ’ ಎಂದರು.

‘ನಿತ್ಯ ಸಂಜೆ ದೇಶಭಕ್ತಿ ಪ್ರಸ್ತುತಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮಾದಾರ ಚನ್ನಯ್ಯ ಮಠಕ್ಕೆ ಆಗಮಿಸುವ ಗಣಪತಿಯನ್ನು ಪೆಂಡಾಲ್‌ಗೆ ತರಲಾಗುತ್ತದೆ’ ಎಂದು ತಿಳಿಸಿದರು.

‘ಮಹೋತ್ಸವದ ಪ್ರಮುಖ ಘಟ್ಟವಾದ ಶೋಭಾಯಾತ್ರೆಯನ್ನು ಬಜರಂಗದಳ ರಾಷ್ಟ್ರೀಯ ಸಂಯೋಜಕ ನೀರಜ್ ದೊನೇರಿಯಾ ಉದ್ಘಾಟಿಸಲಿದ್ದಾರೆ. ಸ್ಥಳದ ಪಾವಿತ್ರ್ಯತೆ, ರಾಷ್ಟ್ರೀಯತೆ, ಸಂಸ್ಕೃತಿ ಬಿಂಬಿಸುವಂತೆ ಪ್ರತಿಷ್ಠಾಪಿಸುವ ಜಿಲ್ಲೆಯ 25 ಗಣಪತಿಗಳಿಗೆ ಬಹುಮಾನ ಕೊಡಲು ತೀರ್ಮಾನಿಸಲಾಗಿದೆ. ಜತೆಗೆ ವಿಶ್ವಹಿಂದೂ ಪರಿಷತ್ ಷಷ್ಠಿಪೂರ್ತಿ ಹಿನ್ನೆಲೆಯಲ್ಲಿ 60 ಜನರಿಗೆ ಸನ್ಮಾನ ಮಾಡಲಾಗುತ್ತದೆ. ಸಭಾಮಂಟಪಕ್ಕೆ ಕೇಶವ ಹೆಗಡೆ ಹೆಸರನ್ನು ಇಡಲಾಗುತ್ತದೆ. ವೇದಿಕೆಗೆ ಜ.ರಾ.ರಾಮಮೂರ್ತಿ ನಾಮಕರಣ. ಮುಖ್ಯದ್ವಾರ ರಾಜವೀರ ಮದಕರಿ ನಾಯಕ ಮಹಾದ್ವಾರ ಎಂದೇ ಇರುತ್ತದೆ’ ಎಂದು ವಿವರಿಸಿದರು.

ವಿಶ್ವ ಹಿಂದೂ ಪರಿಷತ್‌ ಜಿಲ್ಲಾ ಅಧ್ಯಕ್ಷ ಷಡಾಕ್ಷರಪ್ಪ, ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಶರಣ್‌ ಕುಮಾರ್‌, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಬದರೀನಾಥ್, ವಿಎಚ್‌ಪಿ ನಗರ ಅಧ್ಯಕ್ಷ ಅಶೋಕ್‌, ಮುಖಂಡರಾದ ಚನ್ನಕೇಶವ, ಸಂದೀಪ್, ರಂಗಸ್ವಾಮಿ ಇತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Hindu MahaganapatiKotenaduMadakariMahadwaraNayakaRajveeraಕೋಟೆನಾಡುಗರುಡ ವಾಹನನಾಯಕಮದಕರಿಮಹಾದ್ವಾರರಾಜವೀರಹಿಂದೂ ಮಹಾಗಣಪತಿ
Share This Article
Facebook Email Print
Previous Article ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ  Sneha Public School; ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ 
Next Article canel Vanivilasa: ವಾಣಿವಿಲಾಸ ಜಲಾಶಯದಲ್ಲಿ ಜಲ ವೈಭೋಗ | ಸನಿಹವಾಗಿದೆ ಮೂರನೇ ಬಾರಿಗೆ ಕೋಡಿ ಬೀಳುವ ಕ್ಷಣ
Leave a Comment

Leave a Reply Cancel reply

Your email address will not be published. Required fields are marked *

ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up