CHITRADURGA NEWS | 22 JUNE 2026
ಚಿತ್ರದುರ್ಗ: ಚಿದಾನಂದ ಪ್ರಶಸ್ತಿ ಪ್ರದಾನ ಸಮಿತಿ, ರೇಣುಕಾ ಪ್ರಕಾಶನ ಇವುಗಳ ಸಹಯೋಗದೊಂದಿಗೆ ಐ.ಎಂ.ಎ.ಹಾಲ್ನಲ್ಲಿ ಇತಿಹಾಸ ವಿದ್ವಾಂಸರು ಹಾಗೂ ವಿಶ್ರಾಂತ ಪ್ರಾಧ್ಯಾಪಕ ಡಾ.ಲಕ್ಷ್ಮಣ್ ತೆಲಗಾವಿರವರಿಗೆ ಚಿದಾನಂದ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: ಪ್ರವಾಸೋದ್ಯಮ ಇಲಾಖೆಯಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನ
ಈ ವೇಳೆ ಖ್ಯಾತ ಸಾಹಿತಿ, ಕಾದಂಬರಿಕಾರ ಡಾ.ಬಿ.ಎಲ್.ವೇಣು ಮಾತನಾಡಿ, ಎಲ್ಲರಿಂದಲೂ ಬರೆಸಿಕೊಳ್ಳುವ, ಬರೆಸುವ, ಬೆಳೆಸುವ ಗುಣ ಚಿತ್ರದುರ್ಗದ ಮಣ್ಣಿಗಿದೆ.
ಸಂಶೋಧನೆ, ಸಾಹಿತ್ಯ ಚಳುವಳಿಯಲ್ಲಿ ತೊಡಗಿಸಿಕೊಂಡ ಮೇರು ಪರ್ವತ ಚಿದಾನಂದಮೂರ್ತಿ ಹೆಸರಿನಲ್ಲಿ ಪ್ರಶಸ್ತಿ ದೊರಕಿರುವುದು ಡಾ.ಲಕ್ಷ್ಮಣ ತೆಲಗಾವಿರವರ ಪುಣ್ಯ.
ಹುಲ್ಲೂರು ಶ್ರೀನಿವಾಸ ಜೋಯಿಸರ ಲೇಖನಗಳಿಗೆ ಮೆರಗು ತಂದವರು ಲಕ್ಷ್ಮಣ ತೆಲಗಾವಿ. ನಾನು ಐತಿಹಾಸಿಕ ಕಾದಂಬರಿಗಳನ್ನು ಬರೆದು ಹೆಸರು ಮಾಡಿದ್ದೇನೆಂದರೆ ಅದರ ಹಿಂದ ಲಕ್ಷ್ಮಣ ತೆಲಗಾವಿರವರಿದ್ದಾರೆಂದು ನೆನಪಿಸಿಕೊಂಡರು.
ಡಾ.ಲಕ್ಷ್ಮಣ್ತೆಲಗಾವಿರವರಿಗೆ ಪ್ರಶಸ್ತಿಗಳು ಹೊಸದೇನಲ್ಲ. ಗಳಗನಾಥ ಪ್ರಶಸ್ತಿ, ದಾವಣಗೆರೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿದೆ. ಇದು ಅವರ ಸಾಧನೆಗೆ ಸಿಕ್ಕ ಪುರಸ್ಕಾರ. ಪ್ರಶಸ್ತಿಗಳು ಬರವಣಿಗೆಗೆ ಶಕ್ತಿ ಕೊಡುತ್ತದೆ.
ಇದನ್ನೂ ಓದಿ: ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಸಂಶೋಧನೆ, ಸಾಹಿತ್ಯ ಚಳುವಳಿಯಲ್ಲಿ ತಮ್ಮನ್ನು ತೊಡಿಸಿಕೊಂಡಿದ್ದ ಚಿದಾನಂದಮೂರ್ತಿರವರು ವಿರಾಟ ರೂಪಿ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಗಬೇಕೆಂದು ಹೋರಾಡಿದವರು. ಸಾಲು ಸಾಲು ಕಾದಂಬರಿಗಳನ್ನು ಬರೆದು ಸಿನಿಮಾಗಳ ಪ್ರಶಸ್ತಿ ನನಗೆ ಬಂದಿದೆಯೆಂದರೆ ಅದಕ್ಕೆ ಮೂಲ ಕಾರಣ ಡಾ.ಲಕ್ಷ್ಮಣ್ ತೆಲಗಾವಿ ಎನ್ನುವುದನ್ನು ಮರೆಯುವಂತಿಲ್ಲ ಎಂದರು.
ಚಿದಾನಂದ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಲಕ್ಷ್ಮಣ್ತೆಲಗಾವಿ, ಎಲ್ಲಾ ಕ್ಷೇತ್ರಗಳಲ್ಲಿಯೂ ಪಾದಾರ್ಪಣೆ ಮಾಡಿದ ಚಿದಾನಂದಮೂರ್ತಿರವರಲ್ಲಿ ಗಟ್ಟಿತನವಿತ್ತು. ಅವರು ಬೀದಿಗಿಳಿದು ಹೋರಾಟ ಮಾಡಿದ್ದನ್ನು ಅನೇಕ ವಿದ್ವಾಂಸರು ಒಪ್ಪಲಿಲ್ಲ. ಕನ್ನಡ ಪ್ರೀತಿ ರಕ್ತಗತವಾಗಿತ್ತು. ಗಟ್ಟಿ ಸಂಶೋಧನೆಗಳು ಈಗ ನಡೆಯುತ್ತಿಲ್ಲ. ವ್ಯಾಖ್ಯಾನ ಇತಿಹಾಸದ ಜೀವಾಳ. ಕಾವ್ಯಗಳ ಮೂಲಕ ಹೊಸ ಇತಿಹಾಸವನ್ನು ಬರೆಯುವ ಪ್ರಯತ್ನವಾಗಬೇಕಿದೆ ಎಂದು ನುಡಿದರು.
ನನಗೆ ಸಿಕ್ಕಿರುವ ಚಿದಾನಂದ ಪ್ರಶಸ್ತಿ ಚಿತ್ರದುರ್ಗಕ್ಕೆ ಸೇರಬೇಕು. ನನ್ನ ಜೊತೆ ಸಂಶೋಧನಾ ತಂಡದವರು ಚಿತ್ರದುರ್ಗದಲ್ಲಿದ್ದಾರೆ. ಆತ್ಮಶಾಂತಿಗಾಗಿ ಕೊನೆಯುಸಿರಿರುವವರೆಗೂ ಚಿತ್ರದುರ್ಗದ ಕೆಲಸ ಮಾಡುತ್ತೇನೆ. ಆಸಕ್ತರ ಮನೆ ಮನೆಗೆ ಪುಸ್ತಕಗಳನ್ನು ತಲುಪಿಸುತ್ತೇನೆ. ಜನ ಓದಿ ಇತಿಹಾಸ ತಿಳಿದುಕೊಳ್ಳಬೇಕೆಂಬುದು ನನ್ನ ಆಸೆ.
ಇದನ್ನೂ ಓದಿ: ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿಗೆ ಮಾದಾರ ಚನ್ನಯ್ಯ ಸ್ವಾಮೀಜಿ ಆಯ್ಕೆ | ಜೂನ್ 27 ರಂದು ಪ್ರಶಸ್ತಿ ಪ್ರದಾನ
ಐವತ್ತು ನಿಘಂಟು ಸಮಿತಿ ಸಭೆಗಳಲ್ಲಿ ಭಾಗವಹಿಸಿದ್ದೇನೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಾಪಕರಾಗಿ ಮೊಟ್ಟ ಮೊದಲು ಪ್ರವೇಶಿಸಿದ ಚಿದಾನಂದಮೂರ್ತಿರವರ ಕನ್ನಡ, ಶಾಸನ ಸಾಂಸ್ಕøತಿಕ ಅಧ್ಯಯನ ಮಾದರಿ. ಹುಲ್ಲೂರು ಶ್ರೀನಿವಾಸ ಜೋಯಿಸರು ಇತಿಹಾಸಕ್ಕೆ ಕಾಲಬದ್ದ, ಕ್ರಮಬದ್ದ ಅಡಿಗಲ್ಲು ಹಾಕಿರುವುದನ್ನು ನಾವುಗಳು ಮುಂದುವರೆಸಿಕೊಂಡು ಹೋಗುತ್ತಿದ್ದೇವೆಂದು ತಿಳಿಸಿದರು.
ಗಟ್ಟಿ ಸಂಶೋಧಕರುಗಳಿದ್ದರೆ ನನ್ನ ಪುಸ್ತಕಗಳನ್ನು ವಿಮರ್ಶೆ ಮಾಡಲಿ. ಅಸ್ತಿತ್ವಕ್ಕೆ ಅರ್ಥ, ವ್ಯಕ್ತಿತ್ವಕ್ಕೆ ಬೆಲೆ, ವಿಚಾರಕ್ಕೆ ಮಾನ್ಯತೆ ಈ ಮೂರು ಚಿದಾನಂದಮೂರ್ತಿಯವರಲ್ಲಿತ್ತು. ಅವರಲ್ಲಿದ್ದ ನಿರಂತರ ಅಧ್ಯಯನ ನಿಷ್ಠೆಯನ್ನು ನಾವು ಪಾಲಿಸೋಣ. ಕನ್ನಡ ವಿಶ್ವವಿದ್ಯಾನಿಲಯ ಆರಂಭಕ್ಕೆ ಚಿದಾನಂದಮೂರ್ತಿ ಕಾರಣ. ನನಗೆ ಸಿಕ್ಕಿರುವ ದೊಡ್ಡ ಗೌರವವನ್ನು ಚಿತ್ರದುರ್ಗದ ಜನಕ್ಕೆ ಅರ್ಪಿಸುತ್ತೇನೆಂದರು.
ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಪ್ರಶಸ್ತಿ ಪ್ರದಾನ ಮಾಡಿದರು.
ರಾಜಾವೀರ ಮದಕರಿನಾಯಕ ಟ್ರೇಡರ್ಸ್ನ ಮಾಲೀಕ ಕುಮಾರ್ ಬಡಪ್ಪ, ಶಾಸನ ತಜ್ಞ ಹಾಗೂ ಇತಿಹಾಸ ಸಂಶೋಧಕ ಡಾ.ಎನ್.ಎಸ್.ಮಹಂತೇಶ ಮಾತನಾಡಿದರು.
ಇದನ್ನೂ ಓದಿ: SJM ಫಾರ್ಮಸಿ ಕಾಲೇಜು ವಿದ್ಯಾರ್ಥಿನಿ ಅಮೂಲ್ಯಗೆ ಚಿನ್ನದ ಪದಕ
ಚಿದಾನಂದ ಪ್ರಶಸ್ತಿ ಪ್ರದಾನ ಸಮಿತಿ ಅಧ್ಯಕ್ಷ ಡಾ.ಸಿ.ಯು.ಮಂಜುನಾಥ್, ರೇಣುಕಾ ಪ್ರಕಾಶನದ ಗೌರವಾಧ್ಯಕ್ಷೆ ವೈ.ಗುಣವತಿ ಮಹಾಂತೇಶ್, ಜಾನಪದ ತಜ್ಞ ಡಾ.ಮೀರಾಸಾಬಿಹಳ್ಳಿ ಶಿವಣ್ಣ, ಪ್ರೊ.ಹೆಚ್.ಲಿಂಗಪ್ಪ, ಮೃತ್ಯುಂಜಯ, ನಗರಸಭೆ ಮಾಜಿ ಸದಸ್ಯ ನಾಗರಾಜ್, ಅಪರಾಧಶಾಸ್ತ್ರ ವಿಶ್ರಾಂತ ಪ್ರಾಧ್ಯಾಪಕ ಡಾ.ನಟರಾಜ್, ಮದಕರಿನಾಯ ಸಾಂಸ್ಕøತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿ ನಾಯಕ, ನ್ಯಾಯವಾದಿ ಎಚ್.ಎಂ.ಎಸ್.ನಾಯಕ, ಎಂ.ಜಿ.ರಂಗಸ್ವಾಮಿ, ನಿರಂಜನ ದೇವರಮನೆ ಸೇರಿದಂತೆ ಡಾ.ಲಕ್ಷ್ಮಣ್ತೆಲಗಾವಿರವರ ಅಪಾರ ಅಭಿಮಾನಿಗಳು ವಿದ್ಯಾರ್ಥಿಗಳು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
