CHITRADURGA NEWS | 30 MARCH 2024
ಚಿತ್ರದುರ್ಗ: ಮಾಜಿ ಸಿಎಂ ಯಡಿಯೂರಪ್ಪ ಅವರ ಕುಟುಂಬದ ಕೃಪಾಶೀರ್ವಾದದಿಂದ ಎಂ.ಚಂದ್ರಪ್ಪ ಶಾಸಕರಾಗಿದ್ದಾರೆ. ಇದನ್ನು ಅವರು ಮರೆಯಬಾರದು. ಕೂಡಲೇ ಯಡಿಯೂರಪ್ಪ ಅವರಿಗೆ ಕ್ಷಮೆ ಕೋರಬೇಕು ಎಂದು ಹೊಳಲ್ಕೆರೆಯ ಅಗ್ರಹಾರದ ಮಂಜುನಾಥ್ ಆಗ್ರಹಿಸಿದರು.
‘ಲಿಂಗಾಯತ ಸಮುದಾಯ ಹಾಗೂ ಯಡಿಯೂರಪ್ಪ ಅವರ ಬಗ್ಗೆ ಕೀಳಾಗಿ ಮಾತಾಡುವುದು ಸರಿಯಲ್ಲ. ಕೂಡಲೇ ಕ್ಷಮೆ ಕೇಳಬೇಕು. ಗೋವಿಂದ ಕಾರಜೋಳ ಅವರು ನಿರಾತಂಕವಾಗಿ ಚುನಾವಣೆ ಮಾಡಬಹುದು. ನಾವು ಹೆಚ್ಚಿನ ಮತಗಳನ್ನು ಹಾಕಿಸುತ್ತೇವೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಚಂದ್ರಪ್ಪ ತಮ್ಮ ಚುನಾವಣೆಯನ್ನು ಮಾಡಿದ್ದಾರೆಯೇ ಹೊರೆತು ಬೇರೆ ಯಾವ ಚುನಾವಣೆಯನ್ನು ಮಾಡಿಲ್ಲ. ಇಂದು ಕೂಡ ತಮಗೆ ಬೇಕಿರುವ ಕೆಲವು ಜನರನ್ನು ಇಟ್ಟುಕೊಂಡು ಸಭೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದು ಬರಲಿ’ ಎಂದು ಸವಾಲ್ ಹಾಕಿದರು.
ಕ್ಲಿಕ್ ಮಾಡಿ ಓದಿ: ನಾಲ್ವರು ಶಿಕ್ಷಕರು ಅಮಾನತು | ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಕರ್ತವ್ಯ ಲೋಪ
ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಸದಸ್ಯ ಜಯಸಿಂಹ ಕಾಟ್ರೋತ್ ಮಾತನಾಡಿ, ‘ಕುಟುಂಬಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆಯೇ ಹೊರತು ಬೇರೆ ಯಾವ ಕಾರ್ಯ ಮಾಡುತ್ತಿಲ್ಲ. ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 10 ಸದಸ್ಯರನ್ನು ಗೆಲ್ಲಿಸಲು ಅವರಿಗೆ ಸಾಧ್ಯವಿಲ್ಲ. ಇವರಿಗೆ ಮುಂದಿನ ದಿನಗಳಲ್ಲಿ ಬಿಜೆಪಿಯ ನಿಷ್ಠಾವಂತರ ಶಾಪ ತಟ್ಟುತ್ತದೆ. ಕೂಡಲೇ ಕ್ಷಮೆಯಾಚಿಸಿ ಬಿಜೆಪಿ ಪರವಾಗಿ ಕೆಲಸ ಮಾಡಬೇಕು’ ಎಂದು ತಿಳಿಸಿದರು.
ಅಗ್ರಹಾರ ಬಸವರಾಜ್, ತಿಪ್ಪೇಸ್ವಾಮಿ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
