CHITRADURGA NEWS | 19 JUNE 2025
ಚಿತ್ರದುರ್ಗ: 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದೆ.
Also Read: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ | ವಿವಿಧ ಹುದ್ದೆಗಳಿಗೆ ಅರ್ಜಿ

ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ, ಟೊಮ್ಯಾಟೋ ಹಾಗೂ ಕೆಂಪು ಮೆಣಸಿನಕಾಯಿ ಬೆಳೆಗಳಿಗೆ ವಿಮೆ ನೊಂದಣಿ ಮಾಡಬಹುದು.
ತೋಟಗಾರಿಕೆ ಬೆಳೆಗಳ ವಿವರ:
2025ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಗೆ ಅಧಿಸೂಚಿತ ತೋಟಗಾರಿಕೆ ಬೆಳೆಗಳ ವಿವರ ಇಂತಿದೆ. ಚಿತ್ರದುರ್ಗ ತಾಲ್ಲೂಕು ಕಸಬಾ, ತುರುವನೂರು ಹಾಗೂ ಹಿರೇಗುಂಟನೂರು ಹೋಬಳಿ (ಈರುಳ್ಳಿ ನೀರಾವರಿ, ಈರುಳ್ಳಿ ಮಳೆಯಾಶ್ರಿತ), ಭರಮಸಾಗರ ಹೋಬಳಿ (ಈರುಳ್ಳಿ ನೀರಾವರಿ, ಟೊಮೋಟೊ). ಚಳ್ಳಕೆರೆ ತಾಲ್ಲೂಕಿನ ಕಸಬಾ, ನಾಯಕನಹಟ್ಟಿ, ಪರುಶುರಾಂಪುರ ಹಾಗೂ ತಳಕು ಹೋಬಳಿಗೆ (ಈರುಳ್ಳಿ ನೀರಾವರಿ, ಟೊಮೋಟೊ) ಹಿರಿಯೂರು ತಾಲ್ಲೂಕು ಕಸಬಾ ಹೋಬಳಿ (ಈರುಳ್ಳಿ ನೀರಾವರಿ) ಧರ್ಮಪುರ ಹೋಬಳಿ (ಈರುಳ್ಳಿ ನೀರಾವರಿ, ಟೊಮೋಟೋ) ಐಮಂಗಲ, ಜೆ.ಜಿ.ಹಳ್ಳಿ ಹೋಬಳಿಗೆ (ಈರುಳ್ಳಿ ನೀರಾವರಿ, ಈರುಳ್ಳಿ ಮಳೆಯಾಶ್ರಿತ).
ಹೊಳಲ್ಕೆರೆ ತಾಲ್ಲೂಕು ರಾಮಗಿರಿ ಹಾಗೂ ತಾಳ್ಯ ಹೋಬಳಿ (ಈರುಳ್ಳಿ ನೀರಾವರಿ, ಈರುಳ್ಳಿ ಮಳೆಯಾಶ್ರಿತ, ಟೊಮೋಟೊ), ಹೊಸದುರ್ಗ ತಾಲ್ಲೂಕು ಕಸಬಾ ಹೋಬಳಿ (ಈರುಳ್ಳಿ ಮಳೆಯಾಶ್ರಿತ, ಟೊಮೊಟೊ, ಕೆಂಪು ಮೆಣಸಿನಕಾಯಿ (ಮಳೆಯಾಶ್ರಿತ). ಮೊಳಕಾಲ್ಮುರು ತಾಲ್ಲೂಕು ದೇವಸಮುದ್ರ ಹಾಗೂ ಕಸಬಾ ಹೋಬಳಿ (ಈರುಳ್ಳಿ ನೀರಾವರಿ, ಟೊಮೋಟೊ).
ವಿಮಾ ಕಂತಿನ ವಿವರ:
ಟೊಮ್ಯಾಟೋ ಬೆಳೆಯ ವಿಮೆ ಮೊತ್ತ ಹೆಕ್ಟೇರ್ಗೆ ರೂ.141500 ಇದ್ದು, ರೈತರ ವಿಮಾ ಕಂತು ರೂ.7075 ಆಗಿದೆ. ನೀರಾವರಿ ಈರುಳ್ಳಿ ವಿಮೆ ಮೊತ್ತ ಹೆಕ್ಟೇರ್ಗೆ ರೂ.80500 ಇದ್ದು, ರೈತರ ವಿಮಾ ಕಂತು ರೂ.4025 ಆಗಿದೆ. ಮಳೆ ಆಶ್ರಿತ ಈರುಳ್ಳಿ ವಿಮಾ ಮೊತ್ತ ಹೆಕ್ಟೇರ್ಗೆ ರೂ. 75750 ಆಗಿದ್ದು, ರೈತರ ಮಿಮಾ ಕಂತು ರೂ.3787.50 ಆಗಿದೆ. ಮಳೆ ಆಶ್ರಿತ ಕೆಂಪು ಮೆಣಸಿಕಾಯಿ ವಿಮಾ ಮೊತ್ತ ಹೆಕ್ಟೇರ್ಗೆ ರೂ.78750 ಆಗಿದ್ದು, ರೈತರ ವಿಮಾ ಕಂತು 3937.50 ಆಗಿದೆ. ಅಧಿಸೂಚಿತ ಬೆಳೆಗಳ ವಿಮೆಯನ್ನು ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ ಹಾಗೂ ಆರ್ಥಿಕ ಸಂಸ್ಥೆಗಳ ನೊಂದಣಿ ಮಾಡಬಹುದು.
Also Read: ಎರೆಹುಳು, ಕಾಂಪೋಸ್ಟ್ ಗೊಬ್ಬರ ತಯಾರಿ ತರಬೇತಿ | ಜೂ.20 ರಂದು | ರೈತರಿಗೆ ಆಹ್ವಾನ
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ. ನೀರಾವರಿ ಆಶ್ರಿತ ಈರುಳ್ಳಿ ಬೆಳೆ ವಿಮೆ ನೊಂದಣಿಗೆ ಜುಲೈ 15 ಕಡೆಯ ದಿನ. ದಿ ಓರಿಎಂಟಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಅನ್ನು ವಿಮಾ ಕಂಪನಿಯಾಗಿ ಜಿಲ್ಲೆಗೆ ನಿಗಧಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕೆ ಇಲಾಖೆ ಕಚೇರಿ, ರೈತ ಸಂಪರ್ಕ ಕೇಂದ್ರ ಅಥವಾ ಹತ್ತಿರದ ಬ್ಯಾಂಕುಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
