By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    6 hours ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    6 hours ago
    Rain
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
    6 hours ago
    Rudset Institute
    ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
    12 hours ago
    ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
    ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    18 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    17 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    18 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    2 days ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    3 days ago
Reading: Chitradurga: ಎಸ್.ನಿಜಲಿಂಗಪ್ಪ ಮನೆ ಮಾರಾಟ ಮಾಡ್ತಾರಂತೆ | ಬೆಲೆ ಹತ್ತು ಕೋಟಿಯಂತೆ..
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Chitradurga: ಎಸ್.ನಿಜಲಿಂಗಪ್ಪ ಮನೆ ಮಾರಾಟ ಮಾಡ್ತಾರಂತೆ | ಬೆಲೆ ಹತ್ತು ಕೋಟಿಯಂತೆ..

chitradurganews.com
Last updated: 12 November 2024 17:12
chitradurganews.com
2 years ago
Share
S Nijalingappa house
ಎಸ್.ನಿಜಲಿಂಗಪ್ಪ ಮನೆ
SHARE

CHITRADURGA NEWS | 12 NOVEMBER 2024

Contents
ಕಾಂಗ್ರೆಸ್‍ನಿಂದಲೂ ನಡೆದಿತ್ತು ಖರೀಧಿ ಪ್ರಹಸನ:ಮನೆ ಮಾರಾಟಕ್ಕಿದೆ, ಪತ್ರಿಕೆಯಲ್ಲಿ ಜಾಹೀರಾತು ಬಂತು:ಮತ್ಯಾಕೆ ಮನೆ ಖರೀದಿ ಆಗುತ್ತಿಲ್ಲ:ಮನೆ ಖರೀಧಿಗೆ ಇರುವ ತಾಂತ್ರಿಕ ಸಮಸ್ಯೆ ಏನು:ಎಲ್ಲಿದೆ ಗೊತ್ತಾ ನಿಜಲಿಂಗಪ್ಪ ಮನೆ:

ಚಿತ್ರದುರ್ಗ: ಕಳೆದ ಮೂರು ದಿನಗಳಿಂದ ಚಿತ್ರದುರ್ಗ (Chitradurga)ಕ್ಕೆ ಸಂಬಂಧಿಸಿದ ಸುದ್ದಿಯೊಂದು ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದೆ.

ರಾಷ್ಟ್ರನಾಯಕ, ಮಾಜಿ ಮುಖ್ಯಮಂತ್ರಿ, ಕರ್ನಾಟಕ ಏಕೀಕರಣ ಚುಳುವಳಿಯ ರೂವಾರಿ, ದಕ್ಷಿಣ ಭಾರತದಿಂದ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ದಿ.ಎಸ್.ನಿಜಲಿಂಗಪ್ಪ ಅವರ ಮನೆಗೆ ಸಂಬಂಧಿಸಿದ ಸುದ್ದಿ ಇದಾಗಿದೆ.

ಹೌದು, ಕಳೆದೊಂದು ದಶಕದಿಂದ ಎಸ್.ನಿಜಲಿಂಗಪ್ಪ ಅವರ ಮನೆ ಸದ್ದು, ಸುದ್ದಿ ಮಾಡುತ್ತಲೇ ಇದೆ. ಈ ಮನೆಯನ್ನು ಸರ್ಕಾರ ಖರೀಧಿಸಿ ಸ್ಮಾರಕ ಮಾಡಬೇಕು ಎನ್ನುವ ಒತ್ತಾಯ ನಿಜಲಿಂಗಪ್ಪ ಅವರ ಅನುಯಾಯಿಗಳು, ಅಭಿಮಾನಿಗಳು, ದುರ್ಗದ ಜನರಿಂದ ಕೇಳಿ ಬರುತ್ತಲೇ ಇದೆ.

ಇದನ್ನೂ ಓದಿ: ಒಂದೂವರೆ ಟಿಎಂಸಿ ನೀರು ಬಂದರೆ ವಿವಿ ಸಾಗರ ಭರ್ತಿ

ಈ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನ ಮಾಡಿತಾದರೂ, ಅದ್ಯಾಕೋ ಮಧ್ಯದಲ್ಲಿ ಕೈ ಚೆಲ್ಲಿ ಬಿಟ್ಟಿತ್ತು. ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ, ಚಿತ್ರದುರ್ಗದಲ್ಲಿ ನಡೆದ 75ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಸ್ಸೆನ್ ಮನೆಯನ್ನು ಸ್ಮಾರಕ ಮಾಡುವುದಾಗಿ ಘೋಷಿಸಿ 2 ಕೋಟಿ ರೂ.ಗಳನ್ನು ಖರೀಧಿಗಾಗಿ ಮೀಸಲಿಟ್ಟು, 1 ಕೋಟಿ ಬಿಡುಗಡೆ ಮಾಡಿದ್ದರು.

ಆದರೆ, ಸಕಾಲಕ್ಕೆ ಮಾರಾಟವಾಗದೆ, ವರ್ಷಗಳು ಕಳೆದವು. ಮತ್ತೊಂದು ಅವಧಿಗೆ ಯಡಿಯೂರಪ್ಪ ಮುಖ್ಯಮಂತ್ರಿ ಆದಾಗಲೂ ಈ ವಿಚಾರ ಪ್ರಸ್ತಾಪವಾಗಿ ಅಂದು ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರಿಗೆ ಮನೆ ಖರೀಧಿಸಿ ಸ್ಮಾರಕ ಮಾಡುವ ಹೊಣೆಗಾರಿಕೆ ನೀಡಿದ್ದರು.

s.nijalingapa
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌.ನಿಜಲಿಂಗಪ್ಪ

ಈ ಅವಧಿಯಲ್ಲಿ ಒಂದಿಷ್ಟು ಪ್ರಕ್ರಿಯೆಗಳು ನಡೆದು, 4.26 ಕೋಟಿ ರೂ.ಗಳಲ್ಲಿ ಮನೆ ಖರೀಧಿಸಿ, 74 ಲಕ್ಷದಲ್ಲಿ ಅಭಿವೃದ್ಧಿ ಮಾಡಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ವರದಿ ನೀಡಿದ್ದರು. ಅದರಂತೆ 5 ಕೋಟಿ ರೂ. ಅನುದಾನ ಜಿಲ್ಲಾಧಿಕಾರಿ ಖಾತೆಗೆ ಜಮೆಯೂ ಆಗಿತ್ತು.

ಇದನ್ನೂ ಓದಿ: ತಿರುಮಲ ಕಲ್ಯಾಣ ಮಂಟಪದಲ್ಲಿ ಮದುವೆ ನಿಲ್ಲಿಸಿದ ಅಧಿಕಾರಿಗಳು..!!

ಆದರೆ, ಆಗಿದ್ದೇನು ಎಂದು ನೋಡಿದರೆ ಮತ್ತದೇ ನಿರಾಶೆ. ಮನೆ ಖರೀಧಿ ಆಗಲೇ ಇಲ್ಲ. ಸ್ಮಾರಕ ಆಗಲೇ ಇಲ್ಲ. ಬದಲಾಗಿ ದಿನೇ ದಿನೇ ಶಿಥಿಲವಾಗುತ್ತಿದೆ. ಮನೆಯಲ್ಲಿರುವ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಸೂಕ್ತ ಭದ್ರತೆಯೇ ಇಲ್ಲದೆ ಸಾಕಷ್ಟು ಬಾರಿ ಕಳ್ಳತನ ನಡೆದಿರುವ ದೃಶ್ಯಗಳು ಮನೆಯಲ್ಲಿ ಕಂಡುಬರುತ್ತಿವೆ.

ಕಾಂಗ್ರೆಸ್‍ನಿಂದಲೂ ನಡೆದಿತ್ತು ಖರೀಧಿ ಪ್ರಹಸನ:

ಈ ನಡುವೆ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ಮನೆ ಖರೀಧಿ ಸಂಬಂಧ ಪತ್ರವೊಂದನ್ನು ಮೂರು ತಿಂಗಳ ಹಿಂದಷ್ಟೇ ಬರೆದಿದ್ದರು.

ಎಸ್.ನಿಜಲಿಂಗಪ್ಪ ಹಿರಿಯ ಕಾಂಗ್ರೆಸ್ ನಾಯಕರು. ಎಐಸಿಸಿ ಅಧ್ಯಕ್ಷರಾಗಿದ್ದವರು. ಅವರ ಮನೆಯನ್ನು ಕಾಂಗ್ರೆಸ್ ಪಕ್ಷದಿಂದ ಖರೀಧಿ ಮಾಡಿದರೆ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ. ಪಕ್ಷದ ಆಸ್ತಿಯಾಗುತ್ತದೆ ಎಂಬರ್ಥದಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರದಲ್ಲಿ ತಿಳಿಸಿದ್ದರು.

ಈ ಪತ್ರ ತಲುಪಿದ ಬಳಿಕ ಕೆಪಿಸಿಸಿ ಕಡೆಯಿಂದ ಮನೆಯನ್ನು ನೋಡಿ ಬರಲು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಚಿತ್ರದುರ್ಗಕ್ಕೆ ಬಂದೇ ಬಿಟ್ಟರು. ಈ ವೇಳೆ ಎಸ್.ನಿಜಲಿಂಗಪ್ಪ ಅವರ ಪುತ್ರ ಕಿರಣ್ ಶಂಕರ್ ಉಪಸ್ಥಿತರಿದ್ದು, ಮನೆಯನ್ನು ತೋರಿಸಿದ್ದರು.

ಇದನ್ನೂ ಓದಿ: ಎಸ್.ನಿಜಲಿಂಗಪ್ಪ ಮನೆ ಖರೀಧಿಗೆ ಮುಂದಾದ ಕಾಂಗ್ರೆಸ್ | ಮನೆ ವೀಕ್ಷಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇಡೀ ಮನೆಯನ್ನು ವೀಕ್ಷಿಸಿದ ಲಕ್ಷ್ಮೀ ಹೆಬ್ಬಾಳ್ಕರ್ ಮನೆಯ ಬಲ ಬದಿಯಲ್ಲಿರುವ ಮಾವಿನ ಗಿಡದ ಕೆಳಗೆ ಕುಳಿತು ಪ್ರಮುಖರೊಂದಿಗೆ ಚರ್ಚೆ ನಡೆಸಿ, ಗಣಪತಿ ಹಬ್ಬದ ನಂತರ ಮಾತುಕತೆಗೆ ಬರುವುದಾಗಿ ಎಸ್.ಎನ್.ಕಿರಣ್‍ಶಂಕರ್ ಅವರಿಗೆ ಮಾತು ಕೊಟ್ಟು ಹೋಗಿದ್ದರು.
Lakshmi hebbalkar meet kiran shankar
ಎಸ್.ನಿಜಲಿಂಗಪ್ಪ ಪುತ್ರ ಕಿರಣ್‍ಶಂಕರ್ ಜೊತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತುಕತೆ

ಮನೆ ಮಾರಾಟಕ್ಕಿದೆ, ಪತ್ರಿಕೆಯಲ್ಲಿ ಜಾಹೀರಾತು ಬಂತು:

ಕಾಂಗ್ರೆಸ್ ಪಕ್ಷದಿಂದ ಇನ್ನೇನು ಮನೆ ಖರೀದಿ ಆಗುತ್ತದೆ ಎನ್ನುತ್ತಿರುವಾಗಲೇ, ಎಸ್.ನಿಜಲಿಂಗಪ್ಪ ಅವರ ಪುತ್ರ ಕಿರಣ್ ಶಂಕರ್ ವಿಜಯವಾಣಿ ಪತ್ರಿಕೆಯಲ್ಲಿ ಮನೆ ಮಾರಾಟಕ್ಕಿದೆ ಎಂಬ ಜಾಹೀರಾತು ಪ್ರಕಟಿಸಿದ್ದಾರೆ.

ಪತ್ರಿಕೆಯಲ್ಲಿ ಮನೆ ಮಾರಾಟಕ್ಕಿದೆ ಎಂಬ ಜಾಹೀರಾತು ಬರುತ್ತಿದ್ದಂತೆ ಈ ವಿಚಾರ ಸಾಕಷ್ಟು ಸುದ್ದಿಯಾಗುತ್ತಿದೆ. ಮಾಜಿ ಮುಖ್ಯಮಂತ್ರಿಯೊಬ್ಬರ ಮನೆ, ಸ್ಮಾರಕವಾಗಬೇಕಿದ್ದ ಮನೆ ಮಾರಾಟಕ್ಕಿದೆ ಎಂಬ ಜಾಹೀರಾತು ಬಂತಲ್ಲ ಎಂಬ ವಿಚಾರ ಎಸ್ಸೆನ್ ಅನುಯಾಯಿಗಳಿಗೆ ಸಾಕಷ್ಟು ನೋವುಂಟು ಮಾಡಿದೆ.

ಇದನ್ನೂ ಓದಿ: ಎರಡು ದಿನ‌ ಚಿತ್ರದುರ್ಗಕ್ಕೆ ನೀರು ಬಂದ್

ಈ ಕಾರಣಕ್ಕೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ, ಕರ್ನಾಟಕ ಏಕೀಕರಣದ ರೂವಾರಿಗೆ ಸರ್ಕಾರ ನೀಡುವ ಗೌರವ ಇದೇನಾ ಎಂಬರ್ಥದಲ್ಲಿ ಟೀಕೆಗಳು ವ್ಯಕ್ತವಾಗುತ್ತಿವೆ.
ಎಸ್.ನಿಜಲಿಂಗಪ್ಪ ಅವರ ಮನೆ ಕುರಿತ ವೀಡಿಯೋ ಸ್ಟೋರಿ: 
https://youtu.be/F-ngQz39kpc

ಮತ್ಯಾಕೆ ಮನೆ ಖರೀದಿ ಆಗುತ್ತಿಲ್ಲ:

ಮನೆ ಖರೀಧಿಗೆ ಯಾಕೆ ವಿಳಂಬ ಆಗುತ್ತಿದೆ. ಸರ್ಕಾರ ಅನುದಾನ ಬಿಡುಗಡೆ ಮಾಡಿದರೂ ಯಾಕೆ ಖರೀದಿ ಆಗುತ್ತಿಲ್ಲ ಎನ್ನುವ ಪ್ರಶ್ನೆ ಅನೇಕರಲ್ಲಿ ಬಂದಿದೆ.

ಹಿಂದೆ ಕವಿತಾ ಮನ್ನಿಕೇರಿ ಅವರು ಜಿಲ್ಲಾಧಿಕಾರಿ ಆಗಿದ್ದಾಗ ಮನೆ ಖರೀಧಿ ಪ್ರಕ್ರಿಯೆಗೆ ಚಾಲನೆ ನೀಡಿದ್ದರು. ಇದಕ್ಕಾಗಿ ನಿಜಲಿಂಗಪ್ಪ ಅವರ ಮಗ, ಮೊಮ್ಮಗ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದರು.

ಇದನ್ನೂ ಓದಿ:  ಲಸಿಕೆಗಳು ಮಕ್ಕಳ ಮರಣ ತಪ್ಪಿಸುತ್ತವೆ | ಡಾ.ಡಿ.ಎಂ.ಅಭಿನವ್

ಅಮೇರಿಕಾದಲ್ಲಿ ನೆಲೆಸಿರುವ ಮೊಮ್ಮಗ ವಿನಯ್ ಆಗಮಿಸಿದ್ದರು. ಆದರೆ, ನೊಂದಣಿ ಆಗಲಿಲ್ಲ. ಅಧಿಕಾರಿಗಳು ತಾಂತ್ರಿಕ ನೆಪವೊಡ್ಡಿದರು.

ಮನೆ ಖರೀಧಿಗೆ ಇರುವ ತಾಂತ್ರಿಕ ಸಮಸ್ಯೆ ಏನು:

ಎಸ್.ನಿಜಲಿಂಗಪ್ಪ ಕಟ್ಟಿಸಿದ್ದ ಈ ಮನೆಯನ್ನು ಮೊಮ್ಮಗ ವಿನಯ್ ಹೆಸರಿಗೆ ವಿಲ್ ಬರೆದಿದ್ದಾರೆ. ನಿಜಲಿಂಗಪ್ಪ ಅವರ ಮೂವರು ಪುತ್ರರ ಅನುಭೋಗದ ನಂತರ ಮೊಮ್ಮಗನಿಗೆ ಸೇರತಕ್ಕದ್ದು ಎಂದು ಉಯಿಲಿನಲ್ಲಿ ಉಲ್ಲೇಖಿಸಲಾಗಿದೆ.

ಇದರಲ್ಲಿ ಎಸ್.ಎನ್.ಕಿರಣ್ ಶಂಕರ್ ಮಾತ್ರ ಮದುವೆಯಾಗಿದ್ದು, ಇನ್ನು ಇಬ್ಬರು ಸಹೋಧರರು ಮದುವೆ ಆಗಿಲ್ಲ. ಅದರಲ್ಲಿ ಹಿರಿಯ ಅಣ್ಣ ವಿನಯ್ ಹೆಸರಿಗೆ ಮನೆ ವರ್ಗಾವಣೆ ಮಾಡಲು ಕಾನೂನು ಪ್ರಕ್ರಿಯೆ ಮುಗಿಸಿದ್ದಾರೆ. ನಿಜಲಿಂಗಪ್ಪ ಅವರ 2ನೇ ಮಗ ರಾಜಣ್ಣ ನಿಧನರಾಗಿದ್ದಾರೆ.

ಈಗ ಎಸ್ಸೆನ್ ಮೊಮ್ಮಗ ಅಂದರೆ, ಕಿರಣ್ ಶಂಕರ್ ಅವರ ಪುತ್ರ ವಿನಯ್ ಹೆಸರಿಗೆ ಮನೆ ನೊಂದಣಿ ಆಗಿ, ಇ-ಸ್ವತ್ತೂ ಆಗಿದೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಬಸ್ ಸಂಚಾರ ವ್ಯವಸ್ಥೆ ಬದಲಾವಣೆ | ಟ್ರಾಫಿಕ್ ಸಮಸ್ಯೆ ಮುಕ್ತಿಗೆ ಜಿಲ್ಲಾಡಳಿತ ನಿರ್ಧಾರ

ಆದರೆ, ಜಿಲ್ಲಾಡಳಿತ ಮನೆ ನೊಂದಣಿಗೆ ನಿಜಲಿಂಗಪ್ಪ ಅವರ ಇಡೀ ಕುಟುಂಬ ಬರಬೇಕು. ಅಂದರೆ, ಅವರ ಪುತ್ರಿಯರು ಬರಬೇಕು ಎಂಬ ಷರತ್ತು ವಿಧಿಸಿದ್ದ ಕಾರಣಕ್ಕೆ ಮನೆ ಖರೀಧಿ ಆಗಿಲ್ಲ.

ಜಿಲ್ಲಾಡಳಿತದ ಈ ನಿರ್ಧಾರದಿಂದ ಬೇಸತ್ತ ಎಸ್.ನಿಜಲಿಂಗಪ್ಪ ಅವರ ಪುತ್ರ ಕಿರಣ್ ಶಂಕರ್ ಮನೆಯನ್ನು ಸರ್ಕಾರಕ್ಕೆ ಮಾರಾಟ ಮಾಡದೇ, ಖಾಸಗಿಯವರಿಗೆ ಮಾರಲು ನಿರ್ಧರಿಸಿದ ಪರಿಣಾಮವೇ ಕಾಂಗ್ರೆಸ್ ಖರೀಧಿಗೆ ಮುಂದಾಗಿದ್ದು, ಈಗ ಪತ್ರಿಕೆಯಲ್ಲಿ ಜಾಹೀರಾತು ಬಂದಿರುವುದು.

ಎಲ್ಲಿದೆ ಗೊತ್ತಾ ನಿಜಲಿಂಗಪ್ಪ ಮನೆ:

ಚಿತ್ರದುರ್ಗ ನಗರದ ಹೃದಯ ಭಾಗದಲ್ಲಿ ಜಿಲ್ಲಾಧಿಕಾರಿ ಬಂಗಲೆ ಪಕ್ಕದ ರಸ್ತೆಯಲ್ಲಿ ಪೂರ್ವಾಭಿಮುಖವಾಗಿ ಪಾರಂಪರಿಕ ಕಟ್ಟಡದಂತೆ ನಿಜಲಿಂಗಪ್ಪ ಅವರ ಮನೆ ಇದೆ.

ಚಿತ್ರದುರ್ಗದಲ್ಲಿ ವಕೀಲಿ ವೃತ್ತಿ ಮಾಡುವಾಗ ಎಸ್.ನಿಜಲಿಂಗಪ್ಪ ಅವರು, 117*130 ಅಡಿ ಜಾಗ ಖರೀಧಿಸಿ ಇದರಲ್ಲಿ 2600 ಚದರ ಅಡಿ ವ್ಯಾಪ್ತಿಯಲ್ಲಿ ಈ ಮನೆಯನ್ನು ನಿರ್ಮಾಣ ಮಾಡಿದ್ದರು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆ | ಮಂಗಳವಾರದ ಹತ್ತಿ ರೇಟ್ ಇಲ್ಲಿದೆ..

ನಿಜಲಿಂಗಪ್ಪ ಅವರ ಈ ಮನೆಯನ್ನು ದುರ್ಗದ ಜನ ಅಭಿಮಾನದಿಂದ ವೈಟ್ ಹೌಸ್ ಎಂದು ಕರೆಯುತ್ತಾರೆ. ಮಾಜಿ ಮುಖ್ಯಮಂತ್ರಿ ಆದವರು ಬೆಂಗಳೂರಿನಲ್ಲಿ ನೆಲೆಸುತ್ತಾರೆ ಎನ್ನುವ ಮಾತಿಗೆ ವ್ಯತಿರಿಕ್ತವಾಗಿ, ಎಸ್ಸೆನ್ ತಮ್ಮ ಕೊನೆಯ ದಿನಗಳನ್ನು ಇದೇ ಮನೆಯಲ್ಲಿ ಕಳೆದಿದ್ದರು ಎನ್ನುವುದು ವಿಶೇಷ.

ನಾಲ್ಕು ಬಾರಿ ಮುಖ್ಯಮಂತ್ರಿ, ಒಮ್ಮೆ ಸಂಸದರು, ಎಐಸಿಸಿ ಅಧ್ಯಕ್ಷರಾಗಿದ್ದ ನಿಜಲಿಂಗಪ್ಪ 1937 ರಲ್ಲಿ ಕಟ್ಟಿಸಿಕೊಂಡು ಏಕೈಕ ಮನೆ ಇದು. ಅವರ ಹೆಸರಿನಲ್ಲಿರುವ ಏಕೈಕ ಸ್ಥಿರಾಸ್ಥಿಯೂ ಇದೇ ಆಗಿದೆ. ಈಗ ಅದೇ ಮಾರಾಟಕ್ಕಿದೆ.

ಈ ವಿಚಾರ ದುರ್ಗದಲ್ಲಿ ಅಜ್ಜನ ಮನೆ ಮಾರಾಟಕ್ಕಿದೆಯಂತೆ, 10 ಕೋಟಿಯಂತೆ ಎಂಬರ್ಥದಲ್ಲಿ ಚರ್ಚೆಯಾಗುತ್ತಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDream Housefeaturedformer Chief MinisterHosadurgaKannada NewsNijalingappa House For SaleS. Nijalingappaಎಸ್.ನಿಜಲಿಂಗಪ್ಪಕನಸಿನ ಮನೆಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ನಿಜಲಿಂಗಪ್ಪ ಮನೆ ಮಾರಾಟಕ್ಕೆಫೀಚರ್ಡ್ಮಾಜಿ ಮುಖ್ಯಮಂತ್ರಿಹೊಸದುರ್ಗ
Share This Article
Facebook Email Print
Previous Article CHITRADURGA APMC: ಚಿತ್ರದುರ್ಗ ಮಾರುಕಟ್ಟೆ | ಮಂಗಳವಾರದ ಹತ್ತಿ ರೇಟ್ ಇಲ್ಲಿದೆ..
Next Article Javanagondanahally GP ZP: ಕರ್ತವ್ಯ ನಿರ್ಲಕ್ಷ್ಯ ಜವನಗೊಂಡನಹಳ್ಳಿ ಪಿಡಿಓ ಅಮಾನತು
Leave a Comment

Leave a Reply Cancel reply

Your email address will not be published. Required fields are marked *

ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
ಮುಖ್ಯ ಸುದ್ದಿ
ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
ಮುಖ್ಯ ಸುದ್ದಿ
Rain
ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
ಮುಖ್ಯ ಸುದ್ದಿ
Rudset Institute
ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up