
CHITRADURGA NEWS | 30 MAY 2024
ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ಗ್ರಾಮದಲ್ಲಿ ಗುರುವಾರ ಹುಚ್ಚಯ್ಯನ ಉತ್ಸವವು ಅದ್ದೂರಿಯಾಗಿ ಜರುಗಿತು.
ಇದನ್ನೂ ಓದಿ: ಪತ್ರಿಕೆ ವಿತರಕರ ನಡಿಗೆ ಕೋಟೆ ನಗರಿ ಕಡೆಗೆ | ಸೆಪ್ಟೆಂಬರ್ 8 ರಂದು ರಾಜ್ಯ ಸಮ್ಮೇಳನ
ಗ್ರಾಮದಲ್ಲಿ ಹುಚ್ಚಯ್ಯನ ಮೆರವಣಿಗೆ ನಡೆಯಿತು. ಹುಚ್ಚಯ್ಯನ ಮೆರವಣಿಗೆಯಲ್ಲಿ ಸುಮಾರು 70 ಜನರ ಕಲಾತಂಡ ಭಾಗವಹಿಸಿದ್ದವು, ಭಟ್ಕಳದ ಕಲಾತಂಡದವರು ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಸುಮಾರು 8 ಗಂಟೆಯಿಂದ ಮೆರವಣಿಗೆ ಪ್ರಾರಂಭಗೊಂಡು ಮಧ್ಯಾಹ್ನ 3ರ ತನಕ ನಡೆಯಿತು, ಗ್ರಾಮದ ಜನರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹುಚ್ಚಯ್ಯನ ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ: ಶಿಕ್ಷಕರ ಧ್ವನಿಯಾದ ನಾರಾಯಣಸ್ವಾಮಿ | ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ
ಸೋಮವಾರದಿಂದ ಶ್ರೀ ಮರುಡಾಂಬಿಕಾ ದೇವಿ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಮಂಗಳವಾರ ದೇವಿಯ ಮೊದ್ಲುಗಿತ್ತಿ ಉತ್ಸವ ನಡೆಯಿತು. ಅಂದು ಗ್ರಾಮದ ಬೀದಿಗಳಲ್ಲಿ ದೇವಿಯ ಮೆರವಣಿಗೆ ಕಾರ್ಯಕ್ರಮ ನಡೆಯಿತು. ಬುಧವಾರ ಸಂಜೆ ಹೂವಿನ ಪಲ್ಲಕ್ಕಿ ಉತ್ಸವ ಜರುಗಿತು.
ನಾಳೆ 4 ಗಂಟೆಗೆ ತೇರು, ಶನಿವಾರ ಸಂಜೆ 6 ಗಂಟೆಗೆ ಸಿಡಿಯು, ಭಾನುವಾರ ಗಾವು ಹಾಗೂ ಜಾತ್ರಾ ಮಹೋತ್ಸವ ನಡೆಯಲಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
