CHITRADURGA NEWS | 05 MARCH 2024
ಚಿತ್ರದುರ್ಗ: ಎಲ್ಲರ ಮನೆಯಲ್ಲು ಮಾನವರು ಹುಟ್ಟುತ್ತಾರೆ, ಮನುಷ್ಯತ್ವ ಹುಟ್ಟುವುದಿಲ್ಲ, ಪ್ರತಿ ಮನೆಯಲ್ಲಿ ಮಾನವೀಯತೆ ಕಾರ್ಯಗಳು ನಡೆದಾಗ ಆ ಮನೆಯ ಮಾನವ ನಿಜವಾದ ಮಾನವ, ಇಲ್ಲವಾದರೆ ದಾನವನಾಗುತ್ತಾನೆ ಎಂದು ಶ್ರಿ ಬಸವಪ್ರಭು ಸ್ವಾಮಿಜಿ ನುಡಿದರು.
ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆದ 34ನೇ ವರ್ಷದ 3ನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.

ಇದನ್ನೂ ಓದಿ: ಚಿತ್ರದುರ್ಗ ರೈಲ್ವೆ ಯೋಜನೆಗಳಿಗೆ ಶುಕ್ರದೆಸೆ | ನೇರ, ಮಾರ್ಗಕ್ಕೆ ಅನುದಾನ ಬಿಡುಗಡೆ
ಇಂದಿನ ದಿನಗಳಲ್ಲಿ ಮದುವೆ ಆದ ನಂತರ ಅತ್ತೆ-ಮಾವ, ತಂದೆ-ತಾಯಿಯನ್ನು ದೂರವಿಡುತ್ತಾರೆ. ಮನೆಯಲ್ಲಿ ಪ್ರಾಣಿ-ಪಕ್ಷಿಗಳಿಗೆ ತೋರಿಸುವ ಪ್ರೀತಿ ಮತ್ತು ಕರುಣೆಯನ್ನು ಹಿರಿಯ ಜೀವಗಳಿಗೆ ತೋರಿಸಿ, ಅವರೊಟ್ಟಿಗೆ ಕೂಡಿಬಾಳುವುದರಿಂದ ಕುಟುಂಬದಲ್ಲಿ ನೆಮ್ಮದಿ ಸಾಧ್ಯವಾಗುತ್ತದೆ. ನಾವು ಮಾನವರಾಗಿ ಹುಟ್ಟುತ್ತೇವೆ, ಮಾನವರ ಜತೆ ಮಾನವತೆಯ ಪ್ರೀತಿಯಿರಬೇಕು, ಆಗ ಅವನ ಜೀವನ ಸಾರ್ಥಕವಾಗುತ್ತದೆ. ಮಾನವತೆಯಿಲ್ಲದಾಗ ಅವನು ದಾನವನಾಗುತ್ತಾನೆ, ಜಗತ್ತಿನಲ್ಲಿ ಮಾನವೀಯತೆ ದೊಡ್ಡದು, ವಧು ವರರು ಮಾನವೀಯ ಗುಣಗಳಿಂದ ಹಿರಿಯರನ್ನು ಕಾಣಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಜೋಗಿಮಟ್ಟಿ ಮಡಿಲಲ್ಲಿ ಧ್ಯಾನಮಗ್ನ ಮುಕ್ತಿನಾಥ | 31 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ ದಿನಗಣನೆ
ಶ್ರೀ ಪ್ರಭುಲಿಂಗ ಸ್ವಾಮಿಗಳು ಮಾತನಾಡಿ, ಚಿತ್ರದುರ್ಗ ಮುರುಘಾಮಠದಲ್ಲಿ ಬಡವರ ಕಲ್ಯಾಣ ನಡೆಸಿಕೊಡುವುದರ ಉದ್ದೇಶ ಆರ್ಥಿಕವಾಗಿ ದುರ್ಬಲವಾಗಿರುವ ಬಡವರು ಬದುಕನ್ನು ಕಟ್ಟಿಕೊಳ್ಳಲು ನೆರವಾಗಿರುವುದು ಸ್ಮರಣೀಯ ಎಂದರು.
ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ 8 ಜೋಡಿಗಳಿಗೆ ವಿವಾಹ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜಪೀರ್, ವೀರಭದ್ರಪ್ಪ, ಟಿ.ಪಿ.ಜ್ಞಾನಮೂರ್ತಿ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
