
CHITRADURGA NEWS | 10 JANUARY 2024
ಚಿತ್ರದುರ್ಗ (CHITRADURGA): ‘ನನ್ನ ಮಗು ಎಲ್ಲಿ ನನ್ನಿಂದ ದೂರವಾಗುತ್ತದೆಯೋ ಎಂಬ ಆತಂಕ, ಭಯದಿಂದ ನಾನೇ ನನ್ನ ಕೈಯಿಂದ ಸಾಯಿಸಿದೆ…ನನ್ನ ನನಗೆ ಮಗನ ಮೇಲೆ ಇದ್ದ ಅಪಾರ ಪ್ರೀತಿಯೇ ಈ ಎಲ್ಲದಕ್ಕೂ ಕಾರಣ’ ಎಂಬ ಆಘಾತಕಾರಿ ಸಂಗತಿಯನ್ನು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್ ಅಪ್ ಮೈಂಡ್ಫುಲ್ ಎಐ ಲ್ಯಾಬ್ಸ್ನ ಸಹ ಸಂಸ್ಥಾಪಕಿ, ಸಿಇಒ ಸುಚನಾ ಸೇಠ್ (39) ಇದೀಗ ಗೋವಾ ಪೊಲೀಸರ ಮುಂದೆ ತೆರೆದಿಟ್ಟಿದ್ದಾಳೆ.
ಇದನ್ನೂ ಓದಿ: ಅಮ್ಮ…ಅಪ್ಪನ ಜತೆ ಮಾತನಾಡಿದ್ದೇ ತಪ್ಪಾಯಿತೇ..? | ದಿಂಬು ಬಳಸಿ ಉಸಿರು ನಿಲ್ಲಿಸಿರುವ ಶಂಕೆ
‘ಮದುವೆಯಾಗಿ ಒಂಬತ್ತು ವರ್ಷದ ವರ್ಷದ ಬಳಿಕ ತಾಯಿಯಾದ ನನಗೆ ಮಗನ ಬಗ್ಗೆ ಹೆಚ್ಚು ಪ್ರೀತಿಯಿತ್ತು. 2008 ರಲ್ಲಿ ಬೆಂಗಳೂರಿಗೆ ಬಂದ ನನಗೆ ವೇಳೆ ತಮಿಳುನಾಡಿನ ವೆಂಕಟರಮಣ ಪರಿಚಯವಾಗಿದ್ದರು. 2010ರಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿವು. ಆದರೆ 9 ವರ್ಷದ ಬಳಿ ಅಂದರೆ 2019 ರಲ್ಲಿ ಮಗ ಚಿನ್ಮಯ್ ಜನಿಸಿದ. ಬಳಿಕ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ಈ ವೇಳೆ ಪರಸ್ಪರ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದೇವು. ಪ್ರತಿ ಭಾನುವಾರ ಮಗನೊಂದಿಗೆ ತಂದೆ ಮಾತನಾಡಲು ಕೋರ್ಟ್ ಅವಕಾಶ ನೀಡಿತ್ತು. ಆದರೆ ಇದು ನನಗೆ ಇಷ್ಟವಿರಲಿಲ್ಲ’ ಎಂದು ತನಿಖೆ ವೇಳೆ ತಿಳಿಸಿದ್ದಾಳೆ.
ಇದನ್ನೂ ಓದಿ: ಹತ್ಯೆ ಮಾಡಿದ ತಾಯಿ ಪೊಲೀಸ್ ಕಸ್ಟಡಿಗೆ | ಮೃತ ಮಗು ಅಪ್ಪನ ಮಡಿಲಿಗೆ
ಮಗುವಿನ ಮೇಲಿನ ಪ್ರೀತಿ ಹಾಗೂ ಮಾಜಿ ಗಂಡನ ಮೇಲಿನ ದ್ವೇಷದಿಂದಾಗಿಯೇ ಈ ಕೊಲೆ ಮಾಡಿದ್ದೇನೆ. ತನ್ನ ದಿನಚರಿ ಹೇಳುತ್ತದೆ ಹಾಗು ತಂದೆಯ ಜೊತೆ ಬಾಂಧವ್ಯ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ಪತಿ ವೆಂಕಟರಮಣ ಕರೆ ಮಾಡಿದಾಗ ಕರೆ ಸ್ವೀಕರಿಸುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯಾಲಯದಲ್ಲಿ ಮಗು ತಂದೆ ಜೊತೆ ಹೋಗಿಬಿಡಬಹುದು ಹಾಗು ಕೋರ್ಟ್ ಕೂಡ ಇದಕ್ಕೆ ಸಮ್ಮತಿ ಸೂಚಿಸಬಹುದು ಎಂಬ ಕಾರಣಕ್ಕೆ ಕೃತ್ಯ ಎಸಗಿರುವುದು ಇದೀಗ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಹೆತ್ತ ಕಂದನ ಕೊಂದು ನಿರ್ಭಾವುಕಳಾಗಿ ಕಾರು ಹತ್ತಿದ ತಾಯಿ | ಮಗನ ಶವದೊಂದಿಗೆ 395 ಕಿ.ಮೀ ಸಾಗಿದ ನಂತರ ಅರೆಸ್ಟ್
‘ನಮ್ಮ ವಿಚ್ಛೇದನ ಪ್ರಕರಣ ಕೋರ್ಟ್ನಲ್ಲಿದೆ. ವಾರಕ್ಕೊಮ್ಮೆ ಪತಿ ವೆಂಕಟರಮಣನಿಗೆ ಮಗುವನ್ನು ವಿಡೀಯೋ ಕಾಲ್ ಮೂಲಕ ತೋರಿಸಬೇಕಿತ್ತು. ಅದು ನನಗೆ ಒಂದಿಷ್ಟಯ ಇಷ್ಟ ಇರಲಿಲ್ಲ. ನನ್ನ ಮಗು ಕಂಡರೆ ನನಗೆ ಬಹಳ ಪ್ರೀತಿ. ಹೀಗಾಗಿ ನಾನು ಮಗುವಿನ ಪ್ರಜ್ಞೆ ತಪ್ಪಿಸಲು ಮುಖಕ್ಕೆ ದಿಂಬಿನಿಂದ ಒತ್ತಿ ಹಿಡಿದೆ. ಮಗು ಪ್ರಜ್ಞೆ ತಪ್ಪಿದೆ ಎಂದುಕೊಂಡಿದ್ದೆ. ಆದರೆ ಮಗು ಸಾವನ್ನಪ್ಪಿತ್ತು. ಇದೇ ನೋವಿನಲ್ಲಿ ಕೈ ಕುಯ್ದು ಆತ್ಮಹತ್ಯೆಗೆ ಯತ್ನಿಸಿದೆ. ಅದು ಸಾಧ್ಯವಾಗಿಲ್ಲ. ಗಾಬರಿಯಲ್ಲಿ ಏನೂ ಮಾಡಬೇಕೆಂದು ತೋಚದೆ ಸೂಟ್ಕೇಸ್ನಲ್ಲಿ ಹಾಕಿ ಪರಾರಿಯಾಗಲು ಯತ್ನಿಸಿದೆ’ ಎಂದು ಹೇಳಿದ್ದಾಳೆ.
ಇದನ್ನೂ ಓದಿ: ಗೋವಾದಲ್ಲಿ ಮಗನನ್ನು ಕೊಂದ ತಾಯಿ ಚಿತ್ರದುರ್ಗದಲ್ಲಿ ಬಂಧನ | ಬ್ಯಾಗ್ನಲ್ಲಿ ಶವದೊಂದಿಗೆ ಕಾರಿನಲ್ಲಿ ಪ್ರಯಾಣ
ಯಶವಂತಪುರದ ಬಳಿಯ ಬ್ರಿಗೇಡ್ ಗೇಟ್ವೇ ರೆಸಿಡೆನ್ಸಿಯ ಫ್ಲ್ಯಾಟ್ನಲ್ಲಿ ಮೃತ ಮಗುವಿನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಹರಿಶ್ಚಂದ್ರ ಘಾಟ್ನಲ್ಲಿ ಅಂತ್ಯಕ್ರಿಯೆಯನ್ನು ತಂದೆ ವೆಂಕಟರಮಣ ನೆರವೇರಿಸಿದರು. ಬ್ರಿಗೇಡ್ ಅಪಾರ್ಟ್ಮೆಂಟ್ನಲ್ಲಿ ಸ್ಥಳೀಯ ಪೊಲೀಸರು ಬಿಗಿ ಭದ್ರತೆ ಹಾಕಿದ್ದಾರೆ. ಗೋವಾ ಪೊಲೀಸರು ಕೂಡ ಹೆಚ್ಚಿನ ತನಿಖೆಗಾಗಿ ಫ್ಲಾಟ್ನಲ್ಲಿ ಬೀಡು ಬಿಟ್ಟಿದ್ದಾರೆ.
ಇದನ್ನೂ ಓದಿ: ಮಗುವನ್ನು ಕೊಂದ ತಾಯಿ ಪ್ರಕರಣ | ಬಂಧನಕ್ಕೆ ನೆರವಾದ ಐಮಂಗಲ ಪೊಲೀಸ್
ಸುಚನಾ ಸೇಠ್ ಅವರನ್ನು ಈಗಾಗಲೇ ಆರು ದಿನಗಳ ಕಾಲ ಗೋವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಬಳಸಿದ್ದ ದಿಂಬುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉತ್ತರ ಗೋವಾದ ಕ್ಯಾಂಡೋಲಿಮ್ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆ ಅರ್ಪಾಟ್ಮೆಂಟ್ನಿಂದ ಸೋಮವಾರ ಬೆಳಿಗ್ಗೆ ನಾಲ್ಕು ವರ್ಷದ ಮಗನನ್ನು ಕೊಲೆ ಮಾಡಿದ ಸುಚನಾ ಸೇಠ್ (39)ಟ್ಯಾಕ್ಸಿಯಲ್ಲಿ ಶವದ ಸೂಟ್ಕೇಸ್ ಜತೆ ಪಯಣ ಬೆಂಗಳೂರಿಗೆ ಪಯಣ ಬೆಳಸುವಾಗ ಐಮಂಗಲ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
