CHITRADURGA NEWS | 07 FEBRUARY 2026
ಚಿತ್ರದುರ್ಗ: ಮತಾಂತರದ ವಿಚಾರದಲ್ಲಿ ಹಿಂದುಗಳು ಒಗ್ಗಟ್ಟಾಗಬೇಕಿದೆ. ಹಿಂದೂಗಳು ಸಂಘಟಿತರಾಗದಿದ್ದರೆ ಮುಂದೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಎಚ್ಚರಿಸಿದರು.
ಇದನ್ನೂ ಓದಿ: ನಾಳೆ ಚಿತ್ರದುರ್ಗ ಸೇರಿ ಹಲವೆಡೆ ವಿದ್ಯುತ್ ವ್ಯತ್ಯಯ
ಲಕ್ಷ್ಮೀಸಾಗರ ಗ್ರಾಮಪಂಚಾಯಿತಿ ವ್ಯಾಪ್ತಿಯ ಐನಳ್ಳಿ ಲಕ್ಷ್ಮೀಸಾಗರದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು.
ಸಂಘಟನೆ ಇಲ್ಲದಿದ್ದರೆ ದೇಶವನ್ನು ಉಳಿಸಲು ಸಾಧ್ಯವಿಲ್ಲ. ಹೀಗಾಗಿ ಹಿಂದುಗಳನ್ನು ಸಂಘಟಿಸುವ ಕೆಲಸ ಆಗಬೇಕಿದೆ ಎಂದರು.
ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳುವಲ್ಲಿ ಭಾರತೀಯರು ವಿಫಲರಾಗಿದ್ದೇವೆ. ಪರಿಣಾಮ ಒಗ್ಗಟ್ಟು ಸಾಧಿಸಲು ಸಾಧ್ಯವಾಗುತ್ತಿಲ್ಲ. ಇಂದು ಮಕ್ಕಳಿಗೆ ಭಾರತೀಯತೆ, ದೇಶಭಕ್ತಿ ಕಲಿಸುತ್ತೇವೆಂದರೆ, ಭಗವದ್ಗೀತೆ ಶ್ಲೋಕ, ರಾಮಾಯಣ, ಮಹಾಭಾರತವನ್ನು ಹೇಳಿ ಕೊಡುತ್ತೇವೆಂದರೆ ವಿರೋಧ ಮಾಡುವವರು ನಮ್ಮ ನಡುವೆಯೇ ಇದ್ದಾರೆ. ಇಂತಹ ಮಾನಸಿಕತೆಗಳಿಂದಾಗಿ ಹಿಂದುಗಳು ವಿಭಜನೆಯಾಗುವಂತಾಗಿದೆ ಎಂದು ವಿಷಾಧಿಸಿದರು.
ಇದನ್ನೂ ಓದಿ: ನಿವೃತ್ತ ಶಿಕ್ಷಕ ತಿಪ್ಪೇಶಾಚಾರ್ಯ ನಿಧನ | ಬಸವೇಶ್ವರ ಆಸ್ಪತ್ರೆಗೆ ನೇತ್ರದಾನ
ಇಂದು ನಾವು ಆಚರಿಸುತ್ತಿರುವ ಹಿಂದೂ ಸಂಗಮವನ್ನು ಬಹಳ ಹಿಂದೆಯೇ ಸ್ವಾಮಿ ವಿವೇಕಾನಂದರು ಆಚರಿಸಿದ್ದರು. ಶಿವಾಜಿ ಮಹಾರಾಜರು ಮೊಘಲರ ಧ್ವಜ ಕೆಳಗಿಳಿಸಿ ಭಗವಾಧ್ವಜವನ್ನು ಆ ಸ್ಥಳದಲ್ಲಿ ಹಾರಿಸುವ ಚಿಂತನೆ ಮಾಡಿದ್ದರು ಎನ್ನುವುದನ್ನು ಗಮನಿಸಬೇಕಿದೆ. ದೇಶ, ಧರ್ಮದ ಪ್ರಶ್ನೆ ಬಂದಾಗ ಯಾವುದೇ ಕಾರ್ಯಗಳಿದ್ದರೂ ಅದನ್ನು ಬಿಟ್ಟು ಒಗ್ಗಟ್ಟಾಗಿ ಹೋರಾಟ ಮಾಡಬೇಕಿದೆ. ಇದನ್ನು ಅಂದೇ ಶಿವಾಜಿ ನಿರೂಪಿಸಿದ್ದಾರೆ ಎಂದು ವಿವರಿಸಿದರು.
ನಾವು ರಕ್ಷಿಸಿದ ಧರ್ಮವೇ ನನ್ನನ್ನು ರಕ್ಷಣೆ ಮಾಡುತ್ತದೆ. ನಾವು ಬದುಕಿದ್ದಾಗ ಈ ದೇಶಕ್ಕೆ ಏನು ಕೊಡುಗೆ ನೀಡುತ್ತೇವೆ ಎನ್ನುವುದು ಬಹಳ ಮುಖ್ಯವಾಗುತ್ತದೆ. ಆರ್ಎಸ್ಎಸ್ ವ್ಯಕ್ತಿ ನಿರ್ಮಾಣದ ಮೂಲಕ ದೇಶ ನಿರ್ಮಾಣ ಮಾಡುತ್ತಿದೆ. ಹಿಂದೂಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ. ಸಾಮಾಜಿಕ ಸಾಮರಸ್ಯ ಸಂಘದಲ್ಲಿ ಕೆಲಸ ಮಾಡುತ್ತಿದೆ. ಪರಿಸರ ಸಂರಕ್ಷಣೆಗೆ ಸಂಘ ಕೆಲಸ ಮಾಡುತ್ತಾ ಆಲದ ಮರವಾಗಿ ಸಂಘ ಬೆಳೆದಿದೆ ಎಂದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಮಚಂದ್ರ ಹೂರಣೇಬೈಲು ಮಾತನಾಡಿ, ಹಿಂದೂಗಳು ಬೇರೆ ಯಾರಿಗೂ ತೊಂದರೆ ಕೊಟ್ಟಿಲ್ಲ. ಆದರೂ, ವಿದೇಶಿಯರು ನಿರಂತರವಾಗಿ ಅಕ್ರಮಣ ಮಾಡುತ್ತಲೇ ಬಂದಿದ್ದಾರೆ. ಅದನ್ನು ತಿಳಿದುಕೊಂಡು ಎಲ್ಲರೂ ಒಗ್ಗಟ್ಟಾಗಿ ಹೋಗಬೇಕೆಂದು ಹೇಳಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಹಿಂದೂ ಎಂದರೆ ಅದೊಂದು ರಿಲೀಜಿಯನ್ ಎಂದು ಭಾವಿಸಿಲ್ಲ. ಅದೊಂದು ಜೀವನ ಪದ್ಧತಿ. ಈ ಪದ್ಧತಿ ಯಾರನ್ನೂ ದೂಷಿಸುವುದಿಲ್ಲ. ಘರ್ಷಣೆ ಇಲ್ಲ ಎಂಬುದನ್ನು ನಿರೂಪಿಸಬೇಕಿದೆ. ನಾವೆಲ್ಲರೂ ಒಟ್ಟಿಗೆ ಸೇರಿ ಸಮಸ್ಯೆ ಪರಿಹರಿಸಿಕೊಳ್ಳಬೇಕಿದೆ ಎಂದರು.
ಜಗತ್ತಿನ ಯಾವುದೇ ರಾಷ್ಟ್ರದ ಬೆದರಿಕೆಗೆ ಭಾರತ ಹೆದರುವುದಿಲ್ಲ. ಜಗ್ಗುವುದೂ ಇಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಬಲಿಷ್ಠವಾಗಿ ಮುನ್ನಡೆಯುತ್ತಿದೆ. ಇದಕ್ಕೆ ಎಲ್ಲರೂ ಇನ್ನಷ್ಟು ಕೈ ಜೋಡಿಸಬೇಕಿದೆ ತಿಳಿಸಿದರು.
ಹಿಂದೂ ಸಂಗಮ ಆಯೋಜನಾ ಸಮಿತಿ ಅಧ್ಯಕ್ಷ ಜಿ.ಎಸ್.ಅನಿತ್ಕುಮಾರ್ ಮಾತನಾಡಿದರು.
ಇದನ್ನೂ ಓದಿ: ಫೆ.09 ಮತ್ತು 10ರಂದು ಕೋಳಿ ಸಾಕಾಣಿಕೆ ತರಬೇತಿ
ಕಾರ್ಯಕ್ರಮಕ್ಕೂ ಮೊದಲು ಲಕ್ಷ್ಮೀಸಾಗರದ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಿತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
