By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Internal Reservation; ಸಾಮಾಜಿಕ ನ್ಯಾಯದಡಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಿ | ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Internal Reservation; ಸಾಮಾಜಿಕ ನ್ಯಾಯದಡಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಿ | ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

ಮುಖ್ಯ ಸುದ್ದಿ

Internal Reservation; ಸಾಮಾಜಿಕ ನ್ಯಾಯದಡಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಿ | ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

News Desk Chitradurga News
Last updated: 14 August 2024 08:44
News Desk Chitradurga News
11 months ago
Share
madara chanaya
ಚಿತ್ರದುರ್ಗ ನಗರದ ಶಿವಶರಣ ಮಾದಾರಚನ್ನಯ್ಯ ಗುರುಪೀಠದಲ್ಲಿ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿದರು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 13 AUGUST 2024

ಚಿತ್ರದುರ್ಗ: ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಆಗುವವರೆಗೆ ಲೋಕಸೇವಾ ಆಯೋಗ ಸೇರಿದಂತೆ ಎಲ್ಲ ನೇಮಕಾತಿಗಳನ್ನು ತಡೆ ಹಿಡಿಯಬೇಕು ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಒತ್ತಾಯಿಸಿದರು.

‘ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಅಡಿಯಲ್ಲಿ ಆದಷ್ಟು ಬೇಗ ಒಳಮೀಸಲಾತಿ ಜಾರಿ ಮಾಡಬೇಕು. ಮಾದಿಗ ಒಳ‌ಮೀಸಲಾತಿಯ ಎಲ್ಲಾ ಹೋರಾಟದ ಸಂದರ್ಭದಲ್ಲಿ ಮಾದಾರ ಚನ್ನಯ್ಯ ಗುರುಪೀಠ ಜತೆಗಿದೆ. ಅನೇಕರು ಹೋರಾಟವನ್ನು ಈವರೆಗೆ ಮುನ್ನಡೆಸಿಕೊಂಡು ಬಂದಿದ್ದಾರೆ’ ಎಂದು ಮಂಗಳವಾರ ಶ್ರೀ ಶಿವಶರಣ ಮಾದಾರಚನ್ನಯ್ಯ ಗುರುಪೀಠದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಈಗ ಕೆನೆಪದರ ಎನ್ನುವ ವಿಚಾರವನ್ನು ಮುಂದಿಟ್ಟು ಗೊಂದಲ ಸೃಷ್ಟಿಸಲಾಗುತ್ತಿದೆ. ಪ್ರಧಾನಿ ನೇತೃತ್ವದ ಕೇಂದ್ರದ ಸಚಿವ ಸಂಪುಟದ ನಮ್ಮ ಮುಂದೆ‌ ಕೆನೆಪದರ ವಿಚಾರವೇ ಇಲ್ಲ ಎಂದು ಸ್ಪಷ್ಟಪಡಿಸಿದೆ. ಎಲ್ಲರೂ ಸೂಕ್ತ ಬೆಂಬಲ ನೀಡಿ ರಾಜ್ಯ ಸರ್ಕಾರದ ಮೂಲಕ ಅನುಷ್ಠಾನಕ್ಕೆ ತರಬೇಕಾಗಿದೆ. ಮಲ್ಲಿಕಾರ್ಜುನ ಖರ್ಗೆ ಈ ತೀರ್ಪನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

ಕ್ಲಿಕ್ ಮಾಡಿ ಓದಿ: ಸರ್ಕಾರಿ ನೌಕರರಿಂದ ಮುಖ್ಯಮಂತ್ರಿಗೆ ಸನ್ಮಾನ | ದಿನಾಂಕ ಘೋಷಿಸಿದ ಸಿ.ಎಸ್‌.ಷಡಾಕ್ಷರಿ

‘ಮಾದಿಗ ಸಮಾಜದ ಒಳ ಮೀಸಲಾತಿಯ ಹೋರಾಟಕ್ಕೆ ಮೂರು ದಶಕ ಮೀರಿದ ಇತಿಹಾಸ ಇದೆ. ಜನಾಂದೋಲನ / ಬೀದಿ ಹೋರಾಟ, ಕಾನೂನಾತ್ಮಕ ಸಂಘರ್ಷ ಹಾಗೂ ಆಡಳಿತ ವ್ಯವಸ್ಥೆಯ ಮೇಲೆ ಒತ್ತಡ ತರುವುದು ಮಾಡಲಾಗಿದೆ. ಮಾದಾರ ಚನ್ನಯ್ಯ ಗುರುಪೀಠ ಮೂರೂ ಆಯಾಮದಲ್ಲಿ ತನ್ನ ಇತಿ ಮಿತಿಯಲ್ಲಿ ಕೈ ಜೋಡಿಸಿ ಕೆಲಸ ಮಾಡಿದೆ. ಸಮಾವೇಶಗಳು, ಪಾದಯಾತ್ರೆ. ಧರಣಿ ಇತ್ಯಾದಿ ಹೋರಾಟಗಳಲ್ಲಿ ಶ್ರೀ ಮಠ ಸದಾ ಬೆಂಬಲಿಸಿದೆ’ ಎಂದು ತಿಳಿಸಿದರು.

‘ಮಾದಿಗ ದಂಡೋರಾದ ಎಂ.ಶಂಕರಪ್ಪ, ತೆಲಂಗಾಣದ ಮಂದಕೃಷ್ಣ ಮಾದಿಗ, ಬಳ್ಳಾರಿ ಹನುಮಂತಪ್ಪ, ಮುತ್ತಣ್ಣ ಬೆನ್ನೂರು ಸೇರಿದಂತೆ ಅನೇಕ ಪ್ರಮುಖ ಹೋರಾಟಗಾರರು ನಿರಂತರ ಮಠದ ಜೊತೆಗಿದ್ದಾರೆ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಇರಲಿ ಅಥವಾ ರಾಜ್ಯ / ಕೇಂದ್ರ ಸರ್ಕಾರವಿರಲಿ ಶ್ರೀ ಮಠ ತನ್ನದೇ ಆದ ರೀತಿಯಲ್ಲಿ ಸಂಪರ್ಕ, ಸಂಬಂಧ ಇರಿಸಿಕೊಂಡು ಕಾರ್ಯಸಾಧನೆಯಲ್ಲಿ ತನ್ನ ಪಾತ್ರವಹಿಸಿದೆ’ ಎಂದರು.

ಕ್ಲಿಕ್ ಮಾಡಿ ಓದಿ: ಸ್ವಾತಂತ್ರ್ಯೊತ್ಸವ | ಹರ್ ಘರ್ ತಿರಂಗಾ ಅಭಿಯಾನ

‘ಇದೀಗ ಸುಪ್ರೀಂಕೋರ್ಟ್‌ ಒಳ ಮೀಸಲಾತಿಯ ಪರವಾಗಿ ಐತಿಹಾಸಿಕ ತೀರ್ಪು ಕೊಟ್ಟಿದೆ. ಒಳ ಮೀಸಲಾತಿಯ ಹೋರಾಟ ಮಾದಿಗ ಸಮಾಜದ್ದೇ ಆದರೂ, ಎಲ್ಲ 101 ಪರಿಶಿಷ್ಟ ಜಾತಿಗಳಿಗೂ ಜನಸಂಖ್ಯೆಯ ಅನುಸಾರ ಸಾಮಾಜಿಕ ನ್ಯಾಯವನ್ನು ಒದಗಿಸಲಿದೆ. ಕೇವಲ ಎಸ್‌ಸಿ ಮಾತ್ರವಲ್ಲ ಎಸ್‌ಟಿ ಸಮುದಾಯದವರಿಗೂ ಇದರ ಲಾಭ ಸಿಗಲಿದೆ. ಕೆಲವರು ಕೆನೆಪದರದ ವಿಷಯ ಮುಂದಿಟ್ಟು ದಿಕ್ಕು ತಪ್ಪಿಸುತ್ತಾ ಇದ್ದಾರೆ’ ಎಂದು ತಿಳಿಸಿದರು.

‘ಕೇಂದ್ರ ಸರ್ಕಾರ ಕೆನೆಪದರದ ಬಗ್ಗೆ ಸ್ಪಷ್ಟ ಪಡಿಸಿದ ಬಳಿಕ ಹಿರಿಯ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಪಸ್ವರ ಎತ್ತಿರುವುದು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಈವರೆಗೂ ಒಳಮೀಸಲಾತಿಯ ಕುರಿತಾದ ಸುಪ್ರೀಂಕೋರ್ಟ್‌ ತೀರ್ಪನ್ನು ಖರ್ಗೆಯವರು ಸ್ವಾಗತಿಸಿಲ್ಲ. ಹೀಗಿರುವಾಗ ಖರ್ಗೆಯವರು ಕೆನೆಪದರ ಬಗ್ಗೆ, ಅನಗತ್ಯ ಗೊಂದಲ ಮೂಡಿಸುತ್ತಿರುವುದು ಸರಿಯಲ್ಲ’ ಎಂದರು.

‘ಈ ಎಲ್ಲವನ್ನು ಸರಿಯಾಗಿ ನಿರ್ವಹಿಸುವ ಬದ್ಧತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಿದೆ. ಸಂಪುಟ ಸಮಿತಿ, ಪರಿಶೀಲಿನಾ ಸಮಿತಿ, ಅಧ್ಯಯನ ಸಮಿತಿ ಇತ್ಯಾದಿ ರಚಿಸಿ ಕಾಲಹರಣ ಮಾಡುವು ಬೇಡ. ತುರ್ತಾಗಿ ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸಲಿ. ಒಳ ಮೀಸಲಾತಿಯನ ಜಾರಿಗೊಳಿಸಬೇಕು’ ಎಂದು ಮನವಿ ಮಾಡಿದರು.

‘ಮಾದಿಗ ಮೀಸಲಾತಿ ಕುರಿತಾದ ಅನೇಕ ಆಯೋಗಗಳು ವರದಿ ಕೊಟ್ಟಿವೆ. ಇನ್ನು ತಡ ಮಾಡುವುದು ಬೇಡ. ಯಾವುದೇ ನೌಕರಿ ತುಂಬುವುದು ಬೇಡ. ಒಳಮೀಸಲಾತಿ ಜಾರಿ ಮಾಡಿ ನಂತರ ಭರ್ತಿ ಮಾಡಿಕೊಳ್ಳಿ’ ಎಂದು ಮಾದಿಗ ದಂಡೋರ ಅಧ್ಯಕ್ಷ ಪಾವಗಡ ಶ್ರೀರಾಮ್‌ ಒತ್ತಾಯಿಸಿದರು.

ಕ್ಲಿಕ್ ಮಾಡಿ ಓದಿ: ಶಾಲೆಗಳಲ್ಲಿ ಎನ್‌ಪಿಇಪಿ ಸಹಪಠ್ಯ ಸ್ಪರ್ಧೆ | ಪೋಸ್ಟರ್‌ ಅನಾವರಣ

ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎಚ್‌.ಹನುಮಂತಪ್ಪ ಬಳ್ಳಾರಿ, ಮಾದಿಗ ಮಹಾಸಭಾ ಅಧ್ಯಕ್ಷ ಮುತ್ತಣ್ಣ ಬೆನ್ನೂರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಿ.ಎಚ್‌.ಮೋಹನ್‌, ಕಾರ್ಯದರ್ಶಿ ಬಿ.ಜಿ.ಸಾಗರ್‌, ಯೋಗೀಶ್‌ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BasavamurthycenterChitradurgaChitradurga newsImplementationInternal ReservationKannada Latest NewsMadara ChannaiahSwamijiಒಳಮೀಸಲಾತಿಕನ್ನಡ ಲೇಟೆಸ್ಟ್ ನ್ಯೂಸ್ಕೇಂದ್ರಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾರಿಬಸವಮೂರ್ತಿಮಾದಾರ ಚನ್ನಯ್ಯಸಾಮಾಜಿಕ ನ್ಯಾಯಸ್ವಾಮೀಜಿ
Share This Article
Facebook Email Print
Previous Article ಚಳ್ಳಕೆರೆ ತಾಲ್ಲೂಕಿನ ದೊಡ್ಡಚೆಲ್ಲೂರು ಗ್ರಾಮದ ಅರಣ್ಯದಲ್ಲಿರುವ ನಾಗರಕಲ್ಲು ಮತ್ತು ಹುತ್ತಕ್ಕೆ ವಿಶೇಷ ಹೂಗಳಿಂದ ಅಲಂಕರಿಸಲಾಗಿತ್ತು Nagarpanchami; ದೊಡ್ಡಚೆಲ್ಲೂರು ಗ್ರಾಮದಲ್ಲಿ ವಿಶೇಷ ನಾಗರಪಂಚಮಿ ಆಚರಣೆ 
Next Article ಬಿಜೆಪಿ ಜಿಲ್ಲಾ ಘಟಕದಿಂದ ಹರ್ ಘರ್ ತಿರಂಗಾ ಅಭಿಯಾನ Har Ghar Tiranga; ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಂಸದ ಗೋವಿಂದ ಕಾರಜೋಳ ಚಾಲನೆ 
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up