CHITRADURGA NEWS | 05 MARCH 2024
ಚಿತ್ರದುರ್ಗ : ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದು ಸಾಧ್ಯವಿಲ್ಲ. ಒಂದು ವೇಳೆ ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕೆ ಮಾಡುವುದರೊಂದಿಗೆ, ಕುಹಕದ ಮಾತುಗಳನ್ನು ಆಡಿದ್ದವು. ಆದರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ನಮ್ಮ ಸರ್ಕಾರ, ಕೊಟ್ಟ ಮಾತಿನಂತೆ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿ, ಟೀಕೆ-ಟಿಪ್ಪಣಿಗಳಿಗೆ ತಕ್ಕ ಉತ್ತರ ನೀಡಿದೆ ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು.
ಇದನ್ನೂ ಓದಿ: ಚಿತ್ರದುರ್ಗ ರೈಲ್ವೆ ಯೋಜನೆಗಳಿಗೆ ಶುಕ್ರದೆಸೆ | ನೇರ, ಮಾರ್ಗಕ್ಕೆ ಅನುದಾನ ಬಿಡುಗಡೆ

ಚಿತ್ರದುರ್ಗ ತಾಲ್ಲೂಕು ತುರುವನೂರು ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಮಂಗಳವಾರ ಆಯೋಜಿಸಲಾದ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಚುನಾವಣೆ ಸಂದರ್ಭದಲ್ಲಿ ಜನರಿಗೆ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲ. ಮತ್ತಷ್ಟು ಬಲಿಷ್ಠವಾಗಿದೆ. ಈ ಬಾರಿ ಬಜೆಟ್ನ ಸುಮಾರು ರೂ.50 ಸಾವಿರ ಕೋಟಿಗೂ ಅಧಿಕ ಹಣವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಮೀಸಲು ಇರಿಸಲಾಗಿದೆ. ಕಳೆದ ಜೂನ್ 21 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು.
ಇದನ್ನೂ ಓದಿ: ಜೋಗಿಮಟ್ಟಿ ಮಡಿಲಲ್ಲಿ ಧ್ಯಾನಮಗ್ನ ಮುಕ್ತಿನಾಥ | 31 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ ದಿನಗಣನೆ
ಇದರಿಂದ ರಾಜ್ಯದ ಎಲ್ಲಾ ವರ್ಗದ ಮಹಿಳೆಯರು ಉಚಿತವಾಗಿ ರಾಜ್ಯಾದ್ಯಂತ ಪ್ರಯಾಣ ಮಾಡುವ ಅವಕಾಶ ಲಭಿಸಿದೆ. ದೇಶದಲ್ಲೇ ಪ್ರಥಮ ಬಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರು ಅನ್ನಭಾಗ್ಯ ಯೋಜನೆ ಜಾರಿ ಮಾಡಿ, ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೂ 5 ಕೆ.ಜಿ. ಉಚಿತ ಅಕ್ಕಿಯನ್ನು ನೀಡಿದರು. ಕಳೆದ ಬಾರಿ ನಮ್ಮ ಸರ್ಕಾರ ಇದ್ದಂತಹÀ ಅವಧಿಯಲ್ಲಿಯೇ 5 ಕೆ.ಜಿ. ಅಕ್ಕಿ ಪ್ರಮಾಣವನ್ನು 7 ಕೆ.ಜಿ.ಗೆ ಏರಿಸಲಾಗಿತ್ತು. ಆದರೆ ನಂತರ ಬಂದ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಚಿಂತನೆ ನಡೆಸಿತ್ತು.
ಇದನ್ನೂ ಓದಿ: ಚನ್ನಗಿರಿ ಮಾರುಕಟ್ಟೆಯಲ್ಲಿ ಜಿಗಿತ ಕಂಡ ರಾಶಿ ಅಡಿಕೆ
ದೇಶ ಕೋವಿಡ್ ಮಹಾಮಾರಿಗೆ ಸಿಲುಕಿದ್ದರಿಂದ ಯೋಜನೆಯನ್ನು ಮುಂದುವರಿಸಲಾಯಿತು. ಬಡವರಿಗೆ ಅನ್ನಭಾಗ್ಯ, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಸಂಜೀವಿನಿ ಆಯಿತು. ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಗೆ ಕೇಂದ್ರಕ್ಕೆ ಅಕ್ಕಿ ನೀಡಲು ಕೋರಿದಾಚಿತ್ರದುರ್ಗಗ ಮನವಿಯನ್ನು ತಿರಸ್ಕರಿಸಲಾಯಿತು. ಹೀಗಾಗಿ ನಮ್ಮ ಸರ್ಕಾರ ಆಹಾರ ಧಾನ್ಯಕ್ಕೆ ಪ್ರತಿಯಾಗಿ ಪ್ರತಿ ತಿಂಗಳು ಪ್ರತಿ ಸದಸ್ಯರಿಗೆ ರೂ.170 ಮೊತ್ತವನ್ನು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಜಮೆ ಮಾಡುವ ನಿರ್ಧಾರ ಕೈಗೊಂಡು ಅದನ್ನು ಪಾಲಿಸಿಕೊಂಡು ಬರುತ್ತಿದ್ದೇವೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ತುರುವನೂರು ಹೋಬಳಿಯಲ್ಲಿ ಶೇ.95 ರಷ್ಟು ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ. ದಾಖಲೆಗಳ ಕೊರತೆ ಹಾಗೂ ತಾಂತ್ರಿಕ ಕಾರಣಗಳಿಂದ ಹಲವು ಜನರ ಅರ್ಜಿಗಳಲ್ಲಿ ತೊಂದರೆ ಉಂಟಾಗಿದೆ. ಇದನ್ನು ಸಹ ಸರಿಪಡಿಸಿ 100ಕ್ಕೆ 100 ರಷ್ಟು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಶಾಸಕ ಟಿ.ರಘುಮೂರ್ತಿ ಹೇಳಿದರು.
ಇದನ್ನೂ ಓದಿ: ಕಬೀರಾನಂದ ಮಠದಲ್ಲಿ ಶಿವರಾತ್ರಿ ಮಹೋತ್ಸವ
ತಹಶೀಲ್ದಾರ್ ಡಾ.ನಾಗವೇಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಹೋಬಳಿಯಲ್ಲಿ ಅನ್ನಭಾಗ್ಯ ಯೋಜನೆಯಡಿ 11,812 ಫಲಾನುಭವಿಗಳ ಪೈಕಿ 11,679 ಜನರಿಗೆ, ಗೃಹಲಕ್ಷ್ಮೀ ಯೋಜನೆಯಡಿ 9,832 ಫಲಾನುಭವಿಗಳ ಪೈಕಿ 9,784, ಗೃಹಜ್ಯೋತಿ ಯೋಜನೆಯಡಿ 9,247 ಫಲಾನುಭವಿಗಳ ಪೈಕಿ 8,641 ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ. ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಗಾಗಿ ಹೋಬಳಿಯ 3939 ಯುವಕರು ನೊಂದಣಿ ಮಾಡಿಕೊಂಡಿದ್ದಾರೆ. ಶಕ್ತಿ ಯೋಜನೆಯು ಹೋಬಳಿಯಲ್ಲಿ ಯಶಸ್ವಿಯಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭ್ಯುದಯಕ್ಕೆ ಪೂರಕವಾಗಿವೆ ಎಂದರು.
ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಇದರ ಅಂಗವಾಗಿ ಗ್ರಾಮದ ಪ್ರೌಢಶಾಲಾ ವಿಧ್ಯಾರ್ಥಿನಿಯರಿಗೆ ಏರ್ಪಡಿಸಲಾದ ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ವೇದಿಕೆಯಲ್ಲಿ ಸನ್ಮಾನಿಸಿ ಪ್ರಮಾಣ ಪತ್ರ ವಿತರಿಸಲಾಯಿತು. ವಕೀಲರಾದ ದಿಲ್ಶಾದ್ ಮಹಿಳಾ ಕಾನೂನು ಹಾಗೂ ಮಹಿಳೆಯರ ಸುರಕ್ಷತೆ ಕುರಿತು ಉಪನ್ಯಾಸ ನೀಡಿದರು.
ಇದನ್ನೂ ಓದಿ: ಕರ್ನಾಟಕ ತಂಡಕ್ಕೆ ಕೋಟೆನಾಡಿನ ಯುವತಿಯರು ಆಯ್ಕೆ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಜಿ.ಪಂ. ಮಾಜಿ ಸದಸ್ಯ ಬಾಬುರೆಡ್ಡಿ, ತಾ.ಪಂ. ಇ.ಓ. ಅನಂತರಾಜು, ಕೂನಬೇವು ಪಿಡಿಓ ಧನಂಜಯ, ತುರುವನೂರು ಪಿಡಿಓ ಖಲೀಂ, ತುರುವನೂರು ಗ್ರಾ.ಪಂ. ಅಧ್ಯಕ್ಷೆ ದೀಪಾ.ಪಿ ಮಹೇಶ್, ಬೆಳಗಟ್ಟ ಗ್ರಾ.ಪಂ. ಅಧ್ಯಕ್ಷೆ ಮಂಜುಶ್ರೀ ಪಾಲಯ್ಯ, ಕೂನಬೇವು ಗ್ರಾ.ಪಂ. ಅಧ್ಯಕ್ಷ ಜಿ.ಪಿ. ಅನಿಲ್ ಕುಮಾರ್, ಮಾದನಾಯಕನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಕವಿತಾ ನಾಗರಾಜ್, ಮುದ್ದಾಪುರ ಗ್ರಾ.ಪಂ. ಅಧ್ಯಕ್ಷೆ ಮಂಗಳಾ, ಚಿಕ್ಕಗೊಂಡನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಮಹಾಂತಮ್ಮ, ಸಿಡಿಪಿಓ ಸುಧಾ, ವೈದ್ಯಾಧಿಕಾರಿ ಸುಶ್ಮಿತಾ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
