By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: POLICE: ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಪೊಲೀಸ್ ಇಲಾಖೆಯಿಂದ ಮಹತ್ವದ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » POLICE: ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಪೊಲೀಸ್ ಇಲಾಖೆಯಿಂದ ಮಹತ್ವದ ಸೂಚನೆ

ಮುಖ್ಯ ಸುದ್ದಿ

POLICE: ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಪೊಲೀಸ್ ಇಲಾಖೆಯಿಂದ ಮಹತ್ವದ ಸೂಚನೆ

chitradurganews.com
Last updated: 24 August 2024 15:22
chitradurganews.com
10 months ago
Share
Arecanut Harvesting
ಅಡಿಕೆ ಫಸಲು ಕೊಯ್ಲಿನ ಕಾಲ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 24 AUGUST 2024

ಚಿತ್ರದುರ್ಗ: ಕಳೆದ ವರ್ಷ ಅಡಿಕೆ ಮಾರಾಟ, ಖೇಣಿ, ಹಸಿ ಅಡಿಕೆ ಮಾರಾಟ ಮತ್ತಿತರೆ ಸಂದರ್ಭಗಳಲ್ಲಿ ಸಾಕಷ್ಟು ರೈತರು ವಂಚನೆಗೆ ಒಳಗಾಗಿದ್ದು, ಈ ಬಗ್ಗೆ ಜಿಲ್ಲೆಯ ವಿವಿಧ ಪೊಲೀಸ್(POLICE) ಠಾಣೆಗಳಲ್ಲಿ ಸಾಕಷ್ಟು ದೂರುಗಳು ದಾಖಲಾಗಿವೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಡಿಕೆ ಬೆಳೆಗಾರರಿಗೆ ಮಹತ್ವದ ಸೂಚನೆ ನೀಡಿದ್ದು, ಪೊಲೀಸ್ ಇಲಾಖೆಯಿಂದ ಹೊರಡಿಸಿರುವ ಪ್ರಕಟಣೆ ಈ ಕೆಳಗಿನಂತಿದೆ.

ಇದನ್ನೂ ಓದಿ: ಚನ್ನಗಿರಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ರಾಶಿ ಬೆಲೆ ಎಷ್ಟಿದೆ

ಈ ಮೂಲಕ ಚಿತ್ರದುರ್ಗ ಜಿಲ್ಲೆಯ ಅಡಿಕೆ ಬೆಳೆಗಾರರಲ್ಲಿ ತಿಳಿಯಪಡಿಸುವುದೇನೆಂದರೆ, 2024 ನೇ ಸಾಲಿನ ಅಡಿಕೆ ಫಸಲು ಕೊಯ್ಲಿನ ಕಾಲ ಆರಂಭವಾಗಿದ್ದು, ಅಡಿಕೆ ಬೆಳೆಗಾರರು ತಮ್ಮ ತೋಟಗಳಲ್ಲಿಯೇ ಅಡಿಕೆಯನ್ನು ಮಾರಾಟ ಮಾಡುತ್ತಿರುತ್ತಾರೆ.

ಅಂದರೆ ತೋಟವನ್ನು ಖೇಣಿಗೆ ನೀಡುವುದು, ಹಸಿ ಅಡಿಕೆಯನ್ನೇ ಮಾರುವುದು, ಇಲ್ಲವೇ ಒಣ ಅಡಿಕೆ ತಯಾರಿಸಿ ಮಾರುವುದು ಇತ್ಯಾದಿಯಾಗಿ, ಇದೇ ರೀತಿಯಾಗಿ ಕಳೆದ ವರ್ಷಗಳಲ್ಲಿ ನಡೆದ ವಹಿವಾಟಿನಲ್ಲಿ ರೈತರಿಗೆ ವ್ಯಾಪಾರಸ್ಥರು ಸರಿಯಾಗಿ ಹಣವನ್ನು ಬಟವಾಡೆ ಮಾಡದೇ ಸತಾಯಿಸುತ್ತಿದ್ದು, ಈ ಬಗ್ಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿ ತನಿಖೆಯಲ್ಲಿದ್ದು, ಹಲವು ರೈತರು ವಂಚನೆಗೆ ಒಳಗಾಗಿರುತ್ತಾರೆ.

ಇದನ್ನೂ ಓದಿ: ವಾರದೊಳಗೆ ಭೂ ಸ್ವಾಧೀನ ಪೂರ್ಣಗೊಳಿಸಿ | ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸೂಚನೆ

ಕಳೆದ ಸಾಲಿನಲ್ಲಿ ಕೆಲವು ರೈತರಿಗೆ ಆಗಿರುವ ಕಹಿ ಅನುಭವದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಅಡಿಕೆ ಬೆಳೆಗಾರರಲ್ಲಿ ಕೋರುವುದೇನೆಂದರೆ ಈ ಮೇಲ್ಕಂಡಂತೆ ಅಡಿಕೆ ಮಾರಾಟದ ಸಮಯದಲ್ಲಿ ಮುಂಗಡವಾಗಿ ಎಲ್ಲಾ ಹಣವನ್ನು ಪಡೆದು ಮಾರಾಟ ಮಾಡುವುದು ಸರ್ವತಾ ಉತ್ತಮ, ರೈತರು ಬರೀ ನಂಬಿಕೆಗಳ ಮೇಲೆ ಇಲ್ಲವೇ ಚೀಟಿಗಳ ಮೇಲೆ ಬರೆದುಕೊಂಡು ವ್ಯವಹಾರ ನಡೆಸುತ್ತಿದ್ದು, ಈ ರೀತಿಯ ವಹಿವಾಟಿನಲ್ಲಿ ವ್ಯಾಪಾರಸ್ಥರು ರೈತರಿಗೆ ಹಣ ನೀಡದಿದ್ದಾಗ, ಕಾನೂನಿನ ಮೂಲಕ ರೈತರು ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ: ವಿವಿ ಸಾಗರಕ್ಕೆ 2195 ಕ್ಯೂಸೆಕ್ ನೀರು

ಆದ್ದರಿಂದ ರೈತರು ತಮ್ಮ ಅಡಿಕೆ ಮಾರುವ ಸಮಯದಲ್ಲಿ ಮುಂಗಡವಾಗಿ ಎಲ್ಲಾ ಹಣವನ್ನು ಪಡೆಯಲು ಸಾಧ್ಯವಾಗದಿದ್ದಲ್ಲಿ ವ್ಯಾಪಾರಸ್ಥರು ಅಥವಾ ಖೇಣಿದಾರರಿಂದ ಕಾನೂನಿನ ಅಡಿಯಲ್ಲಿ ಮಾನ್ಯತೆ ಪಡೆದಿರುವ ಚೆಕ್ ಅಥವಾ ಪ್ರಾಮಿಸರಿ ನೋಟ್ ಅಥವಾ ಬಿಲ್ ಆಫ್ ಎಕ್ಸ್‍ಚೇಂಜ್ ನಂತಹ ಸೂಕ್ತ ಭದ್ರತೆ ಪಡೆದುಕೊಂಡು ವಂಚನೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಿ ತಮ್ಮ ಬೆಳೆಯನ್ನು ಮಾರಾಟ ಮಾಡಲು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AdikeArecanut CropDistrict Superintendent of PoliceFraudImportant NoticeKannada Latest NewsKannada NewsNut MillNut SalePolicePolice Departmentಅಡಿಕೆ ಖೇಣಿಅಡಿಕೆ ಬೆಳೆಅಡಿಕೆ ಮಾರಾಟಕನ್ನಡ ಲೇಟೆಸ್ಟ್ ನ್ಯೂಸ್ಚನ್ನಗಿರಿಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಪೊಲೀಸ್ ಇಲಾಖೆಭೀಮಸಮುದ್ರಮಹತ್ವದ ಸೂಚನೆವಂಚನೆ
Share This Article
Facebook Email Print
Previous Article V. Somanna Land acquisition: ವಾರದೊಳಗೆ ಭೂಸ್ವಾಧೀನ ಪೂರ್ಣಗೊಳಿಸಿ | ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸೂಚನೆ
Next Article ಓಬೇನಹಳ್ಳಿಗೆ ಸಂಸದ ಗೋವಿಂದ ಕಾರಜೋಳ ಭೇಟಿ special package; ಓಬೇನಹಳ್ಳಿಗೆ ಸಂಸದ ಗೋವಿಂದ ಕಾರಜೋಳ ಭೇಟಿ | ಗ್ರಾಮಕ್ಕೆ ವಿಶೇಷ ಪ್ಯಾಕೇಜ್ ಭರವಸೆ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up