By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಡಿ.25 ರಂದು ಹೊಳಲ್ಕೆರೆಯಲ್ಲಿ ನೂತನ ವಿಕಾಸ ಸೌಧ ಉದ್ಘಾಟನೆ | ಶಾಸಕ ಎಂ.ಚಂದ್ರಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಡಿ.25 ರಂದು ಹೊಳಲ್ಕೆರೆಯಲ್ಲಿ ನೂತನ ವಿಕಾಸ ಸೌಧ ಉದ್ಘಾಟನೆ | ಶಾಸಕ ಎಂ.ಚಂದ್ರಪ್ಪ

ಮುಖ್ಯ ಸುದ್ದಿ

ಡಿ.25 ರಂದು ಹೊಳಲ್ಕೆರೆಯಲ್ಲಿ ನೂತನ ವಿಕಾಸ ಸೌಧ ಉದ್ಘಾಟನೆ | ಶಾಸಕ ಎಂ.ಚಂದ್ರಪ್ಪ

News Desk Chitradurga News
Last updated: 21 December 2024 20:31
News Desk Chitradurga News
6 months ago
Share
press meet
ಸುದ್ದಿಗೋಷ್ಠಿಯಲ್ಲಿ ಶಾಸಕ ಎಂ.ಚಂದ್ರಪ್ಪ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 21 DECEMBER 2024

ಚಿತ್ರದುರ್ಗ: ಹೊಳಲ್ಕೆರೆ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ನ ವಿಕಾಸ ಸೌಧದ ಉದ್ಘಾಟನೆ ಹಾಗೂ ಸ್ವಸಹಾಯ ಸಂಘಗಳಿಗೆ ಲಾಭಾಂಶ ವಿತರಣಾ ಸಮಾರಂಭ ಡಿ.25 ಬುಧವಾರ ನಡೆಯಲಿದೆ ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಹೊಳಲ್ಕೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ ಹೆಚ್ಚಳ

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪುರಸಭೆಯವತಿಯಿಂದ ಧರ್ಮಸ್ಥಳ ಸಂಸ್ಥೆಗೆ ಜಾಗ ನೀಡಲಾಗಿತ್ತು. ಇದರಲ್ಲಿ ಸರ್ಕಾರದ ಸಹಾಯಧನ ಇಲ್ಲದೆ, ಸ್ವಂತ ಹಣದಲ್ಲಿ ಕಟ್ಟಡ ನಿರ್ಮಾಣ ಮಾಡಿದ್ದಾರೆ ಎಂದರು.

ಹೊಳಲ್ಕೆರೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 4518 ಸ್ವಸಹಾಯ ಸಂಘಗಳನ್ನು ರಚನೆ ಮಾಡಿ, ಇದರಲ್ಲಿ 40265 ಜನರನ್ನು ಸದಸ್ಯರನ್ನು ಮಾಡಿಕೊಂಡಿದ್ದಾರೆ. ಇವರ ಉಳಿತಾಯ ಈವರೆಗೆ 24.46 ಕೋಟಿ ಆಗಿದೆ. ಉತ್ತಮ ನಿರ್ವಹಣೆ ಮಾಡಿದ ಸಂಘಗಳಿಗೆ ಬ್ಯಾಂಕುಗಳಿಂದ 204.16 ಕೋಟಿ ರೂ. ಸಾಲ ಕೊಡಿಸಲಾಗಿದೆ. ಉತ್ತಮ ಆರ್ಥಿಕ ವ್ಯವಹಾರ ನಡೆಸಿದ ಸಂಘಗಳಿಗೆ ಲಾಭಾಂಶ ವಿತರಣೆ ಮಾಡಲಗುತ್ತಿದ್ದು, ಈಗ ಮೂರನೇ ಸಲ ಲಾಭಾಂಶ ವಿತರಿಸಲಾಗುತ್ತಿದೆ ಎಂದು ವಿವರಿಸಿದರು.

2703 ಸಂಘಗಳಿಗೆ 11 ಕೋಟಿ ರೂ.ಗಳನ್ನು ವಿತರಣೆ ಮಾಡಲಾಗುತ್ತಿದೆ. ಇದರೊಂದಿಗೆ ಸಂಘದ ಸದಸ್ಯರ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ 1788 ವಿದ್ಯಾರ್ಥಿಗಳಿಗೆ 1.60 ಕೋಟಿ ಶಿಷ್ಯ ವೇತನವನ್ನು ನೀಡಲಾಗಿದೆ. 5 ಬಡ ಕುಟುಂಬಗಳಿಗೆ ವಾತ್ಸಾಲ್ಯ ಮನೆ ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡಿ ಕೊಡಲಾಗಿದೆ.

ಕ್ಲಿಕ್ ಮಾಡಿ ಓದಿ: ಜಿಲ್ಲಾ‌ ಆಸ್ಪತ್ರೆಗೆ ನ್ಯಾಯಾಧೀಶರ ದಿಢೀರ್ ಭೇಟಿ | ರೋಗಿಗಳ ಜೊತೆ ಮಾತುಕತೆ

75 ಜನರಿಗೆ ತಲಾ ಮಾಸಿಕವಾಗಿ 1 ಸಾವಿರ ರೂ.ಗಳನ್ನು ದುರ್ಬಲ ವರ್ಗದವರಿಗೆ ನೀಡಲಾಗುತ್ತಿದೆ. 239 ವಿಕಲ ಚೇತನರಿಗೆ ಅಗತ್ಯ ಉಪಕರಣಗಳನ್ನು ನೀಡಲಾಗಿದೆ. ತಾಲ್ಲೂಕಿನಲ್ಲಿ 8 ಕೆರೆಗಳಲ್ಲಿ 55.99 ಲಕ್ಷ ರೂ. ವೆಚ್ಚದಲ್ಲಿ ಹೂಳು ತೆಗೆಯಲಾಗಿದೆ ಎಂದರು.

ಡಿ.25 ಬುಧವಾರ ನಡೆಯುವ ಕಾರ್ಯಕ್ರಮಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಆಗಮಿಸಲಿದ್ದು, ವಿಕಾಸ ಸೌಧ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಲಾಭಾಂಶ ಪಡೆದ ಸ್ವ-ಸಹಾಯ ಸಂಘಗಳಿಗೆ ವಿತರಣೆ ಮಾಡುವರು.

ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದ ಪುನಶ್ವೇತನಗೊಂಡ ಕೆರೆಯ ಹಸ್ತಾಂತರ ಪ್ರಮಾಣ ಪತ್ರ ವಿತರಣೆಯನ್ನು ಸಂಸದ ಗೋವಿಂದ ಕಾರಜೋಳ ಕೆರೆ ಸಮಿತಿಯವರಿಗೆ ಹಸ್ತಾಂತರಿಸುವರು. ನಿರಾಶ್ರಿತ ಕುಟುಂಬಕ್ಕೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ವಾತ್ಸಲ್ಯ ಮನೆ ನಿರ್ಮಾಣವಾಗಿದ್ದು ಇದರ ಹಸ್ತಾಂತರವನ್ನು ಮಾಡಲಿದ್ದಾರೆ ಎಂದರು.

ಕ್ಲಿಕ್ ಮಾಡಿ ಓದಿ: ಇಂಡಿಯನ್ ಇಂಟರ್ನ್ಯಾಷನಲ್ ಶಾಲೆ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ | ಶಾಸಕ ಚಂದ್ರಪ್ಪ ಅಭಿನಂದನೆ

ವಿದ್ಯಾರ್ಥಿಗಳಿಗೆ ಕ್ಷೇತ್ರದ ಮೂಲಕ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆಯನ್ನು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ವಿತರಿಸುವರು.

ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎಸ್.ಅನಿಲ್‌ಕುಮಾರ್ ಭಾಗವಹಿಸುವರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಪುರಸಭೆಯ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್, ಉಪಾಧ್ಯಕ್ಷೆ ನಾಗರತ್ನ, ಬ್ರಹ್ಮಕುಮಾರಿ ಸುಮಿತ್ರಕ್ಕ ಸೇರಿದಂತೆ ಪುರಸಭೆಯ ಸದಸ್ಯರು ಭಾಗವಹಿಸಲಿದ್ದಾರೆ.

ಕ್ಲಿಕ್ ಮಾಡಿ ಓದಿ: ಸಿ.ಟಿ.ರವಿ ವಿರುದ್ಧ ಚಿತ್ರದುರ್ಗದ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಪ್ರತಿಭಟನೆ | ಪಂಚಮಸಾಲಿ ಸಮಾಜದ ಅಧ್ಯಕ್ಷ ಹೆಚ್.ಎಂ.ಮಂಜುನಾಥ್ ವಾಗ್ದಾಳಿ

ಸುದ್ದಿಗೋಷ್ಠಿಯಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕದಿನೇಶ್ ಪೂಜಾರ್, ಯೋಜನಾಧಿಕಾರಿ ಸುರೇಂದ್ರ ಆಚಾರ್, ಪ್ರಭಾಕರ್ ವಸಂತ್, ಮುಖಂಡರಾದ ರುದ್ರಪ್ಪ, ಪುರಸಭೆಯ ಮಾಜಿ ಅಧ್ಯಕ್ಷ ಅಶೋಕ್, ಗ್ರಾಪಂ ಮಾಜಿ ಅಧ್ಯಕ್ಷ ಡಿ.ಸಿ.ಮೋಹನ್, ರಮೇಶ್ ಗೌಡ್ರ ದುಮ್ಮಿ, ಸರಸ್ವತಿ, ಅಶೋಕ್ ಗಂಗಾಧರಪ್ಪ, ದೇವರಾಜ್ ಸಾಸಲು ಮತ್ತಿತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesDharmasthalaDr. D. Virendra HeggadeHolalkereinaugurationKannada Latest NewsKannada NewsMLA M. ChandrappaVikas Soudhaಉದ್ಘಾಟನೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಡಿ.ವೀರೇಂದ್ರ ಹೆಗ್ಗಡೆಧರ್ಮಸ್ಥಳವಿಕಾಸ ಸೌಧಶಾಸಕ ಎಂ.ಚಂದ್ರಪ್ಪಹೊಳಲ್ಕೆರೆ
Share This Article
Facebook Email Print
Previous Article Judge's visit to District Hospital ಜಿಲ್ಲಾ‌ ಆಸ್ಪತ್ರೆಗೆ ನ್ಯಾಯಾಧೀಶರ ದಿಢೀರ್ ಭೇಟಿ | ರೋಗಿಗಳ ಜೊತೆ ಮಾತುಕತೆ
Next Article today bhavishya Astrology: ದಿನ ಭವಿಷ್ಯ | ಡಿಸೆಂಬರ್ 22 | ಈ ರಾಶಿಯವರಿಗೆ ಆದಾಯ ಸಾಕಾಗುವುದಿಲ್ಲ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up