Application; ಗಂಭೀರ ಕಾಯಿಲೆ ಆರೈಕೆ ಮಾಡುವವರಿಂದ ಪ್ರೊತ್ಸಾಹ ಧನಕ್ಕೆ ಅರ್ಜಿ ಆಹ್ವಾನ

apply now

CHITRADURGA NEWS | 05 OCTOBER 2024

ಚಿತ್ರದುರ್ಗ: ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡೆಸ್ಟ್ರೋಫಿ, ಪಾರ್ಕಿನ್‍ಸನ್ಸ್ ಮತ್ತು ಮಲ್ಟಿಪಲ್ ಸ್ಕ್ಲೋರೊಸಿಸ್ ನಂತಹ ಗಂಭೀರ ಕಾಯಿಲೆಯಿಂದ ಬಳಲುತ್ತಿರುವರನ್ನು ಆರೈಕೆ ಮಾಡುತ್ತಿರುವರಿಗೆ, ಪ್ರತಿ ಮಾಹೆ ರೂ.1000/- ಪ್ರೋತ್ಸಾಹ ಧನ ನೀಡಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಆಫ್‍ಲೈನ್ ಮೂಲಕ ಅರ್ಜಿ(Application) ಆಹ್ವಾನಿಸಲಾಗಿದೆ.
ಯೋಜನೆಯ ಲಾಭ ಪಡೆಯಲು ವಿಕಲಚೇತನರ ಆಧಾರ ಹಾಗೂ ವಿಶೇಷ ಗುರುತಿನ ಚೀಟಿ, ವೈದ್ಯಕೀಯ, ಜಾತಿ, ಆದಾಯ, ನಿವಾಸಿ ಧೃಡೀಕರಣ ಪ್ರಮಾಣ ಪತ್ರ, ಇತ್ತೀಚಿನ ಭಾವಚಿತ್ರ ಹಾಗೂ ಆರೈಕೆದಾರರ ಬ್ಯಾಂಕ್ ಖಾತೆ ಪುಸ್ತಕದ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ನಮೂನೆಯನ್ನು www.dwdsc.kar.nic.in ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ನೇರವಾಗಿ ಜಿಲ್ಲಾ, ತಾಲ್ಲೂಕು, ಗ್ರಾಮೀಣ ವಿವಿದೊದ್ದೇಶ ಪುನರ್ವಸತಿ ಕಾರ್ಯರ್ತರಿಂದ ಅರ್ಜಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಅವರ ಮೂಲಕವೇ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ, ಚಿತ್ರದುರ್ಗ-9880821934, ಚಳ್ಳಕೆರ-9611266930, ಹಿರಿಯೂರು-9902888901, ಹೊಳಲ್ಕೆರೆ-9740030227, ಹೊಸದುರ್ಗ-9741829990, ಮೊಳಕಾಲ್ಮೂರು 9742725576 ಹಾಗೂ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ-08194-235284 ಸಂಪರ್ಕಿಸುವಂತೆ ಅಂಗವಿಕಲ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version