By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    9 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    9 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    11 hours ago
    Agniveer
    ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
    22 hours ago
    ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    21 hours ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    23 hours ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    15 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    21 hours ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    22 hours ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    2 days ago
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    3 days ago
Reading: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಪ್ರಕರಣ ಹೆಚ್ಚಳ | ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಪ್ರಕರಣ ಹೆಚ್ಚಳ | ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

News Desk Chitradurga News
Last updated: 9 April 2026 18:35
News Desk Chitradurga News
3 months ago
Share
ಜಿಲ್ಲಾ ಮಟ್ಟದ ನ್ಯಾಷನಲ್ ನಾರ್ಕೊಟಿಕ್ಸ್ ಕೋ-ಆರ್ಡಿನೇಷನ್ ಪೋರ್ಟಲ್ (NCORD) ಸಭೆ
ಜಿಲ್ಲಾ ಮಟ್ಟದ ನ್ಯಾಷನಲ್ ನಾರ್ಕೊಟಿಕ್ಸ್ ಕೋ-ಆರ್ಡಿನೇಷನ್ ಪೋರ್ಟಲ್ (NCORD) ಸಭೆ
SHARE

CHITRADURGA NEWS | 09 APRIL 2026

ಚಿತ್ರದುರ್ಗ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಪ್ರಕರಣಗಳು ಹೆಚ್ಚಳವಾಗಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಲು ಮತ್ತು ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲು ಪೊಲೀಸ್, ಅಬಕಾರಿ, ಅರಣ್ಯ, ಕೃಷಿ, ತೋಟಗಾರಿಕೆ ಸೇರಿದಂತೆ ಶಾಲಾ ಕಾಲೇಜುಗಳ ಮುಖ್ಯಸ್ಥರು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ನ್ಯಾಷಿನಲ್ ನಾರ್ಕೊಟಿಕ್ಸ್ ಕೋ-ಆರ್ಡಿನೇಷನ್ ಪೋರ್ಟಲ್ಸ (NCORD) ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಗಾಂಜಾ ಮಾರಾಟದ ಪ್ರಕರಣಗಳು ಕಡಿಮೆ ಇವೆ. ಆದರೆ, ಮಾದಕ ವಸ್ತುಗಳ ಸೇವನೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ವಿಚಾರವಾಗಿದ್ದು, ಈ ಬಗ್ಗೆ ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ. ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಂತೆ ತಡೆಯಲು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ-ಕಾಲೇಜುಗಳಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. 

ಅಬಕಾರಿ ಇಲಾಖೆ ವತಿಯಿಂದ ಮದ್ಯದ ಅಂಗಡಿಗಳಲ್ಲಿ ಮಾದಕ ವಸ್ತುಗಳ ಮಾರಾಟ ಮಾಡದಂತೆ ಎಚ್ಚರಿಕೆ ಫಲಕಗಳನ್ನು ಹಾಕಿಸುವುದರ ಜೊತೆಗೆ ನಿರಂತರವಾಗಿ ತಪಾಸಣೆ ನಡೆಸಬೇಕು. ಜಿಲ್ಲೆಯು ಆಂಧ್ರಪ್ರದೇಶದೊಂದಿಗೆ ಸುಮಾರು 150 ಕಿ.ಮೀ ಗಡಿಯನ್ನು ಹಂಚಿಕೊಂಡಿದೆ. ಈ ಭಾಗದ ಸಣ್ಣಪುಟ್ಟ ಕಾಲುದಾರಿಗಳ ಮೂಲಕ ಅಕ್ರಮವಾಗಿ ಸೇಂದಿ ಮತ್ತು ಮಾದಕ ವಸ್ತುಗಳು ಸಾಗಣೆಯಾಗುವ ಸಾಧ್ಯತೆ ಇದೆ. ಇದನ್ನು ತಡೆಗಟ್ಟಲು ಅಬಕಾರಿ ಮತ್ತು ಪೊಲೀಸ್ ಇಲಾಖೆಗಳು ಒಗ್ಗೂಡಿ ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಿ ಕಾರ್ಯಾಚರಣೆ ನಡೆಸಬೇಕು. 

ಇದನ್ನೂ ಓದಿ: ಡಾ.ಎಪಿಜೆ ಅಬ್ದುಲ್ ಕಲಾಂ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆ ಏ.12ಕ್ಕೆ 

ವೈದ್ಯಕೀಯ ಉದ್ದೇಶಕ್ಕೆ ಬಳಸುವ ಔಷಧಗಳು ದುರುಪಯೋಗವಾಗದಂತೆ ನೋಡಿಕೊಳ್ಳಲು ಮೆಡಿಕಲ್ ಕಾಲೇಜುಗಳು ಮತ್ತು ಔಷಧ ಮಳಿಗೆಗಳ ಮೇಲೆ ನಿಗಾ ಇಡಬೇಕು. ಅವಧಿ ಮುಗಿದ ಔಷಧಗಳ ವಿಲೇವಾರಿ ಬಗ್ಗೆಯೂ ಸರಿಯಾದ ಕ್ರಮ ವಹಿಸುವಂತೆ ಜಿಲ್ಲಾ ಔಷಧ ನಿಯಂತ್ರಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಡ್ರಗ್ ಸೇವೆನೆ ಪತ್ತೆ ಕಿಟ್ ಸರಬರಾಜು:

ಆರೋಗ್ಯ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಸಮುದಾಯ ಹಂತದ ಆಸ್ಪತ್ರೆಗಳಿಗೆ ಡ್ರಗ್ ಟೆಸ್ಟಿಂಗ್ ಕಿಟ್‌ಗಳನ್ನು ಸರಬರಾಜು ಮಾಡಬೇಕು. ಇದರ ವೆಚ್ಚನ್ನು ಜಿಲ್ಲಾಡಳಿತದಿಂದ ಭರಿಸಲಾಗುವುದು. ಪೊಲೀಸ್ ಇಲಾಖೆಯ ವತಿಯಿಂದಲೇ ಸ್ವಂತ ಖರ್ಚಿನಲ್ಲಿ ಡ್ರಗ್ ಟೆಸ್ಟಿಂಗ್ ಕಿಟ್‌ಗಳನ್ನು ಖರೀದಿಸಿ ಎಲ್ಲಾ ಪೊಲೀಸ್ ಠಾಣೆಗಳಿಗೆ ವಿತರಿಸಿದ್ದಾರೆ. ಇದರಿಂದ ಶಂಕಿತರನ್ನು ತಕ್ಷಣವೇ ಪರೀಕ್ಷೆಗೆ ಒಳಪಡಿಸಲು ಸಾಧ್ಯವಾಗಲಿದೆ. 

ಶಂಕಿತರನ್ನು ಪೊಲೀಸರು ಡ್ರಗ್ ಕಿಟ್ ಪರೀಕ್ಷೆ ಕರೆ ತಂದಾಗ ಯಾವುದೇ ವೈದ್ಯರು ಅಸಹಕಾರ ನೀಡಬಾರದು. ಹೊಳಲ್ಕೆರೆಯ ಸರ್ಕಾರಿ ವೈದ್ಯರೊಬ್ಬರು ಡ್ರಗ್ ಟೆಸ್ಟಿಂಗ್ ವರದಿ ನೀಡಲು ಅಸಹಕಾರ ತೋರುತ್ತಿರುವ ಬಗ್ಗೆ ದೂರು ಕೇಳಿ ಬಂದಿದೆ. ಮುಂದಿನ ದಿನಗಳಲ್ಲಿ ವರದಿ ನೀಡಲು ವಿಳಂಬ ಮಾಡುತ್ತಿರುವ ಅಥವಾ ತಪಾಸಣಗೆ ನಿರಾಕರಿಸುತ್ತಿರುವ ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದರು.

ಇದನ್ನೂ ಓದಿ: ಕ್ರೀಡಾ ಇಲಾಖೆಯಿಂದ ವಾಲಿಬಾಲ್ ಮತ್ತು ಅಥ್ಲೆಟಿಕ್ಸ್ ತರಬೇತಿ 

ಯುವ ಪೀಳಿಗೆಗೆ ಮಾರಕವಾಗುತ್ತಿರುವ ಮಾದಕ ವಸ್ತು:

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟದ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಆತಂಕಕಾರಿ ರೀತಿಯಲ್ಲಿ ಹೆಚ್ಚಾಗುತ್ತಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಸಭೆಯಲ್ಲಿ ಕಳಕಳಿ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಗಾಂಜಾ ವಶಪಡಿಸಿಕೊಳ್ಳುವ ಪ್ರಮಾಣ ಮತ್ತು ವ್ಯಸನಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. 2023 ರಲ್ಲಿ 13 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದ್ದರೆ, 2024ರಲ್ಲಿ ಅದು 16 ಕೆಜಿಗೆ ಏರಿಕೆಯಾಗಿತ್ತು. 2025ರಲ್ಲಿ 35 ಕೆಜಿಯಷ್ಟು ಗಾಂಜಾ ಪತ್ತೆಯಾಗಿದ್ದು, ಪ್ರಸಕ್ತ 2026ರ ಮೊದಲ ಮೂರು ತಿಂಗಳಲ್ಲೇ ಈಗಾಗಲೇ 12 ಕೆಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. 

ಮಾದಕ ವಸ್ತುಗಳ ಬಳಕೆಗೆ ಸಂಬಂಧಿಸಿದಂತೆ 2023 ರಲ್ಲಿ 51 ಪ್ರಕರಣಗಳು ದಾಖಲಾಗಿದ್ದರೆ, 2024ರಲ್ಲಿ 56 ಮತ್ತು 2025 ರಲ್ಲಿ 84 ಪ್ರಕರಣಗಳು ದಾಖಲಾಗಿವೆ. 2026ರ ಕೇವಲ ಮೂರು ತಿಂಗಳಲ್ಲಿ 31 ಪ್ರಕರಣಗಳು ದಾಖಲಾಗಿದ್ದು, 44 ಜನರನ್ನು ಬಂಧಿಸಲಾಗಿದೆ. ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವವರಲ್ಲಿ 18 ರಿಂದ 30 ವರ್ಷದೊಳಗಿನ ಯುವಕರು ಶೇ. 80 ರಿಂದ 90 ರಷ್ಟಿದ್ದಾರೆ ಎಂಬುದು ಅತ್ಯಂತ ದುಃಖಕರ ಸಂಗತಿಯಾಗಿದೆ. ದೇಶದ ಭವಿಷ್ಯವಾಗಬೇಕಾದ ಯುವ ಸಮುದಾಯವು ಈ ಮಾರಕ ವ್ಯಸನದ ಬಲೆಗೆ ಬೀಳುತ್ತಿರುವುದು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದರು.

ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಪ್ರತಿಭಟನೆ 

ಜಿಲ್ಲೆಗೆ ನೆರೆ ರಾಜ್ಯಗಳಾದ ಒಡಿಶಾ ಮತ್ತು ಆಂಧ್ರಪ್ರದೇಶದ ಮೂಲಕ ವಿವಿಧ ಮಾರ್ಗಗಳಿಂದ ಮಾದಕ ವಸ್ತುಗಳು ಸರಬರಾಜಾಗುತ್ತಿವೆ. ಒಡಿಶಾ – ವಿಶಾಖಪಟ್ಟಣಂ – ಬೆಂಗಳೂರು ಮಾರ್ಗವಾಗಿ ಚಲಿಸುವ ರೈಲುಗಳಲ್ಲಿ ಹೆಚ್ಚಿನ ಗಾಂಜ ರಾಜ್ಯಕ್ಕೆ ಸರಬರಾಜು ಆಗುತ್ತಿದೆ. ದಾವಣಗೆರೆ, ಚಳ್ಳಕೆರೆ, ಬಳ್ಳಾರಿ, ಹೊಸಪೇಟೆ ಮತ್ತು ಅನಂತಪುರದಿAದ ಜಿಲ್ಲೆಯಿಂದಲೂ ಡ್ರಗ್ ಪೆಡ್ರ‍್ಸ್ ಗಾಂಜಾ ಸರಬರಾಜು ಮಾಡುತ್ತಿದ್ದಾರೆ. 

ಗ್ರಾಮೀಣ ಭಾಗಗಳ ಹೊಲಗಳಲ್ಲಿ ಗಾಂಜಾ ಬೆಳೆಯುತ್ತಿರುವ ಪ್ರಕರಣಗಳೂ ಸಹ ಪತ್ತೆಯಾಗುತ್ತಿವೆ. ರೈಲ್ವೆ ನಿಲ್ದಾಣಗಳು ಮತ್ತು ಬಸ್‌ಗಳ ಮೂಲಕ ಸಾಗಣೆಯಾಗುವ ಮಾದಕ ವಸ್ತುಗಳನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ನಿರಂತರವಾಗಿ ತಪಾಸಣೆ ನಡೆಸಲಾಗುತ್ತಿದೆ. ಒಟ್ಟಾರೆಯಾಗಿ ಜಿಲ್ಲೆಯನ್ನು ಮಾದಕ ಮುಕ್ತಗೊಳಿಸಲು ಸಾರ್ವಜನಿಕರ ಸಹಕಾರವೂ ಅತ್ಯಗತ್ಯ ಎಂದು ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.

ಅಂತರರಾಜ್ಯ ಮದ್ಯ ಮತ್ತು ಸ್ಪಿರಿಟ್ ಸಾಗಣೆ ತಡೆಗೆ ಬಿಗಿ ಕ್ರಮ:

 ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಮಾದಕ ವಸ್ತುಗಳ ಸಾಗಣೆಯನ್ನು ತಡೆಗಟ್ಟಲು ಅಬಕಾರಿ ಇಲಾಖೆಯು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಪ್ರಮುಖ ಗಡಿ ಭಾಗಗಳಾದ ಮೊಣಕಾಲ್ಮೂರು, ಚಳ್ಳಕೆರೆ ಮತ್ತು ಹಿರಿಯೂರು ತಾಲ್ಲೂಕು ಗಡಿ ಭಾಗದಲ್ಲಿ ಶಾಶ್ವತ ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. 

ಇದನ್ನೂ ಓದಿ: ಜಿಲ್ಲೆಯ ಎಚ್‍ಐವಿ/ಏಡ್ಸ್ ಸೋಂಕಿತರನ್ನು ಮುಖ್ಯವಾಹಿನಿಗೆ ತಂದು, ಗುಣಮಟ್ಟದ ಚಿಕಿತ್ಸೆ ನೀಡಿ 

ಈ ಪೈಕಿ ಮೊಣಕಾಲ್ಮೂರು ಚೆಕ್‌ಪೋಸ್ಟ್ನಲ್ಲಿ ಇತ್ತೀಚೆಗೆ 48 ಲೀಟರ್ ಮದ್ಯವನ್ನು ಹೊತ್ತೊಯ್ಯುತ್ತಿದ್ದ ನಾಲ್ಕು ಚಕ್ರದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದಂತೆ ಗ್ರಾಮೀಣ ರಸ್ತೆಗಳ ಮೂಲಕ ಸಣ್ಣ ಪ್ರಮಾಣದಲ್ಲಿ ಸಾಗಿಸುತ್ತಿದ್ದ ಪ್ರಕರಣಗಳನ್ನು ಸಹ ಪತ್ತೆಹಚ್ಚಲಾಗಿದೆ ಎಂದು ಅಬಕಾರಿ ಉಪ ಆಯುಕ್ತೆ ಡಾ.ಆಶಾಲತಾ ಸಭೆಯಲ್ಲಿ ತಿಳಿಸಿದರು.

ಕಳೆದ ಸಾಲಿನಲ್ಲಿ ಅಬಕಾರಿ ಇಲಾಖೆಯಿಂದ ಒಟ್ಟು 23 ಪ್ರಕರಣಗಳನ್ನು ದಾಖಲಿಸಿ, 33 ಆರೋಪಿಗಳನ್ನು ಬಂಧಿಸಿಲಾಗಿದೆ. ಒಟ್ಟು 364 ಲೀಟರ್ ಮದ್ಯ ಹಾಗೂ 19 ವಾಹನಗಳನ್ನು ಜಪ್ತಿ ಮಾಡಲಾಗಿದೆ. ನೆರೆಯ ರಾಜ್ಯಗಳಾದ ಗೋವಾ ಹಾಗೂ ಬೆಳಗಾವಿ ಕಡೆಯಿಂದ ಬೆಂಗಳೂರು ಕಡೆಗೆ ಹೋಗುವ ಎನ್‌ಎಚ್-4 ಮತ್ತು ಎನ್‌ಎಚ್-13 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಾದಕ ದ್ರವ್ಯ ಹಾಗೂ ಸ್ಪಿರಿಟ್ ಸಾಗಣೆಯ ಮೇಲೆ ತೀವ್ರ ನಿಗಾ ಇಡಲಾಗಿದೆ. 

ಸರ್ಕಾರದ ಅನುಮತಿ ಪಡೆದು ಸ್ಪಿರಿಟ್ ಅಥವಾ ಮೆಥನಾಲ್ ಸಾಗಿಸುವ ವಾಹನಗಳನ್ನು ಜಿಲ್ಲೆಯ ಗಡಿಯಿಂದ ಮುಂದಿನ ಜಿಲ್ಲೆಯ ಗಡಿ ತಲುಪುವವರೆಗೆ ಅಬಕಾರಿ ತಂಡವು ರಾತ್ರಿಯಿಡೀ ಬೆಂಗಾವಲು ವಾಹನದ ಮೂಲಕ ರಕ್ಷಣೆ ನೀಡಿ ಯಾವುದೇ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸುಲಾಗುತ್ತಿದೆ. 

ಇದನ್ನೂ ಓದಿ: ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌

ಅಂತರರಾಜ್ಯ ಮದ್ಯ ಸಾಗಣೆ ತಡೆಗಟ್ಟಲು ಆಂಧ್ರಪ್ರದೇಶದ ಅಧಿಕಾರಿಗಳೊಂದಿಗೆ ಸಮನ್ವಯ ಸಭೆಗಳನ್ನು ನಡೆಸಲಾಗುತ್ತಿದೆ. ಅಲ್ಲದೆ, ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದ್ದು, ಸಾರ್ವಜನಿಕರು ದೂರು ನೀಡಿದ ತಕ್ಷಣ ಸ್ಪಂದಿಸಲು ಹೋಮ್ ಗಾರ್ಡ್ಗಳ ತಂಡವನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಕಳ್ಳಭಟ್ಟಿ ಮತ್ತು ಅಕ್ರಮ ಸೇಂದಿ ಮಾರಾಟವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕಠಿಣ ಕ್ರಮ ಕೈಗೊಂಡಿರುವುದಾಗಿ ಅಬಕಾರಿ ಉಪ ಆಯುಕ್ತೆ ಡಾ.ಆಶಾಲತಾ ಹೇಳಿದರು.

ಅಕ್ರಮ ನೀರಾ ಮಾರಾಟದ ವಿರುದ್ಧ ಕಾನೂನು ಕ್ರಮ:

ತೋಟಗಾರಿಕಾ ಇಲಾಖೆಯ ಸಮನ್ವಯದೊಂದಿಗೆ ಅಧಿಕೃತ ಪರವಾನಗಿ ಪಡೆದು ನೀರಾ ಮಾರಾಟ ಮಾಡಲು ಅವಕಾಶವಿದೆ. ಆದರೆ ಕಾನೂನು ಉಲ್ಲಂಘಿಸಿ ಜಿಲ್ಲೆಯ ಕೆಲ ರೈತ ಸಂಘಗಳ ಪರವಾನಗಿ ಪಡೆಯದೆ ನೀರು ಮಾರಾಟ ಮಾಡುತ್ತಿವೆ. ಈ ಹಿಂದೆ ಎಚ್ಚರಿಕೆ ನೀಡಿದ್ದರೂ ಪರವಾನಗಿ ಪಡೆಯದ ಹಿನ್ನೆಲೆಯಲ್ಲಿ ಅಂತಹ ಸಂಘಗಳ ವಿರುದ್ಧ ಪೊಲೀಸರಿಗೆ ಎಫ್‌ಐಆರ್ ದಾಖಲಿಸಲು ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.  

ಇದೇ ವೇಳೆ ಗಾಂಜಾ ಬೆಳೆಯುವುದರಿಂದ ಎದುರಿಸಬೇಕಾದ ಕಾನೂನು ಸಂಘರ್ಷದ ಕುರಿತು ರೈತರಿಗೆ ಜಾಗೃತಿ ಮೂಡಿಸಬೇಕು. ಬೆಳೆ ಸಮೀಕ್ಷೆ ಹಂತದಲ್ಲಿ ಸಮೀಕ್ಷಾಕಾರರಿಗೆ ಗಾಂಜಾ ಬೆಳೆಯ ಮಾಹಿತಿ ನೀಡಲು ತರಬೆತಿ ನೀಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಶಾಲಾ ಕಾಲೇಜುಗಳ ಸುತ್ತಮುತ್ತಲಿನ ಗೂಡು ಅಂಗಡಿಗಳನ್ನು ತೆರವು ಮಾಡುವಂತೆ ನಗರ ಸಭೆ ಅಧಿಕಾರಿಗಳಿಗೆ ಆದೇಶಿಸಿದರು.

ಇದನ್ನೂ ಓದಿ: ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ

ಸಭೆಯಲ್ಲಿ ಉಪವಿಭಾಗಧಿಕಾರಿ ಡಾ.ಕೆ.ಜೆ.ಕಾಂತರಾಜು, ಪೊಲೀಸ್ ಉಪಾಧೀಕ್ಷಕರುಗಳಾದ ಅರುಣ್ ನಾಗೇಗೌಡ, ಶಿವಕುಮಾರ್, ಸತ್ಯನಾರಾಯಣ್ ರಾವ್ ಎಂ.ಜಿ., ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಜಿ.ಸವಿತಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್ ಸೇರಿದಂತೆ ಮತ್ತಿರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDrugMarijuanaNarcoticsಗಾಂಜಾಚಿತ್ರದುರ್ಗಚಿತ್ರದುರ್ಗ ನ್ಯೂಸ್ಡ್ರಗ್ಮಾದಕ ವಸ್ತು
Share This Article
Facebook Email Print
Previous Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
Next Article ಲಾವಣ್ಯ, ವಾಣಿ, ಲಕ್ಷ್ಮಿ PU RESULT | ತುರುವನೂರು ಸರ್ಕಾರಿ ಪಿಯು ಕಾಲೇಜಿಗೆ 93.24 ಫಲಿತಾಂಶ
Leave a Comment

Leave a Reply Cancel reply

Your email address will not be published. Required fields are marked *

ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
ಮುಖ್ಯ ಸುದ್ದಿ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up