By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಅಗತ್ಯ ವಸ್ತುಗಳ ಬೆಲೆ ಏರಿಕೆ | ಬಿಜೆಪಿ ರೈತ ಮೋರ್ಚಾದಿಂದ ಎತ್ತಿನ ಬಂಡಿ ಏರಿ ಪ್ರತಿಭಟನೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಅಗತ್ಯ ವಸ್ತುಗಳ ಬೆಲೆ ಏರಿಕೆ | ಬಿಜೆಪಿ ರೈತ ಮೋರ್ಚಾದಿಂದ ಎತ್ತಿನ ಬಂಡಿ ಏರಿ ಪ್ರತಿಭಟನೆ 

ಮುಖ್ಯ ಸುದ್ದಿ

ಅಗತ್ಯ ವಸ್ತುಗಳ ಬೆಲೆ ಏರಿಕೆ | ಬಿಜೆಪಿ ರೈತ ಮೋರ್ಚಾದಿಂದ ಎತ್ತಿನ ಬಂಡಿ ಏರಿ ಪ್ರತಿಭಟನೆ 

News Desk Chitradurga News
Last updated: 2 July 2024 22:25
News Desk Chitradurga News
12 months ago
Share
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 02 JULY 2024

ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: ವಚನ ಸಾಹಿತ್ಯ ಸಂರಕ್ಷಿಸಿದವರು ಡಾ.ಫ.ಗು.ಹಳಕಟ್ಟಿ | ಬಿ.ಟಿ.ಕುಮಾರಸ್ವಾಮಿ

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಬಿಜೆಪಿ ರೈತ ಮೋರ್ಚಾದಿಂದ ಎತ್ತಿನ ಬಂಡಿ ಏರಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಒಂದು ವರ್ಷದಲ್ಲಿ ಅಗತ್ಯ ವಸ್ತುಗಳ ಬೆಲೆ ಜಾಸ್ತಿ ಮಾಡಿ ರೈತರು, ಬಡವರು, ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ. ಬಿ.ಎಸ್.ಯಡಿಯೂರಪ್ಪ, ಬೊಮ್ಮಾಯಿ ಇವರುಗಳು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೊಳಿಸಿದ್ದ ಅನೇಕ ಯೋಜನೆಗಳನ್ನು ರದ್ದುಪಡಿಸಿದೆ.

ರೈತರಿಗೆ ನೀಡಲಾಗುತ್ತಿದ್ದ ನಾಲ್ಕು ಸಾವಿರ ರೂ.ಗಳನ್ನು ನಿಲ್ಲಿಸಿದೆ. ರೈತ ಮಕ್ಕಳ ಶಿಕ್ಷಣಕ್ಕೆ ಹಣಕಾಸು ನೆರವು ನೀಡುತ್ತಿದ್ದುದನ್ನು ರದ್ದುಪಡಿಸಿ, ರೈತ ವಿರೋಧಿ ಸರ್ಕಾರ ಎನ್ನುವುದನ್ನು ಸಾಬೀತುಪಡಿಸಿರುವುದರಿಂದ ಒಂದಲ್ಲ ಒಂದು ಹೋರಾಟ ನಡೆಯುತ್ತಲೆ ಇದೆ ಎಂದರು.

ಇದನ್ನೂ ಓದಿ: IMA AWARD; ಚಿತ್ರದುರ್ಗ ಮೂಲದ ವೈದ್ಯ ಡಾ.ಜಿ.ವಿ.ಬಸವಾಜ್ ಅವರಿಗೆ ಅತ್ಯುನ್ನತ ಪ್ರಶಸ್ತಿ

ಪೆಟ್ರೋಲ್-ಡೀಸೆಲ್, ಹಾಲು, ಬಿತ್ತನೆ ಬೀಜ, ರಸಗೊಬ್ಬರ ಬೆಲೆ ಏರಿಕೆಯಾಗಿದೆ. ಕರ್ನಾಟಕ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ.ಗಳ ಹಗರಣ, ಇದೆ ರೀತಿ ಅಂಬೇಡ್ಕರ್, ಆದಿಜಾಂಬವ, ಭೋವಿ ನಿಮಗಳಲ್ಲಿಯೂ ಅವ್ಯವಹಾರವಾಗಿದೆ. ಖಜಾನೆಯಿಂದ ರೂ.80 ಕೋಟಿ ವರ್ಗಾವಣೆಯಾಗಿದೆ. ಇದೆಲ್ಲಾ ರಾಜ್ಯದ ಮುಖ್ಯಮಂತ್ರಿಗೆ ಗೊತ್ತಿದ್ದರೂ ಏನು ಅರಿಯದವರಂತಿದ್ದಾರೆಂದು ಕಿಡಿ ಕಾರಿದರು.

ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಭ್ರಷ್ಠಾಚಾರವೇ ಸಾಧನೆಯಾಗಿದೆ. ಹಾಲಿನ ಬೆಲೆ ಹೆಚ್ಚಳ, ವಿದ್ಯುತ್ ದರ ಏರಿಕೆ, ಪೆಟ್ರೋಲ್-ಡೀಸೆಲ್ ಬೆಲೆ ದುಬಾರಿ, ಬಿತ್ತನೆ ಬೀಜ, ರಸಗೊಬ್ಬರಗಳ ಕೊರತೆ. ಒಟ್ಟಾರೆ ಇದೊಂದು ರೈತ ವಿರೋಧಿ ಸರ್ಕಾರವಾಗಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆಹೊತ್ತು ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು.

ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್‍ ಯಾದವ್ ಮಾತನಾಡಿ, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಜಾರಿಗೊಳಿಸಿದ ಯೋಜನೆಗಳನ್ನೆಲ್ಲಾ ಈಗಿನ ಕಾಂಗ್ರೆಸ್ ಸರ್ಕಾರ ರದ್ದುಪಡಿಸಿ ತೊಘಲಕ್ ದರ್ಬಾರ್ ನಡೆಸುತ್ತಿದೆ. ದೇಶಕ್ಕೆ ಅನ್ನ ನೀಡುವ ರೈತರಿಗೆ ಟ್ರಾನ್ಸ್‍ಫಾರ್ಮರ್ ಸಿಗುತ್ತಿಲ್ಲ. ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆಯಾಗಿದೆ. ಬಿಟ್ಟಿ ಭಾಗ್ಯಗಳಿಗೆ ಹಣ ಜೋಡಿಸಲು ಆಗದ ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರದಲ್ಲಿ ಮುಳುಗಿದೆ ಎಂದರು.

ಇದನ್ನೂ ಓದಿ: AYYAPPA SWAMY; ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಒಂದು ವಾರ ಧಾರ್ಮಿಕ ಕಾರ್ಯಕ್ರಮಗಳು | ಭಕ್ತಿ ಕುಸುಮಾಂಜಲಿ

ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ರಾಜೇಶ್ ಬುರುಡೆಕಟ್ಟೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗೆ ಹಾಲಿನ ಪ್ರೋತ್ಸಾಹ ಧನವೂ ಇಲ್ಲ. ಬರ ಪರಿಹಾರದ ಹಣವೂ ಕೈಸೇರಿಲ್ಲ. ಬಿತ್ತನೆ ಬೀಜದ ದರ ಏರಿಕೆಯಾಗಿದೆ. ಭೂಸಿರಿ ಯೋಜನೆ ನಿಂತಿದೆ. ರೈತ ಮಕ್ಕಳ ಶಿಕ್ಷಣಕ್ಕಾಗಿ ಜಾರಿಗೆ ತಂದ ವಿದ್ಯಾಸಿರಿ ಯೋಜನೆಯನ್ನು ರದ್ದುಪಡಿಸಿರುವ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಿ.ಟಿ.ಸುರೇಶ್‍ಸಿದ್ದಾಪುರ, ಸಂಪತ್‍ಕುಮಾರ್, ಖಜಾಂಚಿ ಮಾಧುರಿ ಗಿರೀಶ್, ಕೆ.ಟಿ.ಕುಮಾರಸ್ವಾಮಿ, ನರೇಂದ್ರ ಹೊನ್ನಾಳ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ನಾಗರಾಜ್‍ಬೇದ್ರೆ, ದಗ್ಗೆ ಶಿವಪ್ರಕಾಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPbullock cartChitradurga newsKannada Newsprice riseprotestRaitha Morchaಎತ್ತಿನ ಬಂಡಿಕನ್ನಡ ನ್ಯೂಸ್ಚಿತ್ರದುರ್ಗ ನ್ಯೂಸ್ಪ್ರತಿಭಟನೆಬಿಜೆಪಿಬೆಲೆ ಏರಿಕೆರೈತ ಮೋರ್ಚಾ
Share This Article
Facebook Email Print
Previous Article arecanut price list AdikeRate; ಅಡಿಕೆ ಧಾರಣೆ | ರಾಜ್ಯದ ಪ್ರಮುಖ ಮಾರುಕಟ್ಟೆಗಳ ರೇಟ್
Next Article This Filipino guy channels his inner Miss Universe by strutting in six-inch heels and speedos
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up