By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಭಾರತದ ಜನಪ್ರಿಯತೆ ಉತ್ತುಂಗಕ್ಕೆ | ಶಾಸಕ‌ ಎಂ.ಚಂದ್ರಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಭಾರತದ ಜನಪ್ರಿಯತೆ ಉತ್ತುಂಗಕ್ಕೆ | ಶಾಸಕ‌ ಎಂ.ಚಂದ್ರಪ್ಪ

ಹೊಳಲ್ಕೆರೆ

ಭಾರತದ ಜನಪ್ರಿಯತೆ ಉತ್ತುಂಗಕ್ಕೆ | ಶಾಸಕ‌ ಎಂ.ಚಂದ್ರಪ್ಪ

News Desk Chitradurga News
Last updated: 14 June 2025 19:31
News Desk Chitradurga News
2 weeks ago
Share
ಭರಮಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 14 JUNE 2025

ಹೊಳಲ್ಕೆರೆ: ಮುಂದುವರೆದ ದೇಶಗಳು ಭಾರತದ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡುತ್ತಿರುವುದಕ್ಕೆ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿರವರ ಪರಿಶ್ರಮ ಕಾರಣ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

Also Read: ತುರ್ತು ನಿರ್ವಹಣಾ ಕಾಮಗಾರಿ | ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ

ಭರಮಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25 ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ಕ್ರಾಸ್, ರೋವರ್ಸ್ ಮತ್ತು ರೇಂರ‍್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಮೈಸೂರು ಮಹಾರಾಜ ಕಾಲೇಜಿನ ವಿನ್ಯಾಸ ನೋಡಿಕೊಂಡು ಅದೇ ರೀತಿ ಹೊಳಲ್ಕೆರೆಯಲ್ಲಿ ಕಾಲೇಜು ಕಟ್ಟಿಸಿರುವುದರಿಂದ 800ಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಅದರಲ್ಲಿ 500 ಹೆಣ್ಣು ಮಕ್ಕಳಿದ್ದಾರೆ. ನುರಿತ ಶಿಕ್ಷಕರುಗಳ ಸೇವೆ ಅನನ್ಯ.

146 ಕೋಟಿ ಜನಸಂಖ್ಯೆಯಿರುವ ಭಾರತದಲ್ಲಿ ಗುಣಮಟ್ಟದ ಶಿಕ್ಷಣ ಸಿಗಬೇಕು. ಆಗ ಮಾತ್ರ ಸಾಕ್ಷರರಾಗಲು ಸಾಧ್ಯ.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು 26 ಮಂದಿ ಅಮಾಯಕರನ್ನು ಬಲಿ ತೆಗೆದುಕೊಂಡಿದ್ದಕ್ಕೆ ಪ್ರತಿಕಾರವಾಗಿ ನಮ್ಮ ದೇಶದ ಯೋಧರು ಪಾಕಿಸ್ತಾನಕ್ಕೆ ನುಗ್ಗಿ ಉಗ್ರಗಾಮಿಗಳ ನೆಲೆಗಳನ್ನು ಧ್ವಂಸಗೊಳಿಸಿ ಭಾರತದ ಶಕ್ತಿಯನ್ನು ಪ್ರದರ್ಶಿಸಿದ್ದಾರೆ.

Also Read: ನವೋದಯ ವಿದ್ಯಾಲಯ | 6ನೇ ತರಗತಿ ಪ್ರವೇಶಕ್ಕೆ ಅರ್ಜಿ

ಮನುಷ್ಯತ್ವ, ಮಾನವೀತಯತೆಗೆ ಹೆಸರಾದವರು ನಮ್ಮ ದೇಶದ ಜನ. ತಂದೆ-ತಾಯಿ, ಗುರು-ಹಿರಿಯರನ್ನು ಗೌರವಿಸುವುದರ ಜೊತೆಗೆ ದೇಶಾಭಿಮಾನ ಮೈಗೂಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಶಾಸಕ ಡಾ.ಎಂ.ಚಂದ್ರಪ್ಪ ಕರೆ ನೀಡಿದರು.

ನೀವುಗಳು ಪ್ರಥಮ ರ‍್ಯಾಂಕ್ ಪಡೆದರೆ ಒಂದು ಲಕ್ಷ ರೂ. ಬಹುಮಾನ ನೀಡುತ್ತೇನೆ. ಹತ್ತನೆ ತರಗತಿಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದವರಿಗೆ 50 ಸಾವಿರ ರೂ.ಗಳನ್ನು ನೀಡುವುದಾಗಿ ಘೋಷಿಸಿದ್ದೆ. ಅದರಂತೆ ಆ.15 ರಂದು ಕೊಡುತ್ತೇನೆ. 2025-26 ನೇ ಸಾಲಿಗೆ ಎಸ್.ಎಸ್.ಎಲ್.ಸಿ.ಯಲ್ಲಿ 625 ಕ್ಕೆ 625 ಅಂಕಗಳನ್ನು ಎಷ್ಟೆ ವಿದ್ಯಾರ್ಥಿಗಳು ಪಡೆಯಲಿ ತಲಾ ಒಂದು ಲಕ್ಷ ರೂ.ಗಳನ್ನು ನೀಡುವುದಾಗಿ ಘೋಷಿಸಿದರು.

ತಾಲ್ಲೂಕಿನಾದ್ಯಂತ 350 ರಿಂದ ನಾಲ್ಕು ನೂರು ಶಾಲೆಗಳನ್ನು ಕಟ್ಟಿಸಿದ್ದೇನೆ. ಎಲ್ಲೆಲ್ಲಿ ಶಿಕ್ಷಕರಿಲ್ಲವೋ ಅಲ್ಲೆಲ್ಲಾ ಶಿಕ್ಷಕರುಗಳನ್ನು ನೇಮಿಸಲಾಗಿದೆ. ಬಹಳಷ್ಟು ಶಾಲೆಗಳಿಗೆ ನನ್ನ ಅನುದಾನದಲ್ಲಿ ಬಸ್‌ಗಳನ್ನು ಬಿಟ್ಟಿದ್ದೇನೆ. ಇದರಿಂದ ಬಡ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಿದೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದೇನೆ ಎಂದರು.

Also Read: ಚಿಕನ್‍ನೊಂದಿಗೆ ಮೊಸರು ತಿನ್ನಬಹುದೇ? 

ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರುಗಳಾದ ಡಿ.ಎಸ್.ಪ್ರವೀಣ್‌ಕುಮಾರ್, ಕರಿಯಮ್ಮ, ನಾಡಿಗರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶಶಿಕಲಾ ಎಸ್. ಸತ್ಯನಾರಾಯಣ, ಡಾ.ಹರೀಶ್, ಚಂದ್ರಕುಮಾರ್, ಗಿರೀಶ್, ಮಸೂದ್ ಅಹಮದ್, ಮಮತಾ, ಶ್ರೀದೇವಿ, ವಿರುಪಾಕ್ಷಪ್ಪ, ಚಂದ್ರಶೇಖರಪ್ಪ, ಭೋಧಕ-ಬೋಧಕೇತರ ವರ್ಗದವರು ಮತ್ತು ವಿದ್ಯಾರ್ಥಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BharamsagarChitradurgaChitradurga newsChitradurga UpdatesGovernment First Grade CollegeIndiaKannada Latest NewsKannada NewsMLA M. Chandrappaಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಭರಮಸಾಗರಭಾರತಶಾಸಕ ಎಂ.ಚಂದ್ರಪ್ಪಸರ್ಕಾರಿ ಪ್ರಥಮ ದರ್ಜೆ ಕಾಲೇಜು
Share This Article
Facebook Email Print
Previous Article ಅತ್ತೆ-ಮಾವ ಹೇಳಿದ ಈ 3 ಕೆಲಸಗಳನ್ನು ಎಂದಿಗೂ ಮಾಡಬೇಡಿ; ನಿಮ್ಮ ಜೀವನ ಹಾಳಾಗುತ್ತದೆ
Next Article ವೀರಶೈವ ಅರ್ಬನ್ ಕ್ರೆಡಿಟ್ ಕೊ-ಆಪರೇಟಿವ್ ಬ್ಯಾಂಕ್ 89 ಲಕ್ಷ ನಿವ್ವಳ ಲಾಭ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up