By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಇಂದಿರಾ ಕ್ಯಾಂಟೀನ್‌ ಊಟದ ಮೆನು ವ್ಯತ್ಯಾಸ | ಹೆಚ್ಚುವರಿ ಹಣ | ಪರಿಶೀಲಿಸಿ ಅಮಾನತು ಸಚಿವ ರಹೀಂ ಖಾನ್‌
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಇಂದಿರಾ ಕ್ಯಾಂಟೀನ್‌ ಊಟದ ಮೆನು ವ್ಯತ್ಯಾಸ | ಹೆಚ್ಚುವರಿ ಹಣ | ಪರಿಶೀಲಿಸಿ ಅಮಾನತು ಸಚಿವ ರಹೀಂ ಖಾನ್‌

ಮುಖ್ಯ ಸುದ್ದಿ

ಇಂದಿರಾ ಕ್ಯಾಂಟೀನ್‌ ಊಟದ ಮೆನು ವ್ಯತ್ಯಾಸ | ಹೆಚ್ಚುವರಿ ಹಣ | ಪರಿಶೀಲಿಸಿ ಅಮಾನತು ಸಚಿವ ರಹೀಂ ಖಾನ್‌

chitradurganews.com
Last updated: 4 June 2025 20:42
chitradurganews.com
2 weeks ago
Share
Minister Rahim khan eat Indira canteen food
ಸಚಿವ ರಹೀಂ ಖಾನ್‌ ಇಂದಿರಾ ಕ್ಯಾಂಟಿನ್‌ನಲ್ಲಿ ಊಟ ಸವಿದರು.
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 04 JUNE 2025

ಚಿತ್ರದುರ್ಗ: ಚಿತ್ರದುರ್ಗದ ಹೃದಯ ಭಾಗದಲ್ಲಿರುವ ಇಂದಿರಾ ಕ್ಯಾಂಟೀನ್‍ನಲ್ಲಿನ ಊಟ ಹಾಗೂ ಉಪಹಾರದ ಮೆನುಗೆ ಸಂಬಂಧಿಸಿದಂತೆ ದೂರುಗಳು ಕೇಳಿ ಬಂದಿದ್ದು, ಈ ಕುರಿತು ದೂರುಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದರು.

ಚಿತ್ರದುರ್ಗ ನಗರದ ಪ್ರವಾಸಿ ಮಂದಿರ ಪಕ್ಕದ ಇಂದಿರಾ ಕ್ಯಾಂಟೀನ್‍ಗೆ ಬುಧವಾರ ಸಂಜೆ ಭೇಟಿ ನೀಡಿ, ಪರಿಶೀಲನೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ಜಿಲ್ಲಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರಿತ ವಿಲೇವಾರಿಗೆ ಕ್ರಮ ವಹಿಸಿ | ನ್ಯಾ.ರೋಣ ವಾಸುದೇವ್

ಇಂದಿರಾ ಕ್ಯಾಂಟೀನ್‍ನಲ್ಲಿ ಸಮರ್ಪಕವಾಗಿ ಮೆನು ಪ್ರಕಾರ ಊಟ ಹಾಗೂ ಉಪಹಾರ ನೀಡುತ್ತಿಲ್ಲ. ಹೊಸ ಮೆನು ನಿಗದಿಪಡಿಸಿ, ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬುದಾಗಿ ದೂರುಗಳು ಕೇಳಿಬಂದಿದ್ದವು.

ಈ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್‍ಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ಅಮಾನತಿಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಹೃದ್ರೋಗಿಗಳು ಮಾವಿನ ಹಣ್ನನ್ನು ತಿನ್ನುವುದು ಎಷ್ಟು ಒಳ್ಳೆಯದು?

ಇಂದಿರಾ ಕ್ಯಾಂಟೀನ್‍ನಲ್ಲಿ ಬೆಳಿಗಿನ ಉಪಹಾರಕ್ಕೆ ರೂ.5 ಹಾಗೂ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ರೂ.10 ದರ ನಿಗಧಿಪಡಿಸಲಾಗಿದೆ. ಆದಾಗ್ಯೂ ಸಹ ನಿಗಧಿಪಡಿಸಿದ ದರಕ್ಕಿಂತ ಹೆಚ್ಚಿನದಾಗಿ ಹಣ ಪಡೆಯಲಾಗುತ್ತಿದೆ ಎಂಬ ದೂರುಗಳಿವೆ, ಹಾಗಾಗಿ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಚಪಾತಿ ಪಲ್ಯ, ಅನ್ನ ಸವಿದ ಸಚಿವರು:

ಇಂದಿರಾ ಕ್ಯಾಂಟೀನ್‍ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಚಿವ ರಹೀಂ ಖಾನ್ ಅವರು, ಕ್ಯಾಂಟೀನ್‍ನಲ್ಲಿ ರಾತ್ರಿ ಊಟಕ್ಕಾಗಿ ತಯಾರಾಗಿದ್ದ ಚಪಾತಿ, ಪಲ್ಯ, ಅನ್ನ ಸಾಂಬಾರ್ ಸವಿದು, ಊಟದ ಗುಣಮಟ್ಟ ಪರಿಶೀಲಿಸಿದರು.

ಇದನ್ನೂ ಓದಿ: ಇಂದಿನ ಅಡಿಕೆ ಮಾರುಕಟ್ಟೆ ವಿವರ

ಈ ಸಂದರ್ಭದಲ್ಲಿ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ನಗರಸಭೆ ಅಧಿಕಾರಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AmanthuAnnaChapatiChitradurgaChitradurga newsIndira CanteenKannada NewsMunicipal Administration MinisterRahim KhanSambarTourist Mandirಅನ್ನಅಮಾನತುಇಂದಿರಾ ಕ್ಯಾಂಟೀನ್‌ಕನ್ನಡ ಸುದ್ದಿಚಪಾತಿಚಿತ್ರದರ್ಗಚಿತ್ರದುರ್ಗ ನ್ಯೂಸ್ಪೌರಾಡಳಿತ ಸಚಿವಪ್ರವಾಸಿ ಮಂದಿರರಹೀಂ ಖಾನ್‌ಸಾಂಬಾರ್‌
Share This Article
Facebook Email Print
Previous Article arecanut price list ಇಂದಿನ ಅಡಿಕೆ ಮಾರುಕಟ್ಟೆ ವಿವರ
Next Article today bhavishya Astrology: ದಿನ ಭವಿಷ್ಯ | ಜೂನ್ 05 | ನಿರುದ್ಯೋಗಿಗಳಿಗೆ ಅವಕಾಶಗಳು, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ, ಹೊಸ ವಾಹನ ಯೋಗ
Leave a Comment

Leave a Reply Cancel reply

Your email address will not be published. Required fields are marked *

ಆಶ್ರಯ ಬಡಾವಣೆ ನಿರ್ಮಾಣ, ಸಿಸಿ ರಸ್ತೆ, ಶಾಲಾ ಕಟ್ಟಡ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
ಹೊಳಲ್ಕೆರೆ
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ | ಕುರಿ, ಕೋಳಿ ಮತ್ತು ಹಸು ಸಾಕಾಣಿಕೆ ತರಬೇತಿಗೆ ನೇರ ಅಹ್ವಾನ
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜೂನ್‌ 17 | ಇಂದಿನ ಮಾರುಕಟ್ಟೆ ಪೂರ್ಣ ವಿವರ
ಅಡಕೆ ಧಾರಣೆ
ಜೇನು ಕೃಷಿಯನ್ನು ಸಮಗ್ರ ಕೃಷಿಯನ್ನಾಗಿ ಅಳವಡಿಸಿಕೊಳ್ಳಿ | ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up