
CHITRADURGA NEWS | 19 NOVEMBER 2024
ಚಿತ್ರದುರ್ಗ: ಸೀಬಾರದ ಮಾಜಿ ಸಚಿವ ಎಚ್.ಆಂಜನೇಯ ಕಚೇರಿಯಲ್ಲಿ ಮಂಗಳವಾರ ಇಂದಿರಾಗಾಂಧಿ(Indira Gandhi) ಜನ್ಮದಿನಾಚರಣೆ ಆಚರಿಸಲಾಯಿತು.
ಕ್ಲಿಕ್ ಮಾಡಿ ಓದಿ: ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರಿಗೆ ಸುವರ್ಣ ಮಹೋತ್ಸವ ಪುರಸ್ಕಾರ
ಇಂದಿರಾಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಮಾಜಿ ಸಚಿವ ಹೆಚ್.ಆಂಜನೇಯ, ದೇಶದ ಪ್ರಥಮ ಮಹಿಳಾ ಪ್ರಧಾನಿ, ವಿಶ್ವದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಆಡಳಿತ ನಡೆಸಿದ 70-80ರ ದಶಕದ ಕಾಲ ಬಡಜನರ ಪಾಲಿಗೆ ಬಹುದೊಡ್ಡ ವರವಾಗಿದ್ದರು.
ಹಣಕಾಸು ಸಂಸ್ಥೆ, ಬ್ಯಾಂಕ್, ಶ್ರೀಮಂತರಿಗೆ ಮಾತ್ರ ಸೀಮಿತವಾಗಿದ್ದ ಕಾಲಘಟ್ಟದಲ್ಲಿ ಬಂಡಾವಾಳಶಾಹಿಗಳನ್ನು ಎದುರು ಹಾಕಿಕೊಂಡು, ಸಾಮಾನ್ಯ ಜನರು ಬ್ಯಾಂಕ್ಗಳಿಗೆ ಪ್ರವೇಶಿಸಿ ಆರ್ಥಿಕ ವಹಿವಾಟು ನಡೆಸುವ ಹಾಗೂ ಹಣಕಾಸಿನ ಸೌಲಭ್ಯ ಪಡೆಯುವ ಹಕ್ಕು ನೀಡಿದ ದಿಟ್ಟ ಮಹಿಳೆ ಎಂದರು.
ಇಂದಿರಾ ಗಾಂಧಿ ಚಿಂತನೆಯಂತೆ ಬಡತನ ವಿಮೋಚನೆಗಾಗಿ ಕಾಂಗ್ರೆಸ್ ಪಕ್ಷ ನಿರಂತರವಾಗಿ ಶ್ರಮಿಸುತ್ತಿದ್ದು, ಅವರ ಆಶಯದಂತೆ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಹಸಿವುಮುಕ್ತ ರಾಜ್ಯವನ್ನಾಗಿಸಲು ಸಿದ್ದರಾಮಯ್ಯ ಶ್ರಮಿಸುತ್ತಿದ್ದು, ಈಗ ಸೋಮಾರಿ ಮಾತ್ರ ಬಡವ ಆಗಿರಲು ಸಾಧ್ಯ ಎಂದರು.
ಕ್ಲಿಕ್ ಮಾಡಿ ಓದಿ: ತಾಯಿ ಮಗಳು ಆತ್ಮಹತ್ಯೆ | ಚಿಕ್ಕಂದವಾಡಿಯಲ್ಲಿ ಧಾರುಣ ಘಟನೆ
ಈ ವೇಳೆ ಲಿಡ್ಕರ್ ಮಾಜಿ ಅಧ್ಯಕ್ಷ ಓ.ಶಂಕರ್, ತಾಪಂ ಮಾಜಿ ಸದಸ್ಯ ಸಮರ್ಥರಾಯ್, ಮುಖಂಡರಾದ ಕೆಂಗುಂಟೆ ಜಯಪ್ಪ, ಚೇತನ್ ಬೋರೆನಹಳ್ಳಿ, ರಮೇಶ್, ಕಾಂಗ್ರೆಸ್ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಅನಿಲ್ ಕೋಟಿ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
