CHITRADURGA NEWS | 30 JUNE 2025
ಚಿತ್ರದುರ್ಗ: ತಿನ್ನುವ ಅನ್ನ, ಕುಡಿಯುವ ನೀರಿಗೆ ಅಡ್ಡಿ ಮಾಡುವುದು ಅಕ್ಷಮ್ಯ. ಹೊಸದುರ್ಗ ಹಾಗೂ ತರೀಕೆರೆ ತಾಲೂಕಿನ ಕುಡಿಯುವ ನೀರಿಗೆ ಅಡ್ಡಿ ಮಾಡುತ್ತಿರುವ ದಾವಣಗೆರೆಯವರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
Also Read: ಅಡಿಕೆ ಧಾರಣೆ | ಜೂನ್ 30 | ಯಾವ ಅಡಿಕೆಗೆ ಎಷ್ಟು ರೇಟ್
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹುತೇಕ ಪೂರ್ಣಗೊಂಡಿರುವ ಭದ್ರಾ ಜಲಾಶಯದಿಂದ ಹೊಸದುರ್ಗ ತಾಲೂಕಿನ 346 ಜನವಸತಿ ಪ್ರದೇಶಗಳಿಗೆ ನೀರು ತರುವ ಯೋಜನೆಗೆ ಈಗ ಅಡ್ಡಿಪಡಿಸಬಾರದು ಎಂದರು.
ಅನ್ನ, ಹಾಗೂ ನೀರಿಗೆ ಯಾವುದೇ ಸೀಮೆಯ ನಿರ್ಬಂಧ ಇಲ್ಲ. ಮಹಾರಾಷ್ಟ್ರದ ಜತ್ ತಾಲೂಕಿಗೆ ಕರ್ನಾಟಕದ ಕೃಷ್ಣಾ ನದಿ ನೀರು ಕೊಡಲಾಗುತ್ತಿದೆ. ಇದಕ್ಕಾಗಿ ಅವರು ೫೦ ವರ್ಷ ಹೋರಾಟ ಮಾಡಿದ್ದರು. ಬೇಸಿಗೆ ಸಂದರ್ಭದಲ್ಲಿ ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ಕರ್ನಾಟಕಕ್ಕೆ ನೀರು ಹರಿಸಿ ಹಸಿವು ನೀಗಿಸುತ್ತಾರೆ ಎಂದು ಗೋವಿಂದ ಕಾರಜೋಳ ವಿವರಿಸಿದರು.
ವಿರೋಧ ಮಾಡುತ್ತಿರುವವರು ಕೂಡಲೇ ಹಿಂದೆ ಸರಿಯಬೇಕು. ಸರ್ಕಾರ ಕಾಮಗಾರಿ ಮುಗಿಸಿ ಟ್ರಯಲ್ ರನ್ ನಡೆಸಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಾವ ವಿರೋಧವನ್ನು ಲೆಕ್ಕಿಸದೆ ಕಾಮಗಾರಿ ಪೂರ್ಣಗೊಳಿಸಿ ಸುಂದರ ಕಾರ್ಯಕ್ರಮ ಆಯೋಜಿಸಿ ಲೋಕಾರ್ಪಣೆ ಮಾಡಬೇಕು ಎಂದು ಒತ್ತಾಯಿಸಿದರು.
Also Read: ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಕುಡಿಯುವ ನೀರಿನ ಕಾಮಗಾರಿಗೆ ಅಡ್ಡಿಪಡಿಸುವುದು ವಿಕೃತ ಮನಸ್ಥಿತಿ. 834 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನವಾಗುತ್ತಿದೆ. ಎರಡು ಹಂತದಲ್ಲಿ ಈ ಯೋಜನೆಗೆ ಬಿಜೆಪಿ ಸರ್ಕಾರವೇ ಅನುದಾನ ನೀಡಿದೆ ಎಂದರು.
ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ಕಾಮಗಾರಿಯಿಂದ ಜಲಾಶಯಕ್ಕೆ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಇದೇ ಯೋಜನೆಯಡಿ ಮನೆ ಮನೆಗೆ ನೀರು ಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕೂಡಾ 31 ಕೋಟಿ ರೂ. ಅನುದಾನ ನೀಡಿದೆ. ಈಗ ಕಾಮಗಾರಿಗೆ ವಿರೋಧ ಮಾಡುವವರು ನರೇಂದ್ರ ಮೋದಿ ಅವರ ಆಶಯಕ್ಕೆ ಧಕ್ಕೆ ತರಲು ಹೊರಟಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಹೊಸದುರ್ಗ ತಾಲೂಕಿನ 346 ಜನವಸತಿ ಪ್ರದೇಶಗಳಲ್ಲಿ 225 ರಲ್ಲಿ ಪರಿಶಿಷ್ಟರು, ಹಿಂದುಳಿದ ವರ್ಗದವರೇ ಇದ್ದಾರೆ. ಈ ಯೋಜನೆಗೆ ಅಡ್ಡಿ ಮಾಡಿದರೆ ಯಾರು ಮಾತನಾಡುವುದಿಲ್ಲ ಎನ್ನುವ ದಾರ್ಷ್ಯದಿಂದ ದಾವಣಗೆರೆಯ ಕೆಲವರು ಅಡ್ಡಿ ಮಾಡುತ್ತಿದ್ದಾರೆ. ಕುಡಿಯುವ ನೀರಿಗೆ ತಡೆ ಮಾಡುವ ಮೂಲಕ ಆ ತಾಲೂಕಿನ ಹಿಂದುಳಿದವರು, ಪರಿಶಿಷ್ಟರ ಬಾಯಿಗೆ ಮಣ್ಣು ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಕಡಲೆಕಾಳು, ಶೇಂಗಾ ರೇಟ್ ಎಷ್ಟಿದೆ?
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಬಿಜೆಪಿ ನಿಯೋಜಿತ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ನಿಕಟಪೂರ್ವ ಅದ್ಯಕ್ಷ ಎ.ಮುರುಳಿ, ಪ್ರಧಾನ ಕಾರ್ಯದರ್ಶಿ ಸಂಪತ್, ಖಜಾಂಚಿ ಮಾಧುರಿ ಗಿರೀಶ್, ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಯಾದವ್, ಹೊಸದುರ್ಗ ಪುರಸಭೆ ಅಧ್ಯಕ್ಷೆ ರಾಜೇಶ್ವರಿ, ಮುಖಂಡರಾದ ಗುರುಸ್ವಾಮಿ, ಕೋಡಿಹಳ್ಳಿ ತಮ್ಮಣ್ಣ ಮತ್ತಿತರರಿದ್ದರು.
ಇದೇ ವೇಳೆ ಹೊಸದುರ್ಗ ತಾಲೂಕಿನಿಂದ ಆಗಮಿಸಿದ್ದ ಬಿಜೆಪಿ ಮುಖಂಡರ ನಿಯೋಗ ಸಂಸದ ಗೋವಿಂದ ಕಾರಜೋಳ ಅವರನ್ನು ಭೇಟಿಯಾಗಿ ಕುಡಿಯುವ ನೀರಿನ ಈ ಯೋಜನೆಗೆ ಇರುವ ಅಡ್ಡಿ ನಿವಾರಿಸುವಂತೆ ಮನವಿ ಮಾಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
