ಚಿತ್ರದುರ್ಗ ನ್ಯೂಸ್.ಕಾಂ:
ಅಯೋಧ್ಯೆ ಶ್ರೀರಾಮ ಮಂದಿರದ ಭವ್ಯ ಮಂದಿರದಲ್ಲಿ ಶ್ರೀ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಅವರಿಗೆ ಆಹ್ವಾನ ಬಂದಿದೆ.
2024 ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಈ ಭವ್ಯ ಕಾರ್ಯಕ್ರಮ ನಡೆಯಲಿದ್ದು, ದೇಶದ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಆಡಳಿತ ಮಂಡಳಿಯಿಂದ ಚಿತ್ರದುರ್ಗ ಜಿಲ್ಲೆಯ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಅವರಿಗೆ ಆಹ್ವಾನ ಪತ್ರಿಕೆ ಬಂದಿದೆ.
ಭಾರತಿಯರ ಬಹು ವರ್ಷಗಳ ನಿರೀಕ್ಷೆ ಸಾಕಾರಗೊಂಡಿರುವ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಶ್ರೀಗಳ ದಿವ್ಯ ಉಪಸ್ಥಿತಿ ಅವಶ್ಯಕವಾಗಿದೆ ಎಂದು ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಚಂಪತ್ರಾಜ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಮೈಚಾಂಗ್ ಎಫೆಕ್ಟ್, ಮೈ ಚಳಿ ಬಿಟ್ಟು ಸುರಿದ ಮಳೆ
ಇದೊಂದು ಅವಿಸ್ಮರಣಿಯ ಸಮಾರಂಭವಾಗಿದ್ದು, ಜಗತ್ತಿನ ಅನೇಕ ದೇಶಗಳಿಂದ ಪ್ರಮುಖರು ಆಗಮಿಸುತ್ತಿದ್ದಾರೆ. ಆದರ್ಶ ಪುರುಷ ಶ್ರೀರಾಮ ಜನಿಸಿದ ಈ ಪವಿತ್ರ ಸ್ಥಳದಲ್ಲಿ ಮಂದಿರ ನಿರ್ಮಾಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸಹಿತ ದೇಶದ ಹಲವು ಗಣ್ಯರು ಭಾಗವಹಿಸುವರು. ಲಕ್ಷಾಂತರ ಭಾರತೀಯರು ಈ ಕಾರ್ಯಕ್ರಮವನ್ನು ಸಾಕ್ಷೀಕರಿಸುತ್ತಿದ್ದಾರೆ.
ಸಮಾರಂಭದಲ್ಲಿ ಪಾಲ್ಗೊಳ್ಳಲು ನೀಡಿರುವ ಆಹ್ವಾನದ ಕುರಿತು ಪ್ರತಿಕ್ರಿಯಿಸಿರುವ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ರಾಮ ಮಂದಿರ ನಿರ್ಮಾಣದ ಶೀಲಾನ್ಯಾಸ ಕಾರ್ಯಕ್ರಮದಲ್ಲೂ ಪಾಲ್ಗೊಂಡಿದ್ದೆವು. ಇದೀಗ ಶ್ರೀರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಅಧಿಕೃತ ಆಹ್ವಾನ ಬಂದಿದೆ ಎಂದು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
