CHITRADURGA NEWS | 16 JUNE 20225
ಚಿತ್ರದುರ್ಗ: ಇಸ್ರೇಲ್ ಹಾಗೂ ಇರಾನ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾದ್ದು, ಇರಾನ್ ದೇಶದಲ್ಲಿ ನೆಲೆಸಿರುವ ವಿದೇಶಿಗರಲ್ಲಿ ಆಂತಕ ಉಂಟುಮಾಡಿದೆ.
Also Read: ನಾಳೆಯಿಂದ 14 ದಿನ ವಿದ್ಯುತ್ ವ್ಯತ್ಯಯ | ಯಾಕೆ ಗೊತ್ತಾ, ಈ ಮಾಹಿತಿ ಓದಿ…
ಕರ್ನಾಟಕ ರಾಜ್ಯದ 9 ವಿದ್ಯಾರ್ಥಿಗಳು ಇರಾನ್ ರಾಜಧಾನಿ ತೆಹರಾನ್ ಸಮೀಪದ ಶಾಹಿದ್ ಬೇಹಸ್ತಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ.
ಸದ್ಯ ಬೆಂಗಳೂರಿನ ವಿದ್ಯಾರ್ಥಿ ನದೀಮ್ ಹುಸೇನ್ ಪೋಷಕರು, ಬೆಂಗಳೂರಿನ ಅನಿವಾಸಿ ಭಾರತೀಯ ಸಮಿತಿಗೆ ನದೀಮ್ ಹುಸೇನ್ ಅವರನ್ನು ಹಿಂದಿರುಗಿ ದೇಶಕ್ಕೆ ಕರೆತರುವಂತೆ ಮನವಿ ಮಾಡಿದ್ದಾರೆ.
ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಕರ್ನಾಟಕ ವಿದ್ಯಾರ್ಥಿಗಳನ್ನು ಇರಾನ್ನಿಂದ ಕರೆತರಲು ಕ್ರಮ ಕೈಗೊಳ್ಳುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರದ ಮುಖೇನ ಕೋರಿದ್ದಾರೆ.
Also Read: ಯೋಗ ಸಮ್ಮೇಳನದಲ್ಲಿ ಬಂಗಾರ ಗೆದ್ದ ಕೋಟೆನಾಡಿನ ಶ್ರೀಧಾ | ವಿಯೇಟ್ನಾಂನಲ್ಲಿ ನಡೆದ ಸ್ಪರ್ಧೆ
ಇದರೊಂದಿಗೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ನಿರಂತರವಾಗಿ ದೂರವಾಣಿ ಸಂಪರ್ಕದಲ್ಲಿ ಇದ್ದಾರೆ.
ಇಸ್ರೇಲ್ ಹಾಗೂ ಇರಾನ್ ನಡುವಿನ ಪರಿಸ್ಥಿತಿ ಅವಲೋಕಿಸಿ ವಿದ್ಯಾರ್ಥಿಗಳನ್ನು ಕರೆತರುವುದಾಗಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number