CHITRADURGA NEWS | 08 AUGUST 2025
ಆರೋಗ್ಯವಾಗಿರಲು, ನಮ್ಮ ಆಹಾರದಲ್ಲಿ ನೈಸರ್ಗಿಕ ಮತ್ತು ಪೌಷ್ಟಿಕಾಂಶಯುಕ್ತ ವಸ್ತುಗಳನ್ನು ಸೇರಿಸಿಕೊಳ್ಳುವುದು ಬಹಳ ಮುಖ್ಯ. ಆದರೆ ಇಂದಿನ ಒತ್ತಡದ ಜೀವನಶೈಲಿ, ಕೆಟ್ಟ ಆಹಾರ ಪದ್ಧತಿಯಿಂದಾಗಿ ನಮ್ಮ ದೇಹವು ಒಳಗಿನಿಂದ ದುರ್ಬಲಗೊಳ್ಳುತ್ತಿದೆ.
ಹೀಗಿರುವಾಗ ನಾವು ಆಯುರ್ವೇದದ ಕಡೆಗೆ ಸಾಗಿದರೆ ಅದರಿಂದ ದೇಹವನ್ನು ಆರೋಗ್ಯವಾಗಿಡುವುದಲ್ಲದೆ, ರೋಗಗಳ ವಿರುದ್ಧ ಹೋರಾಡಲು ಶಕ್ತಿಯನ್ನು ಪಡೆಯಬಹುದು. ಯಾಕೆಂದರೆ ಆಯುರ್ವೇದದಲ್ಲಿ ಅಂತಹ ಅನೇಕ ಸಾಂಪ್ರದಾಯಿಕ ಔಷಧಿಗಳಿವೆ. ಅವುಗಳಲ್ಲಿ ಎರಡು ತ್ರಿಫಲ ಮತ್ತು ಬೆಲ್ಲ. ಆದ್ದರಿಂದ ತ್ರಿಫಲದೊಂದಿಗೆ ಬೆಲ್ಲವನ್ನು ತಿನ್ನುವುದರಿಂದ ನಾವು ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಹಾಗಾದ್ರೆ ಅವು ಯಾವುವು ಎಂಬುದನ್ನು ತಿಳಿದುಕೊಳ್ಳಿ.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ
ಮಲಬದ್ಧತೆ, ಅನಿಲ, ಅಜೀರ್ಣ ಅಥವಾ ಭಾರದಂತಹ ಸಮಸ್ಯೆಗಳನ್ನು ನೀವು ಹೊಂದಿದ್ದರೆ, ತ್ರಿಫಲ ಮತ್ತು ಬೆಲ್ಲವನ್ನು ಸೇವಿಸುವುದು ತುಂಬಾ ಪ್ರಯೋಜನಕಾರಿಯಾಗಿದೆ. ತ್ರಿಫಲವು ಕರುಳನ್ನು ಸ್ವಚ್ಛಗೊಳಿಸುತ್ತದೆ ಮತ್ತು ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ. ಹಾಗೇ ಬೆಲ್ಲವು ಕರುಳಿನ ಕಾರ್ಯವನ್ನು ಸುಗಮಗೊಳಿಸುತ್ತದೆ ಮತ್ತು ಜೀರ್ಣಕಾರಿ ರಸಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಒಂದು ಚಮಚ ತ್ರಿಫಲ ಪುಡಿಯಲ್ಲಿ ಸ್ವಲ್ಪ ಬೆಲ್ಲವನ್ನು ಬೆರೆಸಿ ಪ್ರತಿದಿನ ರಾತ್ರಿ ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಸೇವಿಸಿ.
ತೂಕ ಇಳಿಸಿಕೊಳ್ಳಲು ಸಹಾಯಕ
ತ್ರಿಫಲ ಮತ್ತು ಬೆಲ್ಲ ಎರಡೂ ದೇಹಕ್ಕೆ ಒಳ್ಳೆಯದು. ಇವು ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುತ್ತವೆ. ತ್ರಿಫಲ ದೇಹದಲ್ಲಿ ಸಂಗ್ರಹವಾದ ವಿಷವನ್ನು ತೆಗೆದುಹಾಕುತ್ತದೆ. ಕೊಬ್ಬನ್ನು ಕಡಿಮೆ ಮಾಡುವ ಮೂಲಕ ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಬೆಲ್ಲ ತಿನ್ನುವುದರಿಂದ ಸಿಹಿತಿಂಡಿಗಳ ಹಂಬಲ ಕಡಿಮೆಯಾಗುತ್ತದೆ ಮತ್ತು ಇದು ಕ್ಯಾಲೊರಿಗಳನ್ನು ಹೆಚ್ಚಿಸದೆ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.
ರಕ್ತಹೀನತೆಯನ್ನು ಹೋಗಲಾಡಿಸುತ್ತದೆ
ಬೆಲ್ಲವು ಕಬ್ಬಿಣದ ನೈಸರ್ಗಿಕ ಮೂಲವಾಗಿದ್ದು, ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಾಗೇ ತ್ರಿಫಲವು ಜೀರ್ಣಕ್ರಿಯೆಯನ್ನು ಸುಧಾರಿಸುವ ಮೂಲಕ ಕಬ್ಬಿಣದ ಹೀರಿಕೊಳ್ಳುವಿಕೆಯನ್ನು ಸುಧಾರಿಸುತ್ತದೆ. ಅದಕ್ಕಾಗಿಯೇ ತ್ರಿಫಲದೊಂದಿಗೆ ಬೆಲ್ಲವನ್ನು ಸೇವಿಸುವುದು ರಕ್ತಹೀನತೆಯಿಂದ ಬಳಲುತ್ತಿರುವ ಮಹಿಳೆಯರು ಅಥವಾ ಮಕ್ಕಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.
ಕಣ್ಣುಗಳು ಮತ್ತು ಚರ್ಮಕ್ಕೆ ಪ್ರಯೋಜನಕಾರಿ
ಆಯುರ್ವೇದದಲ್ಲಿ ತ್ರಿಫಲವನ್ನು ನೇತ್ರ ಔಷಧಿ ಎಂದು ಕರೆಯಲಾಗುತ್ತದೆ. ಯಾಕೆಂದರೆ ಇದು ಕಣ್ಣಿನ ಆರೋಗ್ಯಕ್ಕೆ ಅತ್ಯುತ್ತಮವಾಗಿದೆ. ಆಮ್ಲಾದಲ್ಲಿರುವ ವಿಟಮಿನ್ ಸಿ ಮತ್ತು ಆ್ಯಂಟಿ ಆಕ್ಸಿಡೆಂಟ್ಗಳು ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತದೆ. ಹಾಗೇ ಬೆಲ್ಲ ರಕ್ತವನ್ನು ಶುದ್ಧೀಕರಿಸುತ್ತದೆ. ಇದು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ತ್ರಿಫಲ ಮತ್ತು ಬೆಲ್ಲದ ನಿಯಮಿತ ಸೇವನೆಯು ಕಣ್ಣಿನ ಆಯಾಸ, ಡಾರ್ಕ್ ಸರ್ಕಲ್ ಮತ್ತು ಚರ್ಮದ ನೆರಿಗೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ತ್ರಿಫಲದಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿವೈರಲ್ ಗುಣಲಕ್ಷಣಗಳು ದೇಹವನ್ನು ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹಾಗೇ ಬೆಲ್ಲ ಶ್ವಾಸಕೋಶವನ್ನು ಶುದ್ಧೀಕರಿಸುತ್ತದೆ ಮತ್ತು ಗಂಟಲು ನೋವನ್ನು ನಿವಾರಿಸುತ್ತದೆ. ಶೀತ ಅಥವಾ ಕೆಮ್ಮಿನ ಸಮಯದಲ್ಲಿ ತ್ರಿಫಲ-ಬೆಲ್ಲವನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅಲರ್ಜಿಯ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

