Bear Temple run: ಹನುಮಪ್ಪನ ಗುಡಿಗೆ ಬಂದ ಜಾಂಬವಂತ | ದೀಪದ ಎಣ್ಣೆ ಕುಡಿದ ಕರಡಿ

ಹನುಮಪ್ಪನ ಗುಡಿಗೆ ಬಂದ ಜಾಂಬವಂತ

CHITRADURGA NEWS | 11 AUGUST 2024

ಮೊಳಕಾಲ್ಮೂರು: ನಡುರಾತ್ರಿಯಲ್ಲಿ ಕರಡಿಯೊಂದು ಹಳ್ಳಿಯಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಬಂದು ಸುತ್ತಾಡಿ ಹೋಗಿರುವ ಘಟನೆ ನಡೆದಿದೆ.

ಮೊಳಕಾಲ್ಮೂರು ತಾಲೂಕಿನ ಬೊಮ್ಮಲಿಂಗನಹಳ್ಳಿ ಹನುಮಪ್ಪನ ಗುಡಿಗೆ ನಿನ್ನೆ ರಾತ್ರಿ ಕರಡಿ ಬಂದು ಓಡಾಡಿರುವ ದೃಶ್ಯವನ್ನು ಗ್ರಾಮಸ್ಥರು ಮೊಬೈಲ್ ಮೂಲಕ ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ: ಆಹಾ ಬನ್ನಿ ಜೋಗಿಮಟ್ಟಿ – ಆಡುಮಲ್ಲೇಶ್ವರದ ಸೊಬಗ ನೋಡಿ | ವೀಡಿಯೋ ಸ್ಟೋರಿ

ದೇವಸ್ಥಾನಕ್ಕೆ ಬಂದಿರುವ ಕರಡಿ, ಅಲ್ಲಿರುವ ದೀಪದಲ್ಲಿನ ಎಣ್ಣೆ ಕುಡಿಯುತ್ತಿರುವ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದೆ.

ಊರ ಒಳಗೆ ಅದರಲ್ಲೂ ದೇವಸ್ಥಾನಕ್ಕೆ ಕರಡಿ ಬಂದು ಹೋಗಿರುವ ಘಟನೆಯಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಹಲವು ಬಾರಿ ಇಲ್ಲಿ ಕರಡಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಿಡಿಯಲು ಮನವಿ ಮಾಡಿದರೂ ಸ್ಪಂದಿಸಿಲ್ಲ ಎಂದು ದೂರಿದ್ದಾರೆ.

ಇದನ್ನೂ ಓದಿ: ಕೋಟೆಯ ಒನಕೆ ಓಬವ್ವನ ಕಿಂಡಿಯಲ್ಲಿ ಕುಸಿದು ಬಿದ್ದ ವ್ಯಕ್ತಿ | ಸಕಾಲಕ್ಕೆ ಹೊತ್ತು ತಂದು ಆಸ್ಪತ್ರೆ ಸೇರಿಸಿ ರಕ್ಷಿಸಿದ ಪ್ರವಾಸಿ ಮಿತ್ರರು

ಅನೇಕ ಸಲ ದೇವಸ್ಥಾನಗಳಲ್ಲಿ ವೃದ್ಧರು ಮಲಗುತ್ತಾರೆ. ಹೀಗಿದ್ದಾಗ ಕರಡಿ ಬಂದು ಹೋಗುವುದರಿಂದ ಜೀವಕ್ಕೆ ಅಪಾಯ ಕಟ್ಟಿಟ್ಟಬುತ್ತಿ.

ಇತ್ತೀಚೆಗೆ ಚಳ್ಳಕೆರೆ ತಾಲೂಕಿನಲ್ಲಿ ದನ ಮೇಯಿಸುತ್ತಿದ್ದ ವೃದ್ಧನ ಮೇಲೆ ಕರಡಿ ದಾಳಿ ನಡೆಸಿ ಮುಖವನ್ನೆಲ್ಲಾ ಕಿತ್ತು ಹಾಕಿರುವ ಭೀಕರ ಘಟನೆ ನಡೆದಿದೆ.

ಇದನ್ನೂ ಓದಿ: ಮತ್ತೆ ಬಂತು ಕರಡಿ | ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಬಹಳಷ್ಟು ಅಪಾಯಕಾರಿ ಪ್ರಾಣಿಯಾಗಿರುವುದರಿಂದ ಕರಡಿ ಹಿಡಿದು ದೂರ ಸಾಗಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version