
CHITRADURGA NEWS | 21 APRIL 2025
ಚಿತ್ರದುರ್ಗ: ಏ.7 ರಂದು ಮೈಸೂರಿನಿಂದ ಆರಂಭಗೊಂಡ ಜನಾಕ್ರೋಶ ಮೂರನೆ ಹಂತದ ಯಾತ್ರೆ ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ಯಾದಗಿರಿ, ರಾಯಚೂರು, ಬಳ್ಳಾರಿ, ಹೊಸಪೇಟೆ ಮೂಲಕ ಏ.25 ರಂದು ಚಿತ್ರದುರ್ಗಕ್ಕೆ ಆಗಮಿಸಲಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
Also Read: ಬಬ್ಬೂರು ಕೃಷಿ ತರಬೇತಿ ಕೇಂದ್ರಕ್ಕೆ ರಾಜ್ಯಮಟ್ಟದ ಅವಾರ್ಡ್ | ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಆರ್.ರಜನಿಕಾಂತ್


ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಗತ್ಯ ವಸ್ತುಗಳ ಬೆಲೆ ಏರಿಸಿ ಜನರನ್ನು ವಂಚಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ದ ಜನಾಕ್ರೋಶ ಭುಗಿಲೆದ್ದಿರುವುದನ್ನು ನೋಡಿಕೊಂಡು ನಾವುಗಳು ಸುಮ್ಮನೆ ಕೂರಲು ಆಗಲ್ಲ. ನಾಡಿನ ಜನರ ರಕ್ಷಣೆ ಹೊಣೆ ನಮ್ಮ ಮೇಲಿದೆ ಎಂದು ಕಿಡಿಕಾರಿದರು.
ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್ರವರ ಹತ್ಯೆಯಾಗಿರುವುದು ಮೇಲ್ನೋಟಕ್ಕೆ ಅವರ ಪತ್ನಿಯಿಂದ ಎನ್ನುವುದು ಬಹಿರಂಗ ಗೊಂಡಿದೆಯಾದರೂ ಉನ್ನತ ಮಟ್ಟದ ತನಿಖೆ ನಡೆಸಬೇಕು. ಇಲ್ಲವಾದಲ್ಲಿ ಸತ್ಯಾಂಶ ಹೊರಬರುವುದಿಲ್ಲ.
ಪರಶುರಾಮ್ ಚಲವಾದಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಶಾಸಕ ಮತ್ತು ಅವರ ಪುತ್ರನ ಮೇಲೆ ಎಫ್.ಐ.ಆರ್. ದಾಖಲಾಗಿದ್ದರೂ ಇದುವರೆವಿಗೂ ಯಾರನ್ನು ಬಂಧಿಸಿಲ್ಲ. ಸಚಿನ್ ಪಾಂಚಾಳ, ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್, ರುದ್ರಣ್ಣ ಯಳವಣ್ಣನವರ್, ವಿನಯ್ ತಿಮ್ಮಯ್ಯ ಇವರುಗಳ ಸಾವಿನ ಬಗ್ಗೆ ಚಕಾರವೆತ್ತದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಏನೂ ನಡೆದಿಲ್ಲವೇನೋ ಎನ್ನುವಂತಿದ್ದಾರೆಂದು ಆಪಾದಿಸಿದರು.
Also Read: ಭರ್ಜರಿ ಸುರಿದ ಅಶ್ವಿನಿ ಮಳೆ | ಮೊದಲ ಮಳೆಗೆ ತುಂಬಿ ಹರಿದ ಬ್ಯಾರೇಜ್
ಜಾತಿ ಗಣತಿಯಲ್ಲಿ ಜಾತಿ ಜಾತಿಗಳ ಮಧ್ಯೆ ಒಡಕು ಮೂಡಿಸಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಕಾಂತರಾಜ್ ವರದಿಯನ್ನು ಎಲ್ಲಿ ಮುಚ್ಚಿಟ್ಟಿದೆ. ಪರಿಶಿಷ್ಟ ಜಾತಿಯಲ್ಲಿರುವುದು ನೂರ ಒಂದು ಜಾತಿ. ಆದರೆ 182 ಜಾತಿಗಳು ಹೇಗೆ ಬರಲು ಸಾಧ್ಯ?
ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸಲ್ಮಾನರನ್ನು ಜಾತಿ ಗಣತಿಯಲ್ಲಿ ಬಹುಸಂಖ್ಯಾತರನ್ನಾಗಿ ತೋರಿಸಿ ವಂಚಿಸುತ್ತಿದ್ದಾರೆ. SEP, TSP ಹಣ ಹದಿನಾಲ್ಕು ಸಾವಿರ ಕೋಟಿ ರೂ.ಗಳನ್ನು ಉಚಿತ ಗ್ಯಾರೆಂಟಿಗಳಿಗೆ ಬಳಸಿದೆ. ಇನ್ನಾದರೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಕಾಂಗ್ರೆಸ್ನಿಂದ ಹೊರ ಬರುವಂತೆ ಛಲವಾದಿ ನಾರಾಯಣಸ್ವಾಮಿ ಮನವಿ ಮಾಡಿದರು.
ದೇಶಕ್ಕೆ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಸೋಲಿಸಿದ್ದ ಕಾಂಗ್ರೆಸ್. ನ್ಯಾಷನಲ್ ಹೆರಾಲ್ಡ್ ಹಗರಣ. ಕಾಂಗ್ರೆಸ್ ಎಂದರೆ ಕರಪ್ಟ್. ದೇಶದಲ್ಲಿ ಹದಿನಾಲ್ಕರಿಂದ ಹದಿನೈದು ಲಕ್ಷ ಎಕರೆ ವಕ್ಫ್ ಭೂಮಿಯಿದೆ. ಒಂದು ಎಕರೆಯನ್ನು ಸರ್ಕಾರ ವಾಪಸ್ ಪಡೆದಿಲ್ಲ. ಕಾಂಗ್ರೆಸ್ ಗಿರವಿ ಅಂಗಡಿಯಿದ್ದಂತೆ ಅಲ್ಲಿಗೆ ಹೋದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಬಡವರಿಗೆ ಉಳಿಗಾಲವಿಲ್ಲ. ಗರೀಭಿ ಹಠಾವೊ ಅಗಿಲ್ಲ. ಇಂತಹ ಕೆಟ್ಟ ಸರ್ಕಾರದ ವಿರುದ್ದ ಜನಾಕ್ರೋಶ ಯಾತ್ರೆ ಆರಂಭಗೊಂಡಿದೆ ಎಂದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಸುದ್ದಿಗೊಷ್ಟಿಯಲ್ಲಿ ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಸಂಪತ್, ಕಾರ್ಯದರ್ಶಿ ಮೋಹನ್, ಯುವ ಮುಖಂಡ ಡಾ.ಸಿದ್ದಾರ್ಥ, ಛಲವಾದಿ ತಿಪ್ಪೇಸ್ವಾಮಿ, ವಕ್ತಾರ ನಾಗರಾಜ್ಬೇದ್ರೆ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
