
CHITRADURGA NEWS | 01 OCTOBER 2024
ಚಿತ್ರದುರ್ಗ: ಮುರುಘರಾಜೇಂದ್ರ ಬೃಹನ್ಮಠದ ಜಗದ್ಗುರು ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳ 150ನೇ ಜಯಂತ್ಯುತ್ಸವದ ಅಂಗವಾಗಿ ಶ್ರೀ ಜಯದೇವ ಶ್ರೀಗಳ ಬೆಳ್ಳಿ ಪ್ರತಿಮೆ ಲೋಕಾರ್ಪಣೆಯಾಗಲಿದೆ.
ಜಯದೇವ ಜಗದ್ಗುರುಗಳು ಮಾಡದ ಕೆಲಸಗಳು ಇಲ್ಲ. ಜಯದೇವ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ಉನ್ನತ ಹುದ್ದೆಯಲ್ಲಿದ್ದಾರೆ. ಜಯದೇವ ಜಗದ್ಗುರುಗಳ ಕಾಲವನ್ನು ಸುವರ್ಣ ಯುಗವೆಂದು ಕರೆಯುತ್ತಾರೆ.

ಜಯದೇವ ಜಗದ್ಗುರುಗಳ ಬೆಳ್ಳಿ ಪ್ರತಿಮೆ ಘಟಪ್ರಭದಲ್ಲಿ ಶಿಲ್ಪಿ ಶ್ರೀ ಪತ್ತಾರ್ ತಯಾರಿಸಿದ್ದಾರೆ. ಅ.4 ರಂದು ಬೆಳಿಗ್ಗೆ ದಾವಣಗೆರೆಯ ಅಥಣಿ ಶ್ರೀ ಶಿವಯೋಗಿಗಳವರ ಗದ್ದುಗೆಯಲ್ಲಿ ರುದ್ರಾಭಿಷೇಕ, ಶ್ರೀ ಜಯದೇವ ಜಗದ್ಗುರುಗಳವರ ಗದ್ದುಗೆಯಲ್ಲಿ ಪೂಜೆ ನಡೆಯಲಿದೆ.
ಚಿತ್ರದುರ್ಗ ಮುರುಘಾಮಠದಲ್ಲಿ ಅ.5 ರಂದು ಬೆಳಗ್ಗೆ ಪೂಜೆ ಸಲ್ಲಿಸಲಾಗುತ್ತದೆ. ಸಂಜೆ 4 ಗಂಟೆಗೆ ಜಯದೇವ ಕಪ್ ಪಂದ್ಯಾವಳಿ ಅಂಗವಾಗಿ ಅಂಬೇಡ್ಕರ್ ವೃತ್ತದಲ್ಲಿ ಶ್ರೀ ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ ಪ್ರಾರಂಭವಾಗಲಿದೆ. ಸಂಸದ ಗೋವಿಂದ ಎಂ.ಕಾಳಜೋಳ ಅವರು ಪಥ ಸಂಚಲನ ಉದ್ಘಾಟಿಸುವರು.
ಹೊಳಲ್ಕೆರೆ ರಸ್ತೆಯ ಶ್ರೀ ನೀಲಕಂಠೇಶ್ವರ ದೇವಾಲಯದಲ್ಲಿ ಮಹಾಮಂಗಳಾರತಿ ನಡೆಯಲಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
