
CHITRADURGA NEWS | 03 OCTOBER 2025
ಚಿತ್ರದುರ್ಗ: ಶರಣಸಂಸ್ಕೃತಿ ಉತ್ಸವ 2025ರ ಅಂಗವಾಗಿ ಶ್ರೀ ಮುರುಘಾಮಠದ ಆವರಣದಲ್ಲಿ ಉತ್ಸವದ ಪ್ರಮುಖ ಆಕರ್ಷಣೆಯಾದ ಶ್ರೀ ಜಯದೇವ ಜಂಗಿಕುಸ್ತಿಯನ್ನು ಏರ್ಪಡಿಸಲಾಗಿತ್ತು.
ಇದನ್ನೂ ಓದಿ: ಗಾಂಧೀಜಿ ಜಯಂತಿ | ಸ್ವಚ್ಛತಾ ಶ್ರಮದಾನ | ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ಈ ಪಂದ್ಯಾವಳಿಗೆ ನೂರಾರು ಕುಸ್ತಿಪಟುಗಳು ಮಧ್ಯಪ್ರದೇಶ, ಉತ್ತರಪ್ರದೇಶ, ಮಹಾರಾಷ್ಟ್ರ, ಕೊಲ್ಲಾಪುರ, ಆಂಧ್ರಪ್ರದೇಶ, ಮುಂತಾದ ರಾಜ್ಯಗಳಿಂದ ಭಾಗವಹಿಸಲು ಅಗಮಿಸಿದ್ದರು.
ರಾಜ್ಯ, ರಾಷ್ಟ ಹಾಗೂ ಅಂತರಾಷ್ಟೀಯ ಮಟ್ಟದಲ್ಲಿ ಹೆಸರು ಮಾಡಿ, ಅನೇಕ ಪ್ರಶಸ್ತಿಗಳನ್ನು ಪಡೆದ ಕುಸ್ತಿಪಟುಗಳು ಭಾಗವಹಿಸಿದ್ದು ವಿಶೇಷವಾಗಿತ್ತು.
ಪಂದ್ಯಾವಳಿಯನ್ನು ಉದ್ಘಾಟಿಸಿದ ಶ್ರೀ ಮುರುಘರಾಜೇಂದ್ರ ಬೃಹನ್ಮಠ ಹಾಗು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದರವರು ಮಾತನಾಡಿ, ಕುಸ್ತಿ ಗ್ರಾಮೀಣ ಕ್ರೀಡೆಗಳಲ್ಲಿ ಅತ್ಯಂತ ಹೆಸರು ವಾಸಿಯಾದ ಕ್ರೀಡೆಯಾಗಿದೆ.
ಇದನ್ನೂ ಓದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಈ ಕುಸ್ತಿಯ ಸ್ಪರ್ಧೆಯಲ್ಲಿ ಪುರುಷ ಕುಸ್ತಿ ಪಟುಗಳಲ್ಲದೇ, ಮಹಿಳಾ ಕುಸ್ತಿಪಟುಗಳು ಭಾಗವಹಿಸಿರುವುದು ವಿಶೇಷ. ಈ ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳು ಸ್ಪರ್ಧಾ ಮನೋಭಾವನೆಯೊಂದಿಗೆ ಭಾಗವಹಿಸಬೇಕು. ಎಲ್ಲರಿಗೂ ಶುಭವಾಗಲಿ ಎಂದು ನುಡಿದರು.
ಶ್ರೀ ಛಂಲವಾದಿ ಗುರುಪೀಠದ ಶ್ರೀ ಬಸವನಾಗಿದೇವಸ್ವಾಮಿಗಳು ಮಾತನಾಡಿ, ಈ ಜಯದೇವ ಜಂಗಿಕುಸ್ತಿಗೆ ಐವತ್ತು ವರ್ಷಗಳ ಇತಿಹಾಸವಿದೆ. ದೇಶದ ಹಲವು ರಾಜ್ಯಗಳಿಂದ ಅಗಮಿಸಿ ಈ ಕುಸ್ತಿ ಪಂದ್ಯಾವಳಿಯಲ್ಲಿ ಸ್ಪರ್ಧಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ಶ್ರೀ ಮಠವು ಕುಸ್ತಿ ಪಂದ್ಯಾವಳಿಗೆ ಹಿಂದಿನಿಂದಲೂ ಪ್ರೋತ್ಸಾಹ ನೀಡುತ್ತ ಬಂದಿದೆ ಎಂದು ನುಡಿದರು.
ಆಡಳಿತಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿಗಳು ಮಾತನಾಡಿ, ಶ್ರೀಮಠದ ಜಯದೇವ ಜಂಗಿಕುಸ್ತಿಗೆ ಈ ನಾಡಿನ ಹಾಗೂ ದೇಶದಲ್ಲಿಯೇ ಪ್ರಖ್ಯಾತಿಯನ್ನು ಪಡೆದಂತಹದು. ಈ ಕುಸ್ತಿಯಲ್ಲಿ ಮಕ್ಕಳು, ವಯಸ್ಕರು, ಮಹಿಳೆಯರು ಭಾಗವಹಿಸಿರುವುದು ನೋಡಿದರೆ ಜಯದೇವ ಜಂಗಿಕುಸ್ತಿಯ ಮಹತ್ವವನ್ನು ಕಾಣಬಹುದಾಗಿದೆ ಎಂದರು.
ಜಂಗೀಕುಸ್ತಿಯ ತೀರ್ಪುಗಾರರಾಗಿ ಪೈಲ್ವಾನ್ತಿಪ್ಪೇಸ್ವಾಮಿ, ರಫೀಜ್ ಹೋಳಿ, ಮರಡಿ, ಅಮೃತಣ್ಣ ಮೈಸೂರು, ಭರತ್, ಮೂರ್ತಿ ಆಗಮಿಸಿದ್ದರು.
ಇದನ್ನೂ ಓದಿ: ಚಿತ್ರದುರ್ಗ ಧೈರ್ಯದ ಸಂಕೇತ ಒನಕೆ ಓಬವ್ವ | ಮನೋವೈದ್ಯೆ ಡಾ.ಸೌಜನ್ಯ ವಸಿಷ್ಠ
ಕಾರ್ಯಕ್ರಮದಲ್ಲಿ ಶ್ರೀಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಎಸ್.ಎನ್.ಚಂದ್ರಶೇಖರ್, ಸುರೇಶ್ಬಾಬು, ಗಂಜಿಗಟ್ಟಿ ಶಿವಣ್ಣ, ಫಾತ್ಯರಾಜನ್, ವೈದ್ಯನಾಥ್ ಉಪಸ್ಥಿತರಿದ್ದರು.
ಈ ಜಂಗೀ ಕುಸ್ತಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನರು ಹಳ್ಳಿ ಹಳ್ಳಿಗಳಿಂದ ಅಗಮಿಸಿ, ತಮ್ಮ ನೆಚ್ಚಿನ ಪೈಲ್ವಾನ್ರುಗಳನ್ನು ಹುರಿದುಂಬಿಸಿ, ಕುಸ್ತಿಯ ಪಟುಗಳನ್ನು ನೋಡಿ ಕೇಕೆ ಹಾಕುತ್ತ ಕುಣಿದು ಕುಪ್ಪಳಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
