CHITRADURGA NEWS | 01 MAY 2024
ಹೊಸದುರ್ಗ: ತಾಲ್ಲೂಕಿನ ಬೆಲಗೂರು ಗ್ರಾಮದ ವಸಿಷ್ಠಾಶ್ರಮದಲ್ಲಿ ಮಂಗಳವಾರ ಅವಧೂತ ಸದ್ಗುರು ಶ್ರೀ ಬಿಂಧುಮಾಧವ ಶರ್ಮ ಸ್ವಾಮಿಜಿ ಅವರ 78ನೇ ವರ್ಷದ ಜಯಂತಿ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.
ಇದನ್ನೂ ಓದಿ : ಫಸಲ್ ವಿಮಾ ಯೋಜನೆ | ಅಧಿಕಾರಿಗಳ ಯಡವಟ್ಟು, ರೊಚಿಗೆದ್ದ ರೈತರು

ಅವಧೂತ ಬಿಂಧುಮಾಧವ ಶ್ರೀಗಳ ಅಧಿಷ್ಠಾನ ಮಂದಿರದಲ್ಲಿರುವ ಗುರುಗಳ ಸ್ಥಿರ ಹಾಗೂ ಚರ ಪಾದುಕೆಗಳಿಗೆ ರುದ್ರಾಭಿಷೇಕ, ಅಲಂಕಾರ ಪೂಜೆ, ಮಹಾ ನೈವೆದ್ಯ, ಅಷ್ಠೋತ್ತರ, ಮಹಾ ಮಂಗಳಾರತಿ ಕಾರ್ಯಕ್ರಮಗಳು ನೆರವೇರಿದವು.
ಆಶ್ರಮದ ಮುಖ್ಯ ದೇವತೆ ಅಭಯಾಂಜನೇಯ ಸ್ವಾಮಿ ದೇವಾಲಯ ಹಾಗೂ ಅಭಯ ಗಣಪತಿ ಮಂದಿರದಲ್ಲಿಯೂ ವಿಶೇಷ ಪೂಜಾ ಕಾರ್ಯಗಳು ನಡೆಯಿತು. ಭಕ್ತರು ಸರದಿಯ ಸಾಲಿನಲ್ಲಿ ನಿಂತು ಅಧಿಷ್ಠಾನ ಮಂದಿರದಲ್ಲಿ ಗುರುಗಳ ದರ್ಶನ ಪಡೆದರು.
ಇದನ್ನೂ ಓದಿ : ಚಿತ್ರದುರ್ಗ ಜಿಲ್ಲೆಯ ಗಡಿಭಾಗದಲ್ಲಿ ಮದ್ಯ ಮಾರಾಟ ನಿಷೇಧ
ಈ ವೇಳೆ ಮಳೆಗಾಗಿ ಪ್ರಾರ್ಥಿಸಿ ಮೇದಾ ದಕ್ಷಿಣಮೂರ್ತಿ ಹೋಮ ಹಾಗೂ ಅವಹಂತೀ ಹೋಮ, ಮಂತ್ರ ಪಠಣೆ, ಪುರ್ಣಾಹುತಿ ವಿಶೇಷ ಪೂಜೆ ನಡೆಯಿತು.
ಅಧಿಷ್ಠಾನ ಮಂದಿರವನ್ನು ವಿಶೇಷವಾಗಿ ಬಂಗಾರ ಬಣ್ಣದ ಅಲಂಕಾರಿಕ ಪರಿಕರಗಳು ಹಾಗೂ ಹೂವುಗಳಿಂದ ಅಲಂಕರಿಸಲಾಗಿತ್ತು. ಭಕ್ತರಿಗೆ ನಿರಂತರ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.
ಬಿಂದುಮಾಧವ ಶ್ರೀಗಳ ಉತ್ಸವಮೂರ್ತಿಯ ಪಲ್ಲಕ್ಕಿ ಉತ್ಸವಕ್ಕೆ ಆಶ್ರಮದ ಧರ್ಮಾಧಿಕಾರಿ ಗುರುದತ್ತ ಶರ್ಮ ಚಾಲನೆ ನೀಡಿದರು.
ಇದನ್ನೂ ಓದಿ : ಕೋಣ ಗುದ್ದಿ ವ್ಯಕ್ತಿ ಸಾವು | ಜಾತ್ರೆಯಲ್ಲಿ ಕೋಣ ಬಲಿ ಕೊಡುವಾಗ ನಡೆದ ಘಟನೆ
ಈ ಸಂದರ್ಭದಲ್ಲಿ ಸದ್ಗುರು ಆಶ್ರಮದ ಶ್ರೀ ಕಾಂತಾನಂದ ಸರಸ್ವತಿ ಸ್ವಾಮಿಜಿ, ಸಿಂದಗಿ ಬೀಮಾಶಂಕರ ಮಠದ ಶ್ರೀ ದತ್ತಪ್ಪಯ್ಯ ಸ್ವಾಮಿಜಿ, ಶ್ರೀ ಬ್ರಹ್ಮಾನಂದ ಸ್ವಾಮೀಜಿ, ಶಾಸಕ ಬಿ.ಜಿ.ಗೋವಿಂದಪ್ಪ ಸೇರಿದಂತೆ ಭಕ್ತರು ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
