By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಜಯಂತಿಗಳು ಅರ್ಥಪೂರ್ಣವಾಗಿರಬೇಕು | ಡಾ.ಬಸವಕುಮಾರ ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಜಯಂತಿಗಳು ಅರ್ಥಪೂರ್ಣವಾಗಿರಬೇಕು | ಡಾ.ಬಸವಕುಮಾರ ಸ್ವಾಮೀಜಿ

ಮುಖ್ಯ ಸುದ್ದಿ

ಜಯಂತಿಗಳು ಅರ್ಥಪೂರ್ಣವಾಗಿರಬೇಕು | ಡಾ.ಬಸವಕುಮಾರ ಸ್ವಾಮೀಜಿ

News Desk Chitradurga News
Last updated: 29 April 2025 07:27
News Desk Chitradurga News
2 months ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 28 APRIL 2025

ಚಿತ್ರದುರ್ಗ: ಜಯಂತಿಗಳು ಅರ್ಥಪೂರ್ಣವಾಗಿರಬೇಕು. ಮಹಾತ್ಮರ ಆದರ್ಶಗಳು ಅನುಕರಿಣೀಯವಾಗಿರಬೇಕು ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಮತ್ತು ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮಿಜಿ ಹೇಳಿದರು.

Also Read: ಅಸುರಕ್ಷಿತ ಲೈಂಗಿಕತೆಯು ಮಹಿಳೆಯರಲ್ಲಿ ಸಿಫಿಲಿಸ್‍ಗೆ ಕಾರಣವಾಗಬಹುದು ಎಚ್ಚರ

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ವಿಶ್ವಗುರು ಶ್ರೀ ಬಸವೇಶ್ವರ ಜಯಂತಿಯನ್ನು ಮೂರು ದಿನಗಳ ಕಾಲ ವೈಭವದಿಂದ ಆಚರಿಸಲಾಗುತ್ತಿದ್ದು, ಇಂದು ನಡೆದ ವಿವಿಧ ಸ್ಫರ್ಧೆಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಕ್ಕಳಿಗೆ ಸಿನಿಮಾ ನಟ ನಟಿಯರೇ ಆದರ್ಶವಾಗಬಾರದು. ಸತ್ಯ, ತ್ಯಾಗ, ಕರುಣೆ, ಅಹಿಂಸೆಗಳನ್ನು ಬದುಕಿನ ಉಸಿರಾಗಿಸಿಕೊಂಡ ಶಿವಶರಣರ ನಡೆ ಆದರ್ಶಪ್ರಾಯವಾಗಬೇಕು. ಅಂತಹ ಮಹಾ ಶರಣರ, ಮಹಾ ಪುರುಷರ ಆದರ್ಶಗಳನ್ನು ನೆನಪಿಸುವ ನಿಟ್ಟಿನಲ್ಲಿ ಅವರನ್ನು ಆದರ್ಶವಾಗಿಟ್ಟುಕೊಳ್ಳುವುದಕ್ಕೆ ಶ್ರೀ ಮಠದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ನುಡಿದರು.

ಶ್ರೀ ಬಸವಲಿಂಗದೇವರು ಮಾತನಾಡಿ, ಬಸವ ಜಯಂತಿ ಅಂಗವಾಗಿ ಶ್ರೀ ಮಠದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದು, ಶ್ರೀ ಬಸವಣ್ಣನವರ ಜಯಂತಿಗೆ ಒಂದು ಬಣ್ಣ ಬಂದಿದೆ. ಇಂದು ವಿಶ್ವದಾದ್ಯಂತ ಬಸವ ಜಯಂತಿಯನ್ನು ಆಚರಿಸಲಾಗುತ್ತದೆ. ಕರ್ನಾಟಕ ಸರ್ಕಾರವು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ.

Also Read: ವಿಟಮಿನ್ ಇ ಕ್ಯಾಪ್ಸುಲ್‍ಗಳ ಜೊತೆ ಇದನ್ನು ಬೆರೆಸಿ ರಾತ್ರಿ ಮಲಗುವ ಮೊದಲು ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೊಳೆಯುತ್ತದೆ

ಪ್ರಥಮ ಬಸವ ಜಯಂತಿಯನ್ನು ಆಚರಿಸಿದ ಕೀರ್ತಿ ಶ್ರೀಮುರುಘಾಮಠದ ಶಾಖಾ ಮಠವಾದ ದಾವಣಗೆರೆಯ ಶ್ರೀ ವಿರಕ್ತ ಮಠಕ್ಕೆ ಸಲ್ಲುವಂತದ್ದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಚನ ಕಂಠಪಾಠ ಸ್ಪರ್ಧೆಯಲ್ಲಿ ಸುಮಾರು 85, 12 ನೇಯ ಶತಮಾನದ ಬಸವಾದಿ ಶಿವಶರಣರ ವೇಷಭೂಷಣ ಸ್ಪರ್ಧೆಯಲ್ಲಿ ಸುಮಾರು 42, ರಂಗೋಲಿ ಸ್ಪರ್ಧೆಯಲ್ಲಿ ಸುಮಾರು 45 ಸ್ಪರ್ಧಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಉಮೇಶ್ ಪತ್ತಾರ್ ಪ್ರಾರ್ಥಿಸಿದರು. ಸಿದ್ದೇಶ್ ನಿರೂಪಿಸಿದರು. ಜ್ಞಾನಮೂರ್ತಿ ಸ್ವಾಗತಿಸಿ ವಂದಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Basava JayantiChitradurgaChitradurga newsChitradurga UpdatesCompetitionDr. Basavakumar SwamijiKannada Latest NewsKannada NewsMuruga Mathಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಬಸವಕುಮಾರ ಸ್ವಾಮಿಜಿಬಸವ ಜಯಂತಿಮುರುಘಾ ಮಠಸ್ಪರ್ಧೆ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಏಪ್ರಿಲ್ 29 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ಆರೋಗ್ಯದಲ್ಲಿ ಜಾಗೃತಿ ವಹಿಸಿ
Next Article ಮನಮೋಹಕ ಭರತನಾಟ್ಯ ಪ್ರದರ್ಶಿಸಿದ ಚಂದನ, ಚಿನ್ಮಯಿ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up