MINSE LORRY PROTEST; ಜಾನ್, ವೇದಾಂತ ಮೈನ್ಸ್ ವಿರುದ್ಧ ಪ್ರತಿಭಟನೆ 

ಜಾನ್, ವೇದಾಂತ ಮೈನ್ಸ್ ವಿರುದ್ಧ ಪ್ರತಿಭಟನೆ 

CHITRADURGA NEWS | 23 JULY 2024

ಚಿತ್ರದುರ್ಗ: ಸ್ಥಳೀಯರಿಗೆ ಉದ್ಯೋಗ ನೀಡದೆ ವಂಚಿಸುತ್ತಿರುವ ಜಾನ್ ಮೈನ್ಸ್ ಹಾಗೂ ವೇದಾಂತ ಮೈನ್ಸ್ ವಿರುದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ 52 ಕುಟುಂಬಗಳು ಲಾರಿಗಳನ್ನು ತಡೆದು ಪ್ರತಿಭಟನೆ(MINSE LORRY PROTEST) ನಡೆಸಿದರು.

ಇದನ್ನೂ ಓದಿ: AMBUJAKSHI YOGA AWARD; ಭಜನಾ ಗಾಯಕಿ ಅಂಬುಜಾಕ್ಷಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ

ಸಿರಿಗೆರೆಯ ಡಿ.ಮದಕರಿಪುರ ಸಮೀಪ ಕಳೆದ 4 ದಿನಗಳಿಂದ ಚಳಿ ಗಾಳಿ ಮಳೆಯನ್ನು ಲೆಕ್ಕಿಸದೆ ಕೆಸರಿನಲ್ಲಿಯೇ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.

ಡಿ.ಮದಕರಿಪುರ, ತಣಿಗೆಹಳ್ಳಿ, ಮುತ್ತುಗದೂರು, ಕಾಗಳಗೆರೆ, ಸಾಸಲು ಗ್ರಾಮಗಳ ಎಸ್ಸಿ, ಎಸ್ಟಿ ಜನಾಂಗದ 52 ಲಾರಿಗಳನ್ನು ಅದಿರು ಸಾಗಾಣಿಕೆಗೆ ಬಳಸಿಕೊಂಡು ಈಗ ಏಕಾಏಕಿ ಹೊರಗಿಟ್ಟಿರುವುದರಿಂದ ಪ್ರತಿ ತಿಂಗಳು ಇ.ಎಂ.ಐ. ಮೂವತ್ತು ಸಾವಿರ ರೂ.ಗಳನ್ನು ಕಟ್ಟಿ ಕುಟುಂಬ ಜೀವನ ಸಾಗಿಸುವುದು ಹೇಗೆ?

ಪ್ರತಿಭಟನಾನಿರತರ ಮೇಲೆ ಮೈನ್ಸ್‍ನವರು ಹಲ್ಲೆಗೆ ಯತ್ನಿಸುತ್ತಿದ್ದಾರೆಂದು ಶೋಷಣೆಗೊಳಗಾಗಿ ಧರಣಿಗೆ ಮುಂದಾಗಿರುವವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: GPS ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ | ಟ್ಯಾಕ್ಸಿ, ಆಟೋ ಮಾಲೀಕರ ಖಂಡನೆ

ಜಿಲ್ಲಾಧಿಕಾರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯವರು ಮಧ್ಯ ಪ್ರವೇಶಿಸಿ 52 ಕುಟುಂಬಗಳಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಮೈನ್ಸ್‍ನವರಿಗೆ ಅದಿರು ತುಂಬಲು ಬಿಡುವುದಿಲ್ಲ.

ಸುತ್ತಮುತ್ತಲಿನ ಬೆಳೆಗಳು ಗಣಿ ಧೂಳಿನಿಂದ ಹಾನಿಯಾಗಿದೆ. ಸ್ಥಳೀಯರಿಗೆ ಶೇ.80 ರಷ್ಟು ಉದ್ಯೋಗ ನೀಡಬೇಕೆಂಬ ನಿಯಮವಿದ್ದರೂ ಜಾನ್ ಮೈನ್ಸ್ ಮತ್ತು ವೇದಾಂತ ಮೈನ್ಸ್‍ನವರು ಹೊರಗಿನಿಂದ ಕೆಲಸಕ್ಕೆ ಜನರನ್ನು ಕರೆಸಿಕೊಂಡು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರೆನ್ನುವ ಕಾರಣಕ್ಕಾಗಿ ನಮ್ಮನ್ನು ಹೊರಗಿಟ್ಟಿದ್ದಾರೆ.

ನ್ಯಾಯ ಸಿಗುವತನಕ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವುದಿಲ್ಲವೆಂದು ಧರಣಿನಿರತರು ಪಟ್ಟು ಹಿಡಿದಿದ್ದಾರೆ. ಅದಿರು ಸಾಗಾಣಿಕೆಯನ್ನೇ ನಂಬಿಕೊಂಡು ಸಾಲ ಪಡೆದು ಲಾರಿಗಳನ್ನು ತಂದಿರುವ ಗ್ರಾಮದವರು ಕುಟುಂಬ ನಿರ್ವಹಿಸಲು ಆಗದೆ ವಿಷ ಕುಡಿಯುವ ಹಂತಕ್ಕೆ ತಲುಪಿದ್ದೇವೆ. ಗಣಿ ಭಾದಿತ ಪ್ರದೇಶಗಳ ಜನತೆಗೆ ಉದ್ಯೋಗ ಕಲ್ಪಿಸಬೇಕೆಂಬ ಸರ್ಕಾರದ ನಿಯಮವಿದ್ದರೂ ಮೈನ್ಸ್‍ನವರು ಕ್ಯಾರೆ ಎನ್ನುತ್ತಿಲ್ಲ.

ಇದನ್ನೂ ಓದಿ: EXAM FEES; ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ LAW ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೇಲ್ವರ್ಗದ ಕಪಿ ಮುಷ್ಟಿಯಲ್ಲಿರುವ ಜಾನ್ ಮೈನ್ಸ್ ಮತ್ತು ವೇದಾಂತ ಮೈನ್ಸ್‍ನವರು 3 ಲಕ್ಷದಿಂದ 18 ಲಕ್ಷ ಟನ್‍ವರೆಗೆ ಅದಿರು ಸಾಗಿಸುತ್ತಿದ್ದಾರೆಂದು ಪ್ರತಿಭಟನಾನಿರತರು ತಮಗಾಗುತ್ತಿರುವ ಅನ್ಯಾಯದ ವಿರುದ್ದ ಸಿಡಿದೆದ್ದಿದ್ದಾರೆ.

ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ, ಜಿಲ್ಲಾ ಬಂಜಾರ ಲಂಬಾಣಿ ಸಮಾಜದ ಅಧ್ಯಕ್ಷ ಎಂ.ಸತೀಶ್‍ಕುಮಾರ್, ರಾಜಣ್ಣ ಹಿರೇಕಂದವಾಡಿ, ತಿಪ್ಪೇಶ್ ಕಡೂರ್, ಸುಂದರಮೂರ್ತಿ ಹೊಳಲ್ಕೆರೆ, ಉಮಾಪತಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ತಿಪ್ಪೇಸ್ವಾಮಿ ಸೇರಿದಂತೆ ಗ್ರಾಮದವರು ಪಾಲ್ಗೊಂಡಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version