By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಪತ್ರಕರ್ತ ಚನ್ನಬಸವಯ್ಯ ನಿಧನ | ವೈದ್ಯಕೀಯ ಕಾಲೇಜಿಗೆ ದೇಹದಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಪತ್ರಕರ್ತ ಚನ್ನಬಸವಯ್ಯ ನಿಧನ | ವೈದ್ಯಕೀಯ ಕಾಲೇಜಿಗೆ ದೇಹದಾನ

ನಿಧನವಾರ್ತೆ

ಪತ್ರಕರ್ತ ಚನ್ನಬಸವಯ್ಯ ನಿಧನ | ವೈದ್ಯಕೀಯ ಕಾಲೇಜಿಗೆ ದೇಹದಾನ

News Desk Chitradurga News
Last updated: 29 May 2025 17:13
News Desk Chitradurga News
2 weeks ago
Share
ಪತ್ರಕರ್ತ ಚನ್ನಬಸವಯ್ಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 29 MAY 2025

ಚಿತ್ರದುರ್ಗ: ಹೊಳಲ್ಕೆರೆ ರಸ್ತೆಯ ನೆಹರು ನಗರ ನಿವಾಸಿ, ಪತ್ರಕರ್ತ ಚನ್ನಬಸವಯ್ಯ(46) ಗುರುವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ಚನ್ನಬಸವಯ್ಯ ಅವರ ಇಚ್ಚೆಯಂತೆ, ಪಾರ್ಥೀವ ಶರೀರವನ್ನು ನಗರದ ಬಸವೇಶ್ವರ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ದಾನವಾಗಿ ನೀಡಲಾಯಿತು.

ಪತ್ರಿಕೋದ್ಯಮ ಹಾಗೂ ಕಾನೂನು ಪದವಿ ಪಡೆದಿದ್ದ ಚನ್ನಬಸಯ್ಯ ಆಕಾಶವಾಣಿ, ಡಿಡಿ ವಾಹಿನಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಕಾರಣ ಮೇ.28 ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ನಿಧನ ಹೊಂದಿದರು.

ಮೃತರು ತಾಯಿ, ಸಹೋಧರ ಸೇರಿದಂತೆ ಅನೇಕ ಬಂಧುಗಳನ್ನು ಅಗಲಿದ್ದಾರೆ.

ಪತ್ರಕರ್ತರ ಸಂಘದಿಂದ ಸಂತಾಪ:

ನಗರದ ಪತ್ರಿಕಾ ಭವನದಲ್ಲಿ ಮೃತ ಚನ್ನಬಸವಯ್ಯ ಅವರ ಅಗಲಿಕೆ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಂತಾಪ ಸಭೆ ನಡೆಯಿತು.

Also Read: ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

ಈ ವೇಳೆ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್‌ ಮಾತನಾಡಿ, ಚನ್ನಬಸಯ್ಯ ಅವರು ಸುದ್ದಿಗಳ ವಿಚಾರದಲ್ಲಿ ಎಂದೂ ಮೈ ಮರೆಯುತ್ತಿರಲಿಲ್ಲ ಎಂದು ಸ್ಮರಿಸಿದರು.

ತಮ್ಮ ವೃತ್ತಿ ಬದುಕಿನ ಜೊತೆಗೆ ಬದುಕಿನಲ್ಲೂ ಸಾರ್ಥಕತೆ ಮೂಡುವ ಕೆಲಸ ಮಾಡಿರುವುದು ಅವರ ಸಾವಿನಲ್ಲಿ ಗೊತ್ತಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ದೇಹದಾನ ಮಾಡಿರುವುದು ಶ್ಲಾಘನೀಯ ಎಂದು ಹೇಳಿದರು.

ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್‌ ಗೌಡಗೆರೆ ಮಾತನಾಡಿ, ಪತ್ರಕರ್ತರ ಸಂಘದ ಸದ್ಯರಾಗಿದ್ದ ಚನ್ನಬಸವಯ್ಯ ಅವರ ಅಗಲಿಕೆ ಎಲ್ಲರಿಗೂ ದುಃಖ ತಂದಿದೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು.

ಹಿರಿಯ ಪತ್ರಕರ್ತ ಶ.ಮಂಜುನಾಥ್‌ ಮಾತನಾಡಿ, ಕಾನೂನು ಪದವಿ ಪಡೆದು, ಪತ್ರಕೋದ್ಯಮಕ್ಕೂ ಬಂದ ಚನ್ನಬಸವಯ್ಯ ಆರಂಭದಲ್ಲಿ ಬಹಳ ನಿಷ್ಠುರವಾಗಿ ನಡೆದುಕೊಳ್ಳುತ್ತಿದ್ದರು. ಆದರೆ, ಕಳೆದ ಆರು ತಿಂಗಳಿಂದ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿ ಮಾಗಿದಂತೆ ಕಂಡು ಬರುತ್ತಿದ್ದರು ಎಂದು ಸ್ಮರಿಸಿದರು.

Also Read: ರೈಲ್ವೆ ಇಲಾಖೆ | ಮಾಜಿ ಸೈನಿಕರಿಗೆ ಉದ್ಯೋಗಾವಕಾಶ

ಪತ್ರಕರ್ತರಾದ ಎಂ.ಎನ್‌.ಅಹೋಬಲಪತಿ, ತಿಪ್ಪೇಸ್ವಾಮಿ ನಾಕೀಕೆರೆ, ರಾಜಶೇಖರ್‌, ಮಾಲತೇಶ್‌ ಅರಸ್‌ ಮಾತನಾಡಿದರು.

ಚನ್ನಬಸವಯ್ಯ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಹಿರಿಯ ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖ, ಹರಿಯಬ್ಬೆ ಹೆಂಜಾರಪ್ಪ, ಕುಮಾರಸ್ವಾಮಿ, ವಿನಾಯಕ ತೊಡರನಾಳು, ಎಂ.ಜೆ.ತಿಪ್ಪೇಸ್ವಾಮಿ, ಬ್ರಹ್ಮಗಿರಿ ಶ್ರೀನಿವಾಸ್, ಪ್ರಹ್ಲಾದ್, ಶ್ರೀನಿವಾಸ್, ಗೌನಹಳ್ಳಿ ಗೋವಿಂದಪ್ಪ, ಚಳ್ಳಕೆರೆ ವೀರೇಶ್, ಸುರೇಶ್ ಪಟ್ಟಣ್, ನಾಗೇಶ್, ರಾಘವೇಂದ್ರ ಮತ್ತಿತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Basaveshwara Medical CollegeChitradurgaChitradurga newsChitradurga UpdatesdeathJournalist ChannabasavaiahKannada Latest NewsKannada Newsಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ದೇಹದಾನನಿಧನಪತ್ರಕರ್ತ ಚನ್ನಬಸವಯ್ಯಬಸವೇಶ್ವರ ವೈದ್ಯಕೀಯ ಕಾಲೇಜು
Share This Article
Facebook Email Print
Previous Article APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
Next Article ದುಬೈನಲ್ಲಿ ಸುಜ್ಞಾನ-ಸಂಗಮ ಕಾರ್ಯಕ್ರಮ | ಭಕ್ತರೊಂದಿಗೆ ತೆರಳಿದ ಶಾಂತವೀರ ಶ್ರೀಗಳು
Leave a Comment

Leave a Reply Cancel reply

Your email address will not be published. Required fields are marked *

ದೇಹದಲ್ಲಿ ಫೈಬರ್ ಅಂಶ ಹೆಚ್ಚಿಸಲು ಊಟ-ಉಪಾಹಾರದಲ್ಲಿ ಈ ಆಹಾರಗಳನ್ನು ಸೇರಿಸಿ
Life Style
today bhavishya
Astrology: ದಿನ ಭವಿಷ್ಯ | 13 ಜೂನ್ 2025 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
Dina Bhavishya
Shivananda patil meating
ಹೊಸದುರ್ಗದಲ್ಲಿ ಗಾರ್ಮೆಂಟ್ಸ್‌ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್‌ | ಜವಳಿ ಪಾರ್ಕ್‌ ಸ್ಥಳ ನಿಗಧಿ
ಹೊಸದುರ್ಗ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ 
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up