
CHITRADURGA NEWS | 29 MAY 2025
ಚಿತ್ರದುರ್ಗ: ಹೊಳಲ್ಕೆರೆ ರಸ್ತೆಯ ನೆಹರು ನಗರ ನಿವಾಸಿ, ಪತ್ರಕರ್ತ ಚನ್ನಬಸವಯ್ಯ(46) ಗುರುವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?


ಚನ್ನಬಸವಯ್ಯ ಅವರ ಇಚ್ಚೆಯಂತೆ, ಪಾರ್ಥೀವ ಶರೀರವನ್ನು ನಗರದ ಬಸವೇಶ್ವರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾನವಾಗಿ ನೀಡಲಾಯಿತು.
ಪತ್ರಿಕೋದ್ಯಮ ಹಾಗೂ ಕಾನೂನು ಪದವಿ ಪಡೆದಿದ್ದ ಚನ್ನಬಸಯ್ಯ ಆಕಾಶವಾಣಿ, ಡಿಡಿ ವಾಹಿನಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಕಾರಣ ಮೇ.28 ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ನಿಧನ ಹೊಂದಿದರು.
ಮೃತರು ತಾಯಿ, ಸಹೋಧರ ಸೇರಿದಂತೆ ಅನೇಕ ಬಂಧುಗಳನ್ನು ಅಗಲಿದ್ದಾರೆ.
ಪತ್ರಕರ್ತರ ಸಂಘದಿಂದ ಸಂತಾಪ:
ನಗರದ ಪತ್ರಿಕಾ ಭವನದಲ್ಲಿ ಮೃತ ಚನ್ನಬಸವಯ್ಯ ಅವರ ಅಗಲಿಕೆ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಂತಾಪ ಸಭೆ ನಡೆಯಿತು.
Also Read: ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ
ಈ ವೇಳೆ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಮಾತನಾಡಿ, ಚನ್ನಬಸಯ್ಯ ಅವರು ಸುದ್ದಿಗಳ ವಿಚಾರದಲ್ಲಿ ಎಂದೂ ಮೈ ಮರೆಯುತ್ತಿರಲಿಲ್ಲ ಎಂದು ಸ್ಮರಿಸಿದರು.
ತಮ್ಮ ವೃತ್ತಿ ಬದುಕಿನ ಜೊತೆಗೆ ಬದುಕಿನಲ್ಲೂ ಸಾರ್ಥಕತೆ ಮೂಡುವ ಕೆಲಸ ಮಾಡಿರುವುದು ಅವರ ಸಾವಿನಲ್ಲಿ ಗೊತ್ತಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ದೇಹದಾನ ಮಾಡಿರುವುದು ಶ್ಲಾಘನೀಯ ಎಂದು ಹೇಳಿದರು.
ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ ಮಾತನಾಡಿ, ಪತ್ರಕರ್ತರ ಸಂಘದ ಸದ್ಯರಾಗಿದ್ದ ಚನ್ನಬಸವಯ್ಯ ಅವರ ಅಗಲಿಕೆ ಎಲ್ಲರಿಗೂ ದುಃಖ ತಂದಿದೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು.
ಹಿರಿಯ ಪತ್ರಕರ್ತ ಶ.ಮಂಜುನಾಥ್ ಮಾತನಾಡಿ, ಕಾನೂನು ಪದವಿ ಪಡೆದು, ಪತ್ರಕೋದ್ಯಮಕ್ಕೂ ಬಂದ ಚನ್ನಬಸವಯ್ಯ ಆರಂಭದಲ್ಲಿ ಬಹಳ ನಿಷ್ಠುರವಾಗಿ ನಡೆದುಕೊಳ್ಳುತ್ತಿದ್ದರು. ಆದರೆ, ಕಳೆದ ಆರು ತಿಂಗಳಿಂದ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿ ಮಾಗಿದಂತೆ ಕಂಡು ಬರುತ್ತಿದ್ದರು ಎಂದು ಸ್ಮರಿಸಿದರು.
Also Read: ರೈಲ್ವೆ ಇಲಾಖೆ | ಮಾಜಿ ಸೈನಿಕರಿಗೆ ಉದ್ಯೋಗಾವಕಾಶ
ಪತ್ರಕರ್ತರಾದ ಎಂ.ಎನ್.ಅಹೋಬಲಪತಿ, ತಿಪ್ಪೇಸ್ವಾಮಿ ನಾಕೀಕೆರೆ, ರಾಜಶೇಖರ್, ಮಾಲತೇಶ್ ಅರಸ್ ಮಾತನಾಡಿದರು.
ಚನ್ನಬಸವಯ್ಯ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಹಿರಿಯ ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖ, ಹರಿಯಬ್ಬೆ ಹೆಂಜಾರಪ್ಪ, ಕುಮಾರಸ್ವಾಮಿ, ವಿನಾಯಕ ತೊಡರನಾಳು, ಎಂ.ಜೆ.ತಿಪ್ಪೇಸ್ವಾಮಿ, ಬ್ರಹ್ಮಗಿರಿ ಶ್ರೀನಿವಾಸ್, ಪ್ರಹ್ಲಾದ್, ಶ್ರೀನಿವಾಸ್, ಗೌನಹಳ್ಳಿ ಗೋವಿಂದಪ್ಪ, ಚಳ್ಳಕೆರೆ ವೀರೇಶ್, ಸುರೇಶ್ ಪಟ್ಟಣ್, ನಾಗೇಶ್, ರಾಘವೇಂದ್ರ ಮತ್ತಿತರರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
