By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ
    ದಂಡದ ಮೊತ್ತದಲ್ಲಿ ಗುತ್ತಿಗೆದಾರರಿಗೆ ರಿಯಾಯಿತಿ | ಕಳಪೆ ಕಾಮಗಾರಿ ಮಾಡಿದವರಿಗೆ ಬ್ಲಾಕ್ ಲಿಸ್ಟ್ | ಜಿಪಂ ಸಿಇಓ ಎಚ್ಚರಿಕೆ
    11 minutes ago
    jobs in chitradurga news
    BRC ಶಾಲಾ ಸಿದ್ಧತಾ ಕೇಂದ್ರಗಳಲ್ಲಿ ಹುದ್ದೆ | ಅರ್ಜಿ ಅಹ್ವಾನ 
    1 hour ago
    ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ “ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ
    ವಚನಕಾರರು ತಮ್ಮ ಸ್ವ-ಅನುಭವದ ಮೂಲಕ ವಚನಗಳನ್ನು ರಚಿಸಿದರು | AC ಡಾ.ಕಾಂತರಾಜ್
    2 hours ago
    ಅಗ್ನಿ ಸುರಕ್ಷತಾ ಪ್ರಾತ್ಯಕ್ಷತೆ ಹಾಗೂ ಅಣಕು ಪ್ರದರ್ಶನ
    ಅಗ್ನಿ ಸುರಕ್ಷತಾ ಪ್ರಾತ್ಯಕ್ಷತೆ ಹಾಗೂ ಅಣಕು ಪ್ರದರ್ಶನ
    2 hours ago
    ಅರ್ಜಿ ಅಹ್ವಾನ
    ನ್ಯಾಯಾಂಗ ತರಬೇತಿಗೆ ಅರ್ಜಿ ಅಹ್ವಾನ 
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 days ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    4 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 month ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 month ago
  • ತಾಲೂಕು
    ತಾಲೂಕುShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 days ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    2 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    3 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    4 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    4 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    4 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 02 | ಕೈಗೊಂಡ ವ್ಯವಹಾರಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 01 | ಉದ್ಯೋಗದಲ್ಲಿ ಕೆಲಸದ ಒತ್ತಡ, ಸ್ನೇಹಿತರೊಂದಿಗೆ ಅನಿರೀಕ್ಷಿತ ಭಿನ್ನಾಭಿಪ್ರಾಯಗಳು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 30 | ಹಠಾತ್ ಆರ್ಥಿಕ ಲಾಭ, ಆಧ್ಯಾತ್ಮಿಕ ಚಿಂತೆಗಳು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 29 | ಉದ್ಯೋಗದಲ್ಲಿ ಕೆಲಸದ ಒತ್ತಡ, ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 28 | ಆಕಸ್ಮಿಕ ಧನಲಾಭದ ಸೂಚನೆ, ಅನಿರೀಕ್ಷಿತ ಪ್ರಯಾಣ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆ | 10 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    4 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜುಲೈ 01 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 29 | ಮೆಕ್ಕೆಜೋಳ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 25 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    4 days ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    2 weeks ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 week ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 weeks ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 month ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 days ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    3 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 month ago
  • Life Style
    Life StyleShow More
    These yoga poses help keep your heart healthy
    ಈ ಯೋಗಾಸನಗಳು ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತವೆಯಂತೆ
    13 hours ago
    donating old clothes
    ಹಳೆಯ ಬಟ್ಟೆಗಳನ್ನು ದಾನ ಮಾಡುವ ಮೊದಲು ಈ ನಿಯಮಗಳನ್ನು ತಿಳಿದುಕೊಳ್ಳಿ
    2 days ago
    mango and milk
    ಮಾವು ಮತ್ತು ಹಾಲನ್ನು ಒಟ್ಟಿಗೆ ಸೇವಿಸುವುದು ಒಳ್ಳೆಯದೇ?
    2 days ago
    vegetables
    ಈ ತರಕಾರಿಗಳನ್ನು ಹಸಿಯಾಗಿ ತಿನ್ನುವ ಬದಲು ಬೇಯಿಸಿ ತಿಂದರೆ ಹೆಚ್ಚು ಪ್ರಯೋಜನಕಾರಿಯಂತೆ
    3 days ago
    oga poses will make you look young even after 40
    ಈ ಯೋಗಾಸನಗಳು 40 ವರ್ಷದ ನಂತರವೂ ನೀವು ಯಂಗ್ ಆಗಿ ಕಾಣುವಂತೆ ಮಾಡುತ್ತದೆಯಂತೆ
    3 days ago
Reading: ಪತ್ರಕರ್ತ ಓಂಕಾರಮೂರ್ತಿಗೆ ರಾಜ್ಯಮಟ್ಟದ ಪ್ರಶಸ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪತ್ರಕರ್ತ ಓಂಕಾರಮೂರ್ತಿಗೆ ರಾಜ್ಯಮಟ್ಟದ ಪ್ರಶಸ್ತಿ

News Desk Chitradurga News
Last updated: 1 July 2026 08:32
News Desk Chitradurga News
2 days ago
Share
ಪತ್ರಕರ್ತ ಓಂಕಾರಮೂರ್ತಿ
ಪತ್ರಕರ್ತ ಓಂಕಾರಮೂರ್ತಿ
SHARE

CHITRADURGA NEWS | 01 JULY 2026

ಚಿತ್ರದುರ್ಗ: ಕೈಯಲ್ಲಿ ಬೆಣ್ಣೆ ಇಟ್ಟುಕೊಂಡು ಊರೆಲ್ಲಾ ಹುಡುಕಿದರು, ಹಿತ್ತಲಗಿಡ ಮದ್ದಲ್ಲ ಹೀಗೆ ಅನೇಕ ಮಾತುಗಳಿಗೆ ಚಿತ್ರದುರ್ಗದ ನೆಲವನ್ನು ಸಾಕ್ಷಿಕರಿಸುತ್ತದೆ.

ಇದನ್ನೂ ಓದಿ: SIR | ಜಿಲ್ಲೆಯಾದ್ಯಂತ 32,797 ಗಣತಿ ನಮೂನೆಗಳ ವಿತರಣೆ | ಡಿಸಿ 

ಈ ನೆಲದ ದಿಗ್ಗಜ ಸಾಹಿತಿ, ನಾಟಕಕಾರರು, ಬರಹಗಾರರನ್ನು ಸ್ಮರಿಸುವುದಕ್ಕಿಂತಲೂ ನೆರೆಹೊರೆಯ ಜನರನ್ನು ಪ್ರೀತಿಯಿಂದ ಅಪ್ಪಿಕೊಳ್ಳುವ ಹೃದಯವಂತರು ಕೋಟೆನಾಡಿನ ಜನ.

ನಮ್ಮ ನೆಲದ ಪ್ರತಿಭೆಗಳನ್ನು ಹೆಕ್ಕೆ ತೆಗೆಯುವಲ್ಲಿ ಅಷ್ಟಾಗಿ ಆಸಕ್ತಿ ತೋರುತ್ತಿಲ್ಲವೆಂಬುದಕ್ಕೆ ನಮ್ಮೊಂದಿಗೆ ಸದಾ ಹೆಜ್ಜೆ ಹಾಕುವ ಕೆ.ಪಿ.ಓಂಕಾರಮೂರ್ತಿಯಲ್ಲಿ ಕಥೆಗಾರನಿದ್ದಾನೆಂಬುದನ್ನು ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಪರಿಚಯಿಸಿಕೊಟ್ಟಿರುವುದು.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಚಿತ್ರದುರ್ಗದ ಪ್ರಜಾವಾಣಿ ಸಹಾಯಕ ವರದಿಗಾರ ಕೆ.ಪಿ.ಓಂಕಾರಮೂರ್ತಿ ಸುದ್ದಿಮನೆಯ ‘ಡೆಡ್‍ಲೈನ್’ ಒತ್ತಡವನ್ನೇ ಕಥೆಯಾಗಿಸಿ, ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ಗೆದ್ದು ಮಧ್ಯಕರ್ನಾಟಕ ಪತ್ರಿಕಾ ಲೋಕದ ಚರ್ಚೆಯ ಕೇಂದ್ರಬಿಂದು ಆಗಿದ್ದಾರೆ. 

ಇದನ್ನೂ ಓದಿ: ಮಾವು ಮತ್ತು ಹಾಲನ್ನು ಒಟ್ಟಿಗೆ ಸೇವಿಸುವುದು ಒಳ್ಳೆಯದೇ?

ರಾಯಚೂರು ರಿಪೋರ್ಟರ್ಸ್ ಗಿಲ್ಡ್‍ನ ಬೆಳ್ಳಿ ಮಹೋತ್ಸವದ ಅಂಗವಾಗಿ ಆಹ್ವಾನಿಸಲಾಗಿದ್ದ ರಾಜ್ಯಮಟ್ಟದ ಕಥೆ, ಕವನ ಸ್ಪರ್ಧೆಯಲ್ಲಿ ಅವರ ‘ಡೆಡ್‍ಲೈನ್’ ಕಥೆ ಪ್ರಥಮ ಸ್ಥಾನ ಪಡೆದು 10 ಸಾವಿರ ರೂ. ನಗದು ಮತ್ತು ಪ್ರಶಸ್ತಿಗೆ ಪಾತ್ರವಾಗಿದೆ.

ನಾಯಕನಹಟ್ಟಿ ಸಮೀಪದ ಗೌರಿಪುರದ ಮಣ್ಣಿನಲ್ಲಿ ಹುಟ್ಟಿ ಅಕ್ಷರದ ಬೆನ್ನತ್ತಿದ ಓಂಕಾರಮೂರ್ತಿ ಅವರ ಪತ್ರಿಕೋದ್ಯಮ ಪಯಣವೇ ಒಂದು ರೋಚಕ ಕಾದಂಬರಿ. ಚಿತ್ರದುರ್ಗದ ‘ಪ್ರಜಾಪ್ರಗತಿ’ಯಿಂದ ಪತ್ರಿಕಾ ಬದುಕು ಆರಂಭಿಸಿದ ಅವರು, ಚಿತ್ರದುರ್ಗ, ಬೆಂಗಳೂರಲ್ಲಿ ವಿಜಯವಾಣಿ, ಮೈಸೂರು, ದಾವಣಗೆರೆಯಲ್ಲಿ ವಿಜಯಕರ್ನಾಟಕ ಪತ್ರಿಕೆಯಲ್ಲಿ ವರದಿಗಾರರಾಗಿ ಗಮನಸೆಳೆಯುವ ರೀತಿ ಕಾರ್ಯನಿರ್ವಹಿಸಿದ್ದರು. 

ಪ್ರಸ್ತುತ ಚಿತ್ರದುರ್ಗದಲ್ಲಿ ಪ್ರಜಾವಾಣಿ ದಿನಪತ್ರಿಕೆಯಲ್ಲಿ ಸಹಾಯಕ ವರದಿಗಾರರಾಗಿ ಜನಮೆಚ್ಚಿದ ಬರಹಗಾರರಾಗಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ರಂಗಾಯಣ ಕಲಾವಿದರಿಂದ ಓಟ ನಾಟಕ ಪ್ರದರ್ಶನ

ವಿಜಯವಾಣಿಯ ಅಂಗಳದಲ್ಲಿ ಪಳಗಿ, ಮೈಸೂರು ಮತ್ತು ದಾವಣಗೆರೆಯ ವಿಜಯಕರ್ನಾಟಕದ ಪುಟಗಳಲ್ಲಿ ಅಕ್ಷರದ ಬೆಳೆ ತೆಗೆದು, ಈಗ ತಾಯಿ ಜಿಲ್ಲೆ ಚಿತ್ರದುರ್ಗಕ್ಕೆ ಮರಳಿ ಪ್ರಜಾವಾಣಿಯ ಮೂಲಕ ಜನಸಾಮಾನ್ಯರ ದನಿಯಾಗಿದ್ದಾರೆ. ಒಂದೇ ಜಿಲ್ಲೆಯಲ್ಲಿ ಮೂರು ರಾಜ್ಯಮಟ್ಟದ ದಿನಪತ್ರಿಕೆಗಳಲ್ಲಿ ವರದಿಗಾರನಾಗಿ ದುಡಿದಿರುವುದು ವಿಶೇಷ.

ಪೂರ್ಣಚಂದ್ರ ತೇಜಸ್ವಿ ಅವರ ಕಾಡಿನ ಒಡಲು ಹೊಕ್ಕು ಬಂದಿರುವ ಓಂಕಾರಮೂರ್ತಿ, ವರದಿಗಾರಿಕೆಗೂ ಸಾಹಿತ್ಯದ ಸೊಬುಗು ತುಂಬಿದವರು. ಕರ್ವಾಲೊ ಮತ್ತು ಜುಗಾರಿ ಕ್ರಾಸ್ ಅವರ ಕೈಬಿಡದ ಸಂಗಾತಿಗಳು. ತೇಜಸ್ವಿ ಅವರಿಂದ ಪ್ರಭಾವಿತರಾಗಿರುವ ಅವರು, ನೇರ, ನಿಷ್ಠುರ ಮತ್ತು ಸರಳ ನಿರೂಪಣೆ ಮೂಲಕ ವರದಿ ಕಟ್ಟಿಕೊಡುವಲ್ಲಿ ಮುಂಚೂಣಿ.

ಮಾನವೀಯತೆಯೇ ಅವರ ವರದಿಗಳ ಜೀವಾಳ. ಪತ್ರಿಕಾ ವೃತ್ತಿಯಲ್ಲಿ ಬಿಡುವು ಸಿಕ್ಕಾಗಲೆಲ್ಲ ಪುಸ್ತಕದೊಳಗೆ ಮುಳುಗುವ ಅವರನ್ನು ನೋಡಿದರೆ ನಡೆಯುವ ಗ್ರಂಥಾಲಯ ಎನಿಸುತ್ತದೆ. ನಿರಂತರ ಓದು ಮತ್ತು ಬರಹವೇ ಅವರನ್ನು ಸಾಹಿತ್ಯ ವಲಯದಲ್ಲಿ ಚಿರಪರಿಚಿತರನ್ನಾಗಿ ಮಾಡಿದೆ.

ಇದೀಗ ಪ್ರಶಸ್ತಿ ಗೆದ್ದ ‘ಡೆಡ್‍ಲೈನ್’ ಕಥೆ, ಸುದ್ದಿಮನೆಯೊಳಗಿನ ವರದಿಗಾರನ ಮಾನಸಿಕ ತುಮುಲ, ಸತ್ಯ ಮತ್ತು ಸುಳ್ಳಿನ ನಡುವಿನ ಸಂಘರ್ಷ, ಸಂಪಾದಕೀಯ ಒತ್ತಡಗಳ ನಡುವೆ ಸಿಕ್ಕಿಬಿದ್ದ ಪತ್ರಕರ್ತನ ಅಂತರಂಗದ ದನಿಯನ್ನು ದಾಖಲಿಸಿದೆ. ತೀರ್ಪುಗಾರರಾಗಿದ್ದ ಕಥೆಗಾರ ಮಹಾಂತೇಶ ನವಲಕಲ್ ಅವರು ವರದಿಗಾರಿಕೆಯ ಒಳಸುಳಿಗಳನ್ನು ಕಥೆಯಾಗಿಸಿರುವ ಪರಿ ಅನನ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅರಿವು ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ

ಕವನ ವಿಭಾಗದಲ್ಲಿ ಮೈಸೂರಿನ ದಿ ಟೈಮ್ಸ್ ಆಫ್ ಇಂಡಿಯಾ ವರದಿಗಾರ ಎಂ.ಶ್ರೀನಿವಾಸ ಅವರ ಮುಸ್ಸಂಜೆಯ ಕವನ ಪ್ರಥಮ ಸ್ಥಾನ ಪಡೆದಿದೆ. ಆಗಸ್ಟ್ ಕೊನೆಯ ವಾರ ರಾಯಚೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಬಹುಮಾನ ವಿತರಣೆಯಾಗಲಿದೆ. ಅಂದು ಓಂಕಾರಮೂರ್ತಿ ಅವರೊಂದಿಗೆ ಮೈಸೂರು, ಚಿತ್ರದುರ್ಗ, ದಾವಣಗೆರೆ, ಬೆಂಗಳೂರಿನ ಪತ್ರಕರ್ತರು ಜೊತೆಯಾಗಲಿದ್ದಾರೆ.

ವರದಿಗಾರಿಕೆ ಮತ್ತು ಸಾಹಿತ್ಯವನ್ನು ಎರಡು ಕಣ್ಣುಗಳಂತೆ ಕಾಣುವ ಓಂಕಾರಮೂರ್ತಿ, ಕೇವಲ ವರದಿಗಾರರಲ್ಲ. ಅಕ್ಷರದ ಮೂಲಕ ಸಮಾಜ ತಿದ್ದುವ ಕಾಯಕಯೋಗಿ ಆಗಿದ್ದಾರೆ. ಗೌರಿಪುರದ ಹಳ್ಳಿಯಿಂದ ಹೊರಟು ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿರುವ ಈ ಕಲಂ ವೀರನಿಗೆ ಚಿತ್ರದುರ್ಗ ಸೇರಿ ರಾಜ್ಯದ ವಿವಿಧೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsJournalist OmkaramurthyState Level Awardಚಿತ್ರದುರ್ಗಚಿತ್ರದುರ್ಗ ನ್ಯೂಸ್ಪತ್ರಕರ್ತ ಓಂಕಾರಮೂರ್ತಿರಾಜ್ಯಮಟ್ಟದ ಪ್ರಶಸ್ತಿ
Share This Article
Facebook Email Print
Previous Article ಜಿಲ್ಲಾಧಿಕಾರಿ ಟಿ.ವೆಂಕಟೇಶ್ SIR | ಜಿಲ್ಲೆಯಾದ್ಯಂತ 32,797 ಗಣತಿ ನಮೂನೆಗಳ ವಿತರಣೆ | ಡಿಸಿ 
Next Article donating old clothes ಹಳೆಯ ಬಟ್ಟೆಗಳನ್ನು ದಾನ ಮಾಡುವ ಮೊದಲು ಈ ನಿಯಮಗಳನ್ನು ತಿಳಿದುಕೊಳ್ಳಿ
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ
ದಂಡದ ಮೊತ್ತದಲ್ಲಿ ಗುತ್ತಿಗೆದಾರರಿಗೆ ರಿಯಾಯಿತಿ | ಕಳಪೆ ಕಾಮಗಾರಿ ಮಾಡಿದವರಿಗೆ ಬ್ಲಾಕ್ ಲಿಸ್ಟ್ | ಜಿಪಂ ಸಿಇಓ ಎಚ್ಚರಿಕೆ
ಮುಖ್ಯ ಸುದ್ದಿ
jobs in chitradurga news
BRC ಶಾಲಾ ಸಿದ್ಧತಾ ಕೇಂದ್ರಗಳಲ್ಲಿ ಹುದ್ದೆ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ “ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ
ವಚನಕಾರರು ತಮ್ಮ ಸ್ವ-ಅನುಭವದ ಮೂಲಕ ವಚನಗಳನ್ನು ರಚಿಸಿದರು | AC ಡಾ.ಕಾಂತರಾಜ್
ಮುಖ್ಯ ಸುದ್ದಿ
ಅಗ್ನಿ ಸುರಕ್ಷತಾ ಪ್ರಾತ್ಯಕ್ಷತೆ ಹಾಗೂ ಅಣಕು ಪ್ರದರ್ಶನ
ಅಗ್ನಿ ಸುರಕ್ಷತಾ ಪ್ರಾತ್ಯಕ್ಷತೆ ಹಾಗೂ ಅಣಕು ಪ್ರದರ್ಶನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up